Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹದಗೆಟ್ಟ ನಗರಸಭೆ ರಸ್ತೆ- ಅನಾರೋಗ್ಯ, ತುರ್ತು ಸ್ಥಿತಿಯಲ್ಲಿ ಜೋಳಿಗೆಯೇ ಗತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಹದಗೆಟ್ಟ ನಗರಸಭೆ ರಸ್ತೆ- ಅನಾರೋಗ್ಯ, ತುರ್ತು ಸ್ಥಿತಿಯಲ್ಲಿ ಜೋಳಿಗೆಯೇ ಗತಿ

Karnataka

ಹದಗೆಟ್ಟ ನಗರಸಭೆ ರಸ್ತೆ- ಅನಾರೋಗ್ಯ, ತುರ್ತು ಸ್ಥಿತಿಯಲ್ಲಿ ಜೋಳಿಗೆಯೇ ಗತಿ

Public TV
Last updated: January 5, 2021 9:01 pm
Public TV
Share
2 Min Read
kwr road
SHARE

ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿರುವ ಗುಡ್ಡೇಹಳ್ಳಿ ಅಧಿಕಾರಿಗಳ, ಜನ ಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಮೂಲ ಸೌಕರ್ಯವಿಲ್ಲದೆ ಅನಾರೋಗ್ಯ ಪೀಡಿತ ರೋಗಿಗಳನ್ನು ಕರೆದೊಯ್ಯಲು ಜೋಳಿಗೆ ಹೊತ್ತು ಜನ ಪರದಾಡುತಿದ್ದಾರೆ.

ಈ ಗ್ರಾಮಕ್ಕೆ ಸಂಪರ್ಕಿಸುವ ದಾರಿ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ಸಾಧ್ಯವಿಲ್ಲದ ಕಾರಣ ಆಕಸ್ಮಿಕವಾಗಿ ಅನಾರೋಗ್ಯಕ್ಕೊಳಗಾಗುವ ಜನರನ್ನು ಬೆಡ್‍ಶೀಟ್ ಜೋಳಿಗೆಯಲ್ಲಿಯೇ ಹೊತ್ತು ತುರ್ತು ಚಿಕಿತ್ಸೆಗೆ ಕರೆದೊಯ್ಯಬೇಕಾದ ಅನಿವಾರ್ಯತೆ ಇದೆ. ಇಂದು ಮಧ್ಯಾಹ್ನ ಅನಾರೋಗ್ಯಕ್ಕೆ ಒಳಗಾದ 64 ವರ್ಷದ ವೃದ್ಧ ಮಹಿಳೆಯೋಬ್ಬರನ್ನು ತುರ್ತು ಚಿಕಿತ್ಸೆಗೆ ಜೋಳಿಗೆಯಲ್ಲಿ ಹೊತ್ತು ತಂದು, ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಆಕೆಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ.

WhatsApp Image 2021 01 05 at 7.33.34 PM

ಎರಡು ದಿನ ಮುಂಚೆ ಅನಾರೋಗ್ಯದಿಂದ ಒದ್ದಾಡುತ್ತಿದ್ದ 23 ವರ್ಷದ ಯುವಕನೊಬ್ಬನನ್ನು ಇದೇ ರೀತಿ ಜೋಳಿಗೆಯಲ್ಲಿ ಹೊತ್ತು ತಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹೀಗೆ ವಯೋವೃದ್ಧರು ಸೇರಿದಂತೆ, ಯುವಕರು, ಮಹಿಳೆಯರು, ಮಕ್ಕಳು ಅನಾರೋಗ್ಯದಂತಹ ತುರ್ತು ಸ್ಥಿತಿಯಲ್ಲಿ ಜೋಳಿಗೆಯಲ್ಲಿಯೇ ಮಲಗಿಸಿ ಹೊತ್ತು ತರುವ ಅನಿವಾರ್ಯ ಸ್ಥಿತಿ ಇದೆ. ಈ ಪ್ರದೇಶ ನಗರಸಭೆ ವ್ಯಾಪ್ತಿಗೆ ಬಂದರೂ ಯಾವುದೇ ರೀತಿಯ ಮೂಲ ಸೌಕರ್ಯವನ್ನು ಒದಗಿಸಲಾಗಿಲ್ಲ.

ಪ್ರತಿ ದಿನ ನಗರಕ್ಕೆ ಬರಬೇಕೆಂದರೆ ಇಲ್ಲಿನ ಜನ ನಡೆದುಕೊಂಡೇ ಬರಬೇಕು. ಯಾವುದೇ ವಾಹನ ಸೌಕರ್ಯವಾಗಲಿ, ನಗರ ಸಾರಿಗೆಯಾಗಲಿ ಇಲ್ಲಿ ಇಲ್ಲ. ಇದ್ದ ಚಿಕ್ಕ ರಸ್ತೆಯೂ ಮಳೆಯಿಂದ ಕೊಚ್ಚಿಹೋಗಿದ್ದು, ಜನ ನರಳಾಟದ ಬದುಕು ನಡೆಸುವಂತಾಗಿದೆ. ನಗರಸಭೆಯವರು ಆದಷ್ಟು ಶೀಘ್ರ ಇಲ್ಲಿನ ರಸ್ತೆ ಸರಿಪಡಿಸಿ ಕೊಡುವಂತೆ ಅಳಲು ತೋಡಿಕೊಳ್ಳುತ್ತಾರೆ.

WhatsApp Image 2021 01 05 at 8.47.31 PM

ನಗರದ ಬಿಣಗಾ ಹಾಗೂ ಹೈಚರ್ಚ್ ಸಮೀಪದಿಂದ ನೇರವಾಗಿ ಗುಡ್ಡೇಹಳ್ಳಿಗೆ ಕಾಡು-ಮೇಡುಗಳಿಂದ ಸುಮಾರು 8 ಕಿ.ಮೀ. ದೂರದ ಕಚ್ಚಾ ರಸ್ತೆ ಸಾಗಿದೆ. ಅಲ್ಲಿನ ಜನರು ಇದೇ ರಸ್ತೆಯ ಮೂಲಕವೇ ದಿನನಿತ್ಯದ ಕೆಲಸಕಾರ್ಯಕ್ಕಾಗಿ ಕಾರವಾರ-ಅಂಕೋಲಾ ಕಡೆಗೆ ಹೋಗಿ ಬರಬೇಕು. ಆದರೆ ಈ ರಸ್ತೆ ಮಾತ್ರ ತೀವ್ರ ಹದಗೆಟ್ಟಿದೆ. ಈ ರಸ್ತೆ ಮೂಲಕ ಹೋಗಿ ಬರಲು 17 ರಿಂದ 18 ಕಿಮೀ. ದೂರ ಕ್ರಮಿಸಬೇಕಾಗಿದೆ. ವಾಹನ ಸಂಚಾರ ಅಸಾಧ್ಯವಾಗಿರುವುದರಿಂದ ಜನರು ನಿತ್ಯವೂ ನಡೆದುಕೊಂಡೇ ಸಾಗಬೇಕು.

WhatsApp Image 2021 01 05 at 8.49.21 PM

ಪ್ರವಾಸಿಗರ ಮೆಚ್ಚಿನ ತಾಣ ಗುಡ್ಡೇಹಳ್ಳಿ
ನಗರಸಭೆ ವ್ಯಾಪ್ತಿಯ ಬಿಣಗಾದ 31 ನೇ ವಾರ್ಡಿಗೆ ಗುಡ್ಡೇಹಳ್ಳಿ ಒಳಪಡುತ್ತದೆ. ಚಿಕ್ಕ ಹಳ್ಳಿಯಾಗಿರುವುದರಿಂದ ಚಾರಣ ಪ್ರಿಯರ ಮೆಚ್ಚಿನ ತಾಣವಾಗಿ ಮಾರ್ಪಟ್ಟಿದೆ. ಹೊರ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಎತ್ತರದ ಬೆಟ್ಟದ ಬಂಡೆಗಲ್ಲಿನ ಮೇಲೆ ನಿಂತು ಅಂಕೋಲಾ, ಗೋಕರ್ಣ ಮುಂತಾದ ಊರುಗಳನ್ನು ಮತ್ತು ಹಸಿರಿನಿಂದ ಕೂಡಿದ ಪ್ರಾಕೃತಿಕ ಸೌಂದರ್ಯ ಹಾಗೂ ಕಡಲಿನ ಸೌಂದರ್ಯ ರಾಶಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಸಮುದ್ರ ಮಟ್ಟದಿಂದ ಬಹಳ ಎತ್ತರದಲ್ಲಿರುವ ಈ ತಂಪಾದ ಹಳ್ಳಿಯೇ ಬ್ರಿಟೀಷ್ ಅಧಿಕಾರಿಗಳು ಬೇಸಿಗೆ ಕಳೆಯುವ ಇಷ್ಟದ ತಾಣವಾಗಿತ್ತು.

WhatsApp Image 2021 01 05 at 8.49.22 PM

ಇಲ್ಲಿ ಕಾಲ ಕಳೆಯಲು ಬ್ರಿಟೀಷರು ಕಟ್ಟಿದ ಬಂಗಲೆಗಳ ಅಡಿಪಾಯದ ಕುರುಹುಗಳು ಈಗಲೂ ಕಾಣ ಸಿಗುತ್ತವೆ. ಇಲ್ಲಿಗೆ ಬರಲು ಬ್ರಿಟೀಷರು ಇದೇ ಕಾಲು ದಾರಿಯನ್ನು ಅವಲಂಬಿಸಿಕೊಂಡಿದ್ದರು. ಕುದುರೆ ಸವಾರಿ ಮೂಲಕ ಬ್ರಿಟೀಷ್ ಅಧಿಕಾರಿಗಳು ಇಲ್ಲಿಗೆ ಬರುತ್ತಿದ್ದರು ಎಂದು ಹಿರಿಯರು ಹೇಳುತ್ತಾರೆ. ಆದರೆ ನಗರಸಭಾ ವ್ಯಾಪ್ತಿಯಲ್ಲಿರುವ ಈ ಹಳ್ಳಿ ಇಂದಿಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.

TAGGED:GuddehallikarwarMunicipal CorporationofficersPublic TVroadಅಧಿಖಾರಿಗಳುಕಾರವಾರಗುಡ್ಡೇನಹಳ್ಳಿನಗರಸಭೆಪಬ್ಲಿಕ್ ಟಿವಿರಸ್ತೆ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

Shubman Gill 2
Cricket

ಗಿಲ್‌, ಪಾಂಡ್ಯ ಈಸ್‌ ಬ್ಯಾಕ್‌ – ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಬಲಿಷ್ಠ ತಂಡ ರೆಡಿ

Public TV
By Public TV
18 minutes ago
panipat women
Crime

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

Public TV
By Public TV
52 minutes ago
chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
2 hours ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
2 hours ago
MP RENUKACHARYA
Bengaluru City

ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

Public TV
By Public TV
2 hours ago
Mandya
Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?