ಹಾಸನ: ಜಿಲ್ಲೆಯ ವಿವಿಧೆಡೆ ರಾತ್ರಿ ವರುಣನ ಆರ್ಭಟ ಮುಂದುವರಿದಿತ್ತು. ಹಾಸನ, ಅರಕಲಗೂಡು, ಬೇಲೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
- Advertisement 2
ರಾತ್ರಿ ಎರಡು ಗಂಟೆಗೂ ಹೆಚ್ಚು ಕಾಲ ಹಲವೆಡೆ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ಅನ್ನದಾತ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾನೆ. ರೈತರು ಭತ್ತ, ಕಾಫಿ ಕೊಯ್ಲು ಮಾಡುತ್ತಿದ್ದಾರೆ. ಆದರೆ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.
- Advertisement 3
- Advertisement 4
ಆಲಿಕಲ್ಲು ಮಳೆಯಿಂದ ರೈತರು ತಾವು ಬೆಳೆದ ಬೆಳೆ ನಷ್ಟ ಅನುಭವಿಸಿದ್ದರು. ಇದೀಗ ಮತ್ತೆ ಮಳೆಯಾಗುತ್ತಿರುವುದರಿಂದ ಭತ್ತ, ಮೆಣಸು, ಕಾಫಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.