ಚಾಮರಾಜನಗರ: ತೆಲುಗಿನ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟವಿದೆ. ಇಂದು ಬೆಳಗ್ಗೆ ರಾಜಮೌಳಿ ಅವರು ತಮ್ಮ ಪತ್ನಿಯೊಂದಿಗೆ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ರಾಜಮೌಳಿ ನಂತರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಬಂಡೀಪುರಕ್ಕೂ ಭೇಟಿ ನೀಡಿದ್ದಾರೆ.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೋಗಿದ್ದ ಅವರು ಬಂಡೀಪುರ ಅರಣ್ಯ ಪ್ರದೇಶದ ಸಿಬ್ಬಂದಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಸೌಂದರ್ಯಕ್ಕೆ ತಲೆ ಬಾಗಿದ್ದಾರೆ. ನಂತರ ಸಿಬ್ಬಂದಿ ಜೊತೆ ಫೋಟೋ ತೆಗೆಸಿಕೊಂಡು ವಾಪಸ್ ಆಗಿದ್ದಾರೆ.
ಈ ಹಿಂದೆ ಕೊರೊನಾ ವೈರಸ್ನಿಂದ ಬಳಲುತ್ತಿದ್ದ ರಾಜಮೌಳಿ ಕುಟುಂಬ ಸದ್ಯ ಸಂಪೂರ್ಣ ಗುಣವಾಗಿದೆ. ರಾಜಮೌಳಿ ನಿರ್ದೇಶನದಲ್ಲಿ ‘ಆರ್ಆರ್ಆರ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಜೂ.ಎನ್ಟಿಆರ್ ಮತ್ತು ರಾಮ್ ಚರಣ್ ನಾಯಕತ್ವದಲ್ಲಿ ಮೂಡಿಬರಲಿರುವ ಈ ಸಿನಿಮಾದ ಚಿತ್ರೀಕರಣ ಕೊರೊನಾದಿಂದಾಗಿ ನಿಂತಿತ್ತು.