ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜಾಕೋಬ್ ಲೋಬೋ ಜೀವನ, ಸಾಧನೆಯ ಪುಸ್ತಕ ಬಿಡುಗಡೆ

Public TV
1 Min Read
MNG 13

ಮಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉನ್ನತಾಧಿಕಾರಿಯಾಗಿ ಮತ್ತು ಬರಹಗಾರರಾಗಿ ಸೇವೆ ಸಲ್ಲಿಸಿರುವತಂಹ ಸಿ.ಹೆಚ್ ಜಾಕೋಬ್ ಲೋಬೋರವರ ಜೀವನ ಹಾಗೂ ಸಾಧನೆಯನ್ನು ಹೇಳುವಂತಹ “ಅನುಭೂತಿ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.

85dff584 87bf 475d bfe0 50b486c21a8f

ಚಲನಚಿತ್ರ ರಂಗದಲ್ಲಿ ಲೇಖಕರಾಗಿ ನಿರ್ದೇಶಕರಾಗಿ ಗುರುತಿಸಿಕೊಂಡಿರುವಂತಹ ಲೇಖಕ ಶ್ರೀನಿವಾಸ ಕೌಶಿಕ್ ಅವರು ರಚಿಸಿರುವ, ಬೆಂಗಳೂರಿನ ಅನಂತ ಪ್ರಕಾಶನದ ಉಮೇಶ್ ನಾಗಮಂಗಲ ಅವರು ಪ್ರಕಟಿಸಿರುವ “ಅನೂಭೂತಿ” ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತ್‍ನ ಜಿಲ್ಲಾಧ್ಯಕ್ಷ ಎಸ್ .ಪ್ರದೀಪ್ ಕುಮಾರ್ ಕಲ್ಕೂರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಸ್ವಾತಂತ್ರ್ಯ ಪೂರ್ವದಲ್ಲೇ ಜನಿಸಿರುವ ಜಾಕೋಬ್ ಲೋಬೋ ಅವರು ತಾನೊಬ್ಬ ಸರ್ಕಾರಿ ಅಧಿಕಾರಿಯಾಗಿದ್ದರೂ ತನ್ನ ಕಾರ್ಯಕ್ಷೇತ್ರವನ್ನು ಮೀರಿ ಬಡವರ ಸೇವೆ ಮಾಡಿದಂತವರು. ಅಂದಿನ ಕಾಲದ ಹಿಂದುಳಿದ ಬಡಕುಟುಂಬಗಳಿಗೆ ಅವರು ಮಾಡಿರುವ ಸೇವೆ ನೆನಪಿನಾಳದಲ್ಲಿ ಉಳಿಯುವಂತದ್ದು, ಇಂತಹ ಮಹಾನ್ ಸಾಧಕನ ಜೀವನ ಹಾಗೂ ಸಾಧನೆಯನ್ನು ತಿಳಿಸುವಂತಹ ಪುಸ್ತಕವನ್ನು ಬಿಡುಗಡೆ ಮಾಡುತ್ತಿರುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ಹೇಳಿದ ಪ್ರದೀಪ್ ಕುಮಾರ್ ಕಲ್ಕೂರ ಅವರು ಜಾಕೋಬ್ ಲೋಬೋ ಅವರು ನಡೆದು ಬಂದ ದಾರಿಯನ್ನು ನೆನಪಿಸಿದರು.

e0871061 87f7 4e73 a061 4a7e18181ec0

ಈಗಾಗಲೇ ಕೋವಿಡ್ 19ರ ಈ ಸಂದರ್ಭದಲ್ಲಿ “ಅನುಭೂತಿ” ಪುಸ್ತಕವನ್ನು ಬೆಂಗಳೂರಿನಲ್ಲಿ ಜಾಕೋಬ್ ಲೋಬೋರಿಗೆ 90 ವರ್ಷ ತುಂಬಿದ ಸಂದರ್ಭದಲ್ಲಿ ಜೂನ್, 20ರಂದು ಅವರ ಸ್ವಗ್ರಹದಲ್ಲಿಯೇ ಹಿರಿಯರ ಹಾಗೂ ಸ್ನೇಹಿತರನ್ನು ಒಳಗೊಂಡ ಒಂದು ಪುಟ್ಟ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆ ಜಾಕೋಬ್ ಲೋಬೋರ ಕಾರ್ಯ ಕ್ಷೇತ್ರವಾಗಿದ್ದರಿಂದ ಹಾಗೂ ಜಾಕೋಬ್ ಲೋಬೋ ಅವರು ಹಿಂದುಳಿದ ವರ್ಗಕ್ಕೆ ಅನನ್ಯ ಸೇವೆ ಸಲ್ಲಿಸಿರುವುದರಿಂದ ಅವರ ಸೇವಾ ಅವಧಿಯಲ್ಲಿ ಹೆಚ್ಚಿನ ಭಾಗ ಇಲ್ಲಿಯೇ ಕಳೆದಿದ್ದರಿಂದ ಇಲ್ಲಿಯೇ ಒಂದು ಪರಿಚಯಾತ್ಮಕವಾದ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿಲಾಯಿತು ಎಂದು ಈ ಸಂದರ್ಭದಲ್ಲಿ ಲೇಖಕ ಶ್ರೀನಿವಾಸ ಕೌಶಿಕ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ಆರ್ ಶ್ರೀನಿವಾಸ್, ಶ್ರೀಮತಿ ಹೆಲನ್ ಲೋಬೋ ಮುಂತಾದವರು ಉಪಸ್ಥಿತರಿದ್ದರು.

739a464d d093 4ffb b477 fb64a14a1fc3

Share This Article
Leave a Comment

Leave a Reply

Your email address will not be published. Required fields are marked *