ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.
ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ವಾಹನದಲ್ಲಿ ತುಂಬಿದ್ದ ಹಣ್ಣುಗಳ ಅಡಿಯಲ್ಲಿ ಬಚ್ಚಿಟ್ಟಿದ್ದ ಗೋವಿನ ಮಾಂಸ ಪತ್ತೆಯಾಗಿದೆ. ಇದನ್ನೂ ಓದಿ: ಕಾರವಾರ ಸಮುದ್ರದ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ!
ಗೂಡ್ಸ್ ವಾಹನದಲ್ಲಿ ಗೋವಿನ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೌಲಾ ಅಲಿ ಬಾಷಾ ಸಾಬ್ ತೋಟದ್ ಹಾನಗಲ್, ಜೀಲಾನಿ ಗೌಸ್ ಮೊಹಿದ್ದೀನ್ ಹಾಗೂ ಭಟ್ಕಳದ ಮುಝಾಫರ್ ಎನ್ನುವವರನ್ನು ಬಂಧಿಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.