Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
Last updated: April 27, 2026 3:44 pm
Public TV
Share
3 Min Read
Panchamasali Peetha 1
SHARE

* 2008 ರಿಂದ 2026ರವರೆಗಿನ ಲೆಕ್ಕ ನೀಡಿದ ಬಿ.ಸಿ ಉಮಾಪತಿ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ (Panchamasali Peetha) ಆವರಣದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಪೀಠದ ಟ್ರಸ್ಟ್‌ನ ಪ್ರಧಾನ ಧರ್ಮಧರ್ಶಿ ಬಿ.ಸಿ ಉಮಾಪತಿ ಲೆಕ್ಕ ಮಂಡನೆ ಸಂದರ್ಭದಲ್ಲಿ ಭಾರೀ ಗಲಾಟೆಯಾಗಿದೆ.

ಸ್ವಾಮೀಜಿ (Vachananda Swamiji) ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದಿಸಿದ್ದಾರೆ. ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್‌ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್ ಬೆಂಬಲಿಗರು ನಿಂದಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ವಾಮೀಜಿ ಬೆಂಬಲಿಗರು ವಿಜಯನಗರ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಶಿವನಗೌಡ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

vachananda swamiji

ಗಲಾಟೆ, ಧಿಕ್ಕಾರ ಘೋಷಣೆ ಮಧ್ಯೆ ಪ್ರಧಾನ ಧರ್ಮದರ್ಶಿ ಉಮಾಪತಿ ಲೆಕ್ಕ ಕೊಟ್ಟಿದ್ದಾರೆ. 2008 ರಿಂದ 2026ರವರೆಗಿನ ಲೆಕ್ಕಾಚಾರವನ್ನು ತೆರೆದಿಟ್ಟಿದ್ದಾರೆ. ಪೀಠದ ಟ್ರಸ್ಟ್‌ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ಭಕ್ತರು ನೀಡಿದ ಕಾಣಿಕೆ, ಸರ್ಕಾರದ ಅನುದಾನದ ಬಗ್ಗೆ ಮಾಹಿತಿ ನೀಡಿದರು. ಕಳೆದ 2008 ರಿಂದ 2026ರವರೆಗೆ 27 ಕೋಟಿ 61 ಲಕ್ಷ 51 ಸಾವಿರದ 518 ರೂ. ಜಮಾ ಆಗಿದೆ. ಸರ್ಕಾರದ ಅನುದಾನ ಸೇರಿ 27 ಕೋಟಿ 61 ಲಕ್ಷ ರೂ. ಅನುದಾನ ಜಮಾ ಆಗಿದೆ ಎಂದು ಮಾಹಿತಿ ನೀಡಿದರು.

ಇದಿಷ್ಟೇ ಅಲ್ಲದೇ ಮಠ ಬೆಳೆದು ಬಂದ ಹಾದಿಯ ಬಗ್ಗೆ ಬಿ.ಸಿ ಉಮಾಪತಿ ವಿವರಿಸಿದರು. ಮಾಜಿ ಸಚಿವ ದಿವಂಗತ ಶಿವಪ್ಪನವರು ತೆಗೆದುಕೊಳ್ಳಬೇಕು ಎಂದುಕೊಂಡಿದ್ದ ಜಮೀನನ್ನು ಹಣ ಕೊಟ್ಟು ಮಠಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಶಿವಪ್ಪನವರೇ ದಾನ ಕೊಟ್ಟಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ದಾನ ನೀಡಿಲ್ಲ ಅವರು ತೆಗೆದುಕೊಳ್ಳಬೇಕಿದ್ದ ಜಮೀನನ್ನು ನಾವು ಹಣ ಕೊಟ್ಟು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: `ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Panchamasali Peetha

ಈ ಲೆಕ್ಕ ಕೊಡಿ ಅಭಿಯಾನ ಸ್ವಾಮೀಜಿಗಳ ತಪ್ಪನ್ನು ಮರೆಮಾಚಿಸುವ ಅಭಿಯಾನವಾಗಿದೆ. ಇಷ್ಟು ವರ್ಷಗಳ ಕಾಲ ಲೆಕ್ಕ ಕೇಳೋಕೆ ಏನ್ ಆಗಿತ್ತು? ಪ್ರತಿ ವರ್ಷ ಕೂಡ ಲೆಕ್ಕವನ್ನು ಕೊಡುವ ಕೆಲಸ ಮಾಡುತ್ತೇವೆ ಎಂದು ಇದೇ ವೇಳೆ ಅವರು ತೀವ್ರವಾಗಿ ಪ್ರತಿಕ್ರಿಯಿಸಿದರು.

ಇನ್ನೊಂದೆಡೆ ಲೆಕ್ಕಪತ್ರ ಮಂಡನೆ ಮಾಡುವುದಕ್ಕೆ ವಚನಾನಂದ ಸ್ವಾಮೀಜಿ ಬೆಂಬಲಿಗರ ವಿರೋಧ ವ್ಯಕ್ತಪಡಿಸಿದರು. ತರಾತುರಿಯಲ್ಲಿ ಲೆಕ್ಕ ಪತ್ರ ಮಂಡನೆ ಮಾಡೋದು ಸಮಂಜಸವಲ್ಲ. ಮೂರು ತಿಂಗಳ ಕಾಲಾವಕಾಶ ಪಡೆದು ವಿಸ್ತಾರವಾದ ಲೆಕ್ಕಪತ್ರ ವರದಿ ಮಂಡನೆ ಮಾಡಬೇಕು. ಮೊದಲು ಪೀಠಕ್ಕೆ ಕಾಣಿಕೆ ನೀಡಿದ ಭಕ್ತರ ಪಟ್ಟಿ ಬಿಡುಗಡೆ ಮಾಡಬೇಕು. ನಂತರ ಸರ್ಕಾರದಿಂದ ಬಂದ ಅನುದಾನದ ಪಿನ್ ಟೂ ಪಿನ್ ಲೆಕ್ಕಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಲೆಕ್ಕ ಕೊಡುವ ಮೊದಲು ಮಠದಲ್ಲಿ ಗಲಾಟೆ ನಡೆಯಿತು. ವಚನಾನಂದ ಶ್ರೀಗಳಿದ್ದ ಮಠಕ್ಕೆ ಟ್ರಸ್ಟಿಗಳು ಎಂಟ್ರಿ ಕೊಡುತ್ತಿದ್ದಂತೆ ಭಾರೀ ಹೈಡ್ರಾಮಾ ನಡೆಯಿತು. ವಚನಾನಂದ ಸ್ವಾಮಿ ಹಾಗೂ ಬಿ.ಸಿ ಉಮಾಪತಿ ಮುಖಾಮುಖಿ ಆದರು. ಟ್ರಸ್ಟಿಗಳನ್ನು ಕಂಡ ಸ್ವಾಮೀಜಿ ಬೆಂಬಲಿಗರು ಕಳ್ಳ ಕಳ್ಳ ಎಂದು ಕೂಗಿದರು. ಮಠದ ಒಳಗೆ ಮಹಂತ ಸ್ವಾಮಿ ಪುತ್ಥಳಿಗೆ ಕೈ ಮುಗಿದ ಬಿಸಿ ಉಮಾಪತಿ ಹಾಗೂ ತಂಡ ಮುಂದೆ ಸಾಗಿತು. ಈ ವೇಳೆ ಮಹಂತ ಸ್ವಾಮಿ ಪುತ್ಥಳಿ ಬಳಿ ವಚನಾನಂದ ಶ್ರೀಗಳು ಇದ್ದರು. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಸ್ವಾಮಿಜಿ ಪರವಾಗಿ ಭಕ್ತರು ಘೋಷಣೆ ಕೂಗಲು ಶುರು ಮಾಡಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಟ್ರಸ್ಟಿಗಳನ್ನು ಹೊರಗೆ ಕರೆದೊಯ್ದರು. ಇದನ್ನೂ ಓದಿ: ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

ಈ ಲೆಕ್ಕ ಕೊಡಿ ಕಾರ್ಯಕ್ರಮಕ್ಕೆ ತಮಗೆ ಆಹ್ವಾನವೇ ಬಂದಿಲ್ಲ ಎಂದು ವಚನಾನಂದ ಸ್ವಾಮೀಜಿ ಹೇಳಿದರು. ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯೆ ನೀಡಿದ ಅವರು, ಆ ಕಾರ್ಯಕ್ರಮಕ್ಕೆ ಭಕ್ತರು ಹೋಗುತ್ತಾರೆ ಅವರೇ ಲೆಕ್ಕ ಕೇಳುತ್ತಾರೆ. ಅವರು ಕೂಡ ನನ್ನ ಭಕ್ತರು ಇವರು ಕೂಡ ನನ್ನ ಭಕ್ತರೇ. ಭಕ್ತರಾದವರು ಗುರುವಿನ ಪಾದದ ಕೆಳಗೆ ಇರಬೇಕು, ಅದನ್ನು ಬಿಟ್ಟು ತಲೆಯ ಮೇಲೆ ಕೂರಬಾರದು. ಹಸುವಿನ ಹಾಲು ಬೇಕು ಎಂದರೆ ಹಸುವಿನ ಮೇಲೆ ಕೂರೋದಲ್ಲ. ಹಸುವಿನ ಕಾಲ ಬಳಿ ಕೂತು ಕೆಚ್ಚಲಿನಿಂದ ಹಾಲು ಕರೆಯಬೇಕು ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

TAGGED:davanagerehariharaPanchamasali PeethaVachananda Swamijiವಚನಾನಂದ ಸ್ವಾಮಿಹರಿಹರ ಪಂಚಮಸಾಲಿ ಪೀಠ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
2 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
12 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
15 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
38 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
51 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?