Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಹಾಸನ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್

Corona

ಹಾಸನ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್

Public TV
Last updated: May 22, 2021 6:28 pm
Public TV
Share
3 Min Read
ASHWATH 6
SHARE

– ವಿಪತ್ತು ನಿರ್ವಹಣಾ ನಿಧಿಯಿಂದ ಹಾಸನ ಜಿಲ್ಲೆಗೆ 10 ಕೋಟಿ ರೂ.
– ತಕ್ಷಣವೇ 50 ವೆಂಟಿಲೇಟರ್ ಔಷಧಿ, ಆಕ್ಸಿಜನ್ ಕೊರತೆ ಆಗದಂತೆ ಕ್ರಮ

ಹಾಸನ: ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಸನ ಜಿಲ್ಲೆಗೆ ತಕ್ಷಣವೇ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‍ಪಿಆರ್‍ಎಫ್) ಸೋಮವಾರವೇ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಶನಿವಾರ ಹಾಸನ ಜಿಲ್ಲಾಡಳಿತ, ಜನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಪತ್ತು ನಿಧಿಯಿಂದ ಎಲ್ಲ ಜಿಲ್ಲೆಗಳಿಗೆ 260 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಹಾಸನಕ್ಕೆ ಮೊದಲ ಹಂತದಲ್ಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು, ಈಗ ಎರಡನೇ ಹಂತದಲ್ಲಿ 10 ಕೋಟಿ ಕೊಡಲಾಗುವುದು ಎಂದರು.

ಜಿಲ್ಲೆಯಲ್ಲಿ ಆಮ್ಲಜನಕ, ರೆಮಿಡಿಸಿವಿರ್, ಬ್ಲ್ಯಾಕ್ ಫಂಗಸ್ ಔಷಧಿ ಸೇರಿದಂತೆ ಕೋವಿಡ್‍ಗೆ ಸಂಬಂಧಿಸಿದ ಯಾವ ಔಷಧಿಯೂ ಕೊರತೆ ಆಗದಂತೆ ನೋಡಿಕೊಳ್ಳಲು ಅಗತ್ಯಬಿದ್ದರೆ ಇನ್ನಷ್ಟು ಹಣಕಾಸು ಸಂಪನ್ಮೂಲವನ್ನು ಸರ್ಕಾರ ಒದಗಿಸಲಿದೆ. ಕೋವಿಡ್ ವೆಚ್ಚಕ್ಕೆ ನಿರ್ಬಂಧವಿಲ್ಲ, ಜಿಲ್ಲಾಡಳಿತಕ್ಕೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಎಷ್ಟು ಔಷಧಿಗೆ ಬೇಡಿಕೆ ಇಟ್ಟರೂ ಕೊಡಲು ಸರ್ಕಾರ ಸಿದ್ಧವಿದೆ. ಒಂದು ವಾರಕ್ಕಾಗುವಷ್ಟು ಹೆಚ್ಚುವರಿ ಸ್ಟಾಕ್ ಇಟ್ಟುಕೊಳ್ಳಲು ಸೂಚಿಸಲಾಗಿದೆ ಎಂದರು.

ಕೂಡಲೇ 50 ವೆಂಟಿಲೇಟರ್: ಜಿಲ್ಲೆಯಲ್ಲಿ ವೆಂಟಿಲೇಟರ್‍ಗಳ ಕೊರತೆ ಇದೆ ಎಂಬ ಅಂಶವನ್ನು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸಭೆಯಿಂದಲೇ ನಾನು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿದೆ. ತಕ್ಷಣವೇ 50 ವೆಂಟಿಲೇಟರ್‍ಗಳನ್ನು ಕಳುಹಿಸಬೇಕು ಎಂದು ಸೂಚಿಸಿದ್ದೇನೆ. ಇದಕ್ಕೆ ಸ್ಪಂದಿಸಿದ ಅಖ್ತರ್ ಅವರು ಅಷ್ಟೂ ವೆಂಟಿಲೇಟರ್‍ಗಳನ್ನು ಇವತ್ತೇ ಹಾಸನಕ್ಕೆ ಕಳಿಸುವುದಾಗಿ ತಿಳಿಸಿದ್ದಾರೆ. ಒಂದೆರಡು ದಿನಗಳಲ್ಲಿ ಇಷ್ಟೂ ವೆಂಟಿಲೇಟರ್‍ಗಳು ಹಾಸನ ಮೆಡಿಕಲ್ ಕಾಲೇಜ್‍ಗೆ ತಲುಪಲಿವೆ ಎಂದು ಡಿಸಿಎಂ ತಿಳಿಸಿದರು.

ಇದರ ಜೊತೆಗೆ ಜಿಲ್ಲೆಯ ತಮ್ಮಲ್ಲಿರುವ ಕೋವಿಡ್ ಬೆಡ್‍ಗಳನ್ನು ‘ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್’ (sಚಿsಣ) ಪೋರ್ಟಲ್ ಗೆ ಲಿಂಕ್ ಮಾಡಿಲ್ಲ. ಇದು ಕೂಡಲೇ ಆಗಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಹೇಳಿದರು.

ವೈದ್ಯರ ಕಾಯಂ ನೇಮಕ: ಹಾಸನವೂ ಸೇರಿ ರಾಜ್ಯದಲ್ಲಿ ವೈದ್ಯರ ಕೊರತೆ ಇದೆ. ಹೀಗಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರನ್ನು ಕಾಯಂ ಮಾಡುವುದು ಸೇರಿ 2,000ಕ್ಕೂ ಹೆಚ್ಚು ವೈದ್ಯರನ್ನು ನೇಮಕಾತಿ ಮಾಡಿಕೊಂಡು ಅವರ ಕಾರ್ಯಸ್ಥಳಕ್ಕೆ ನಿಯೋಜಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಅಂತಿಮವಾಗಲಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಗ್ರಾಮೀಣ ಪ್ರದೇಶದ ಎಲ್ಲ ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಯಾಜಿಂಗ್ ಹೆಚ್ಚಿಸಬೇಕು. ಆರ್‍ಟಿಪಿಸಿಆರ್ ಮತ್ತು ರಾಟ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಮನೆಮನೆಗೂ ಹೋಗಿ ಪರೀಕ್ಷೆ & ಸಮೀಕ್ಷೆ ನಡೆಸಿ ಸೋಂಕಿತರು ಪತ್ತೆಯಾದರೆ ಕೂಡಲೇ ಅವರನ್ನು ಕೇರ್ ಸೆಂಟರ್‍ಗಳಿಗೆ ಶಿಫ್ಟ್ ಮಾಡಬೇಕು. ಸೋಂಕಿತರು ಹೋಮ್ ಐಸೋಲೇಷನ್ ಆಗುವಂತಿಲ್ಲ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

HSN 10

ಮೆಡಿಕಲ್ ಕಾಲೇಜ್ ಡೀನ್‍ಗೆ ಡಿಸಿಎಂ ತರಾಟೆ: ವಾರಕ್ಕೊಮ್ಮೆ ಕೋವಿಡ್ ಸೋಂಕಿತರ ವಾರ್ಡ್‍ಗೆ ಕಾಟಾಚಾರಕ್ಕೆ ಭೇಟಿ ಕೊಟ್ಟು ನಿರ್ಲಕ್ಷ್ಯ ಧೋರಣೆ ತಾಳಿದ್ದ ಇಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ರವಿಕುಮಾರ್‍ಗೆ ಅಶ್ವಥ್ ನಾರಾಯಣ್ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಹಾಸನದ ವೈದ್ಯಕೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂತು. ಇದರಿಂದ ಕೆಂಡಾಮಂಡಲರಾದ ಡಿಸಿಎಂ, ನೀವೇ ವಾರಕ್ಕೊಮ್ಮೆ ವಾರ್ಡ್‍ಗೆ ಹೋದರೆ ಇನ್ನು ಇಡೀ ವ್ಯವಸ್ಥೆ ಕಥೆ ಏನು? ಸ್ವತಃ ಡೀನ್ ಹೀಗೆ ಮಾಡಿದರೆ ಇತರೆ ವೈದ್ಯರ ಪರಿಸ್ಥಿತಿ ಏನು? ಎಲ್ಲರಿಗಿಂತ ಮೊದಲೇ ವ್ಯಾಕ್ಸಿನ್ ತೆಗೆದುಕೊಂಡು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ನಿಮ್ಮಂಥವರೇ ಹೆದರಿಕೊಂಡು ಸೋಂಕಿತರ ಬಳಿಗೆ ಹೋಗದಿದ್ದರೆ ಆ ಸೋಂಕಿಗೆ ತುತ್ತಾದವರ ಪಾಡೇನು? ಸೋಂಕಿತರಿಗೆ ಮನೋಧೈರ್ಯ ಬರುವುದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಇನ್ನು ಮುಂದೆ ಹೀಗೆ ಆಗುವಂತಿಲ್ಲ. ದಿನಕ್ಕೊಮ್ಮೆಯಾದರೂ, ಅಗತ್ಯಬಿದ್ದರೆ ಎರಡು ಸಲವಾದರೂ ಸೋಂಕಿತರ ವಾರ್ಡ್‍ಗೆ ಭೇಟಿ ನೀಡಲೇಬೇಕು. ಇಲ್ಲಿ ಏನೇ ಆದರೂ ನೀವೇ ಹೊಣೆಗಾರರು. ಮುಂದೆ ಇಂಥ ನಿರ್ಲಕ್ಷ್ಯ ಮರುಕಳಿಸಿದರೆ ಸುಮ್ಮನಿರುವುದಿಲ್ಲ ಎಂದು ಡಿಸಿಎಂ ಅವರು ಡೀನ್‍ಗೆ ಖಡಕ್ ವಾರ್ನಿಂಗ್ ಕೊಟ್ಟರು.

ಬೆಳಗ್ಗೆಯಿಂದಲೇ ಹಾಸನ ಜಿಲ್ಲೆಯ ಪ್ರವಾಸ ಕೈಗೊಂಡಿದ್ದ ಡಿಸಿಎಂ ಅವರು, ಚನ್ನರಾಯಪಟ್ಟಣ ತಾಲೂಕಿನ ಗುರುಮಾರನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರ್ ಹಾಗೂ ಚನ್ನರಾಯಪಟ್ಟಣದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಎಚ್.ಡಿ.ರೇವಣ್ಣ, ಶಿವಲಿಂಗೇಗೌಡ, ಪ್ರೀತಂ ಗೌಡ, ಬಾಲಕೃಷ್ಣ, ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಗಿರೀಶ್, ಎಸ್‍ಪಿ ಶ್ರೀನಿವಾಸ ಗೌಡ ಮುಂತಾದವರು ಡಿಸಿಎಂ ಜೊತೆಯಲ್ಲಿದ್ದರು.

TAGGED:Ashwath NarayanDCMhassanPublic TVಅಶ್ವಥ್ ನಾರಾಯಣ್ಡಿಸಿಎಂಪಬ್ಲಿಕ್ ಟಿವಿಹಾಸನ
Share This Article
Facebook Whatsapp Whatsapp Telegram

Cinema news

gilli bracelet gift by kavya father
ನಮ್‌ ಕಡೆ ಬ್ರೇಸ್‌ಲೇಟ್‌ ಎಂಗೇಜ್‌ಮೆಂಟ್‌ಗೆ ಕೊಡ್ತಾರೆ: ಕಾವ್ಯ ತಂದೆ ಕೊಟ್ಟ ಗಿಫ್ಟ್‌ ಬಗ್ಗೆ ಸುದೀಪ್‌ ಬಳಿ ಗಿಲ್ಲಿ ಹೇಳಿದ್ದೇನು?
Cinema Latest Top Stories TV Shows
eight month old baby rescued after parents attempt treasure sacrifice in hosakote
ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ ಆರೋಪ – ಅಧಿಕಾರಿಗಳಿಂದ ದಾಳಿ
Bengaluru Rural Cinema Districts Karnataka Latest States Top Stories
Gilli Nata
ಗಿಲ್ಲಿ ಬೇಜವಾಬ್ದಾರಿ ಪರ್ಸನ್‌, ಪಕ್ಷಪಾತಿ – ಕ್ಯಾಪ್ಟನ್ಸಿ ಬಗ್ಗೆ ಕಿಚ್ಚನ ಮುಂದೆ ಮನೆ ಮಂದಿ ದೂರು!
Cinema Latest TV Shows
Sharan Yograj Bhat 2
ಯೋಗರಾಜ್ ಭಟ್ಟರ `ಅಮಲಿ’ಗೆ ದನಿಯಾದ ನಟ ಶರಣ್
Cinema Latest Sandalwood

You Might Also Like

Uttara Kannada
Crime

ಮದುವೆಗೆ ಒಪ್ಪಲಿಲ್ಲ ಅಂತ ವಿಚ್ಛೇದಿತ ಮಹಿಳೆ ಹತ್ಯೆ; ಆರೋಪಿ ರಫೀಕ್‌ ಆತ್ಮಹತ್ಯೆ

Public TV
By Public TV
17 minutes ago
father feeds poison to child in bengaluru
Bengaluru City

ಮಗುವಿಗೆ ಜನ್ಮ ಸಂಬಂಧಿ ಕಾಯಿಲೆ ಅಂತ ವಿಷವುಣಿಸಿದ ತಂದೆ!

Public TV
By Public TV
25 minutes ago
Mantralaya
Latest

ರಾಯರ ಮಠ, ಉತ್ತರಾಧಿ ಮಠಗಳ ವಿವಾದ ಇತ್ಯರ್ಥ – ಬಗೆಹರಿದ ನವಬೃಂದಾವನಗಡ್ಡೆ ಸಮಸ್ಯೆ

Public TV
By Public TV
47 minutes ago
Venezuela
Latest

ವೆನೆಜುವೆಲಾದ ಮೇಲೆ ಅಮೆರಿಕ ದಾಳಿ – 40 ಮಂದಿ ನಾಗರಿಕರು ಸಾವು

Public TV
By Public TV
2 hours ago
Venezuelan
Latest

ವೆನೆಜುವೆಲಾಗೆ ಹೋಗಬೇಡಿ: ಅಧ್ಯಕ್ಷನ ಸೆರೆ ಬೆನ್ನಲ್ಲೇ ದೇಶದ ನಾಗರಿಕರಿಗೆ ಭಾರತ ಸೂಚನೆ

Public TV
By Public TV
3 hours ago
CRIME
Crime

ಹುಬ್ಬಳ್ಳಿ | ಪ್ರತ್ಯೇಕ ಪ್ರಕರಣ – ಇಬ್ಬರು ಬಾಲಕಿಯರ ಮೇಲೆ ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ – 7 ಮಂದಿ ವಶಕ್ಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?