ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿಯಿಂದ 14.25 ಲಕ್ಷ ರೂ. ಪರಿಹಾರ

Public TV
1 Min Read
HANUMANTHU

ರಾಮನಗರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ನಮ್ಮ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿ ವತಿಯಿಂದ ಪರಿಹಾರ ಚೆಕ್ ನೀಡಲಾಯ್ತು. 14 ಲಕ್ಷದ 25 ಸಾವಿರ ರೂಪಾಯಿಯ ಪರಿಹಾರ ಚೆಕ್ ಹನುಮಂತು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

RMG 1

ಪಬ್ಲಿಕ್ ಟಿವಿ ಆಡಳಿತ ಮಂಡಳಿಯು ಈ ಹಿಂದೆ ಘೋಷಿಸಿದಂತೆ 10 ಲಕ್ಷ ರೂಪಾಯಿ ಹಾಗೂ ಪಬ್ಲಿಕ್ ಟಿವಿ ಸಿಬ್ಬಂದಿಯ ಒಂದು ದಿನದ ಸಂಬಳ ರೂಪದಲ್ಲಿ ಸಂಗ್ರಹವಾಗಿದ್ದ 4 ಲಕ್ಷದ 25 ಸಾವಿರ ರೂಪಾಯಿ ಸೇರಿ ಒಟ್ಟು 14 ಲಕ್ಷದ 25 ಸಾವಿರ ರೂಪಾಯಿ ಆಗಿತ್ತು.

RMG 2

ಹನುಮಂತು ಅವರ ಪತ್ನಿಗೆ 11 ಲಕ್ಷದ 25 ಸಾವಿರ ರೂಪಾಯಿ ಚೆಕ್ ಹಾಗೂ ಹನುಮಂತು ಅವರ ತಾಯಿಗೆ 3 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯ್ತು. ಪಬ್ಲಿಕ್ ಟಿವಿ ಸಿಇಓ ಅರುಣ್ ಕುಮಾರ್, ಸಿಒಒ ಹರೀಶ್, ಕಾರ್ಯಕಾರಿ ಸಂಪಾದಕ ದಿವಾಕರ್ ಹಾಗೂ ಹೆಚ್.ಆರ್. ವಿಭಾಗದ ಮುಖ್ಯಸ್ಥರಾದ ಶಂಕರ್ ಈ ಸಂದರ್ಭದಲ್ಲಿ ಹಾಜರಿದ್ದರು.

ಏಪ್ರಿಲ್ 21 ರಂದು ರಾಮನಗರ ಜಿಲ್ಲಾ ಕಾರಾಗೃಹದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಹನುಮಂತು ವಿಧಿವಶರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *