Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಟ್ಟಹಬ್ಬದಂದೇ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಮಾಡಿದ್ರು ಬಿ.ಸಿ ಪಾಟೀಲ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹುಟ್ಟಹಬ್ಬದಂದೇ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಮಾಡಿದ್ರು ಬಿ.ಸಿ ಪಾಟೀಲ್!

Districts

ಹುಟ್ಟಹಬ್ಬದಂದೇ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಮಾಡಿದ್ರು ಬಿ.ಸಿ ಪಾಟೀಲ್!

Public TV
Last updated: November 14, 2020 2:18 pm
Public TV
Share
3 Min Read
BC Patil 1
SHARE

ಮಂಡ್ಯ: ಗ್ರಾಮ ವಾಸ್ತವ್ಯ ಮಾದರಿಯಲ್ಲಿ ರೈತರೊಂದಿಗೆ ವಾಸ್ತವ್ಯ ಮಾಡಲು ಕೃಷಿ ಸಚಿವ ಬಿಸಿ ಪಾಟೀಲ್ ರೈತರೊಂದಿಗೆ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮವನ್ನು ಆರಂಭಿಸಿದ್ದು, ಮಂಡ್ಯದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆಗೆ ಚಾಲನೆ ನೀಡಿದರು. ತಮ್ಮ ಹುಟ್ಟಹಬ್ಬದ ದಿನದಂದೇ ಸಚಿವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.

ಮಂಡ್ಯ ಜಿಲ್ಲೆಯ ಮಡುವಿನಕೋಡಿ ಗ್ರಾಮದ ಕಬ್ಬಿನ ತಾಕಿನಲ್ಲಿ, ನೂತನ ಯಾಂತ್ರಿಕೃತ ಕಬ್ಬು ನಾಟಿ ಮಾಡುವ ವಿಧಾನಕ್ಕೆ ಚಾಲನೆ ನೀಡಲಾಯಿತು.#Mandya | #ಮಂಡ್ಯ | #Sugarcane | #ಕಬ್ಬು@DDChandanaNews | @KarnatakaVarthe | @BSYBJP | @Karnataka_DIPR | @PIBBengaluru | @NarayanaGowda_ | @CMofKarnataka pic.twitter.com/VjS6GnYE7p

— Kourava B.C.Patil (@bcpatilkourava) November 14, 2020

ಕೆ.ಆರ್. ಪೇಟೆ ತಾಲೂಕಿನ ಮಡುವಿನಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ನಾನು ವಾಸ್ತವತೆಯನ್ನು ಅರಿಯುತ್ತಿದ್ದೇನೆ. ನಾನು ಅವರನ್ನು ಕಾಪಿ ಮಾಡುತ್ತಿಲ್ಲ. ಅವರು ಗ್ರಾಮದಲ್ಲಿ ಇದ್ದು ಮಲಗಿ ಹೋಗುತ್ತಿದ್ದರು. ನಾನು ಬೆಳಗ್ಗಿಯಿಂದ ರಾತ್ರಿವರೆಗೂ ಇದ್ದು ವಾಸ್ತವತೆ ಅರಿಯುತ್ತಿದ್ದೇನೆ. ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸುತ್ತೇವೆ. ನಾವು ಮಾಡುವ ಕಾರ್ಯಕ್ರಮದಿಂದ ರೈತರ ಸಮಸ್ಯೆ ತಿಳಿಯುತ್ತದೆ. ತಿಂಗಳಿಗೆ ಮೂರು ದಿನ ಈ ಕಾರ್ಯಕ್ರಮ ಮಾಡುತ್ತೇನೆ. ಎಲ್ಲಾ ಜಿಲ್ಲೆ ಸುತ್ತಿದ ಬಳಿಕ ಸಿಎಂಗೆ ವರದಿ ನೀಡುತ್ತೇನೆ. ರೈತರ ಸಂಕಷ್ಟಗಳನ್ನು ಹೇಗೆ ನಿವಾರಿಸಬಹುದು ಎಂದು ಯೋಚನೆ ಮಾಡುತ್ತೇವೆ. ನಾನು ರೈತನ ಮಗನಾಗಿದ್ದು, ಮೊದಲೆಲ್ಲಾ ನಾನು ಎಲ್ಲಾ ಕೆಲಸವನ್ನು ಮಾಡಿದ್ದೇನೆ. ಪೊಲೀಸ್ ಇಲಾಖೆಗೆ, ಸಿನಿಮಾಗೆ ಬಂದ ಮೇಲೆ ಅನುಭವ ಕಡಿಮೆಯಾಗಿದೆ. ಹೀಗಾಗಿ ಮೈ ಸ್ವಲ್ಪ ಬಗ್ಗುತ್ತಿಲ್ಲ. ಈಗ ಮತ್ತೆ ಮೈ ಬಗ್ಗಿಸಿದ್ರೆ ರೈತರ ರೀತಿ ಕೆಲಸ ಮಾಡುತ್ತೇವೆ ಎಂದರು.

ಆತ್ಮೀಯರು ಹಾಗೂ ತೋಟಗಾರಿಕಾ ಸಚಿವರಾದ ಶ್ರೀ ನಾರಾಯಣಗೌಡ ಅವರ ಮನೆಯಲ್ಲಿ, ಇಂದು ನನ್ನ ಹುಟ್ಟುಹಬ್ಬದ ನಿಮಿತ್ತ ಆತ್ಮೀಯರ ಹಾಗೂ ಕಾರ್ಯಕರ್ತರಿಂದ ಶುಭಾಶಯಗಳನ್ನು ಸ್ವೀಕರಿಸಿ, ಅವರಿಗೆ ನನ್ನ ಮನಃಪೂರ್ವಕ ಧನ್ಯವಾದಗಳನ್ನು ತಿಳಿಸಿದ ಕ್ಷಣಗಳು.#Mandya | #ಮಂಡ್ಯ @NarayanaGowda_ pic.twitter.com/p77gUZIZJ2

— Kourava B.C.Patil (@bcpatilkourava) November 14, 2020

ಜಿಲ್ಲೆಯ ಮಡುವಿನಕೋಡಿ ಗ್ರಾಮದ ಹೊರಹೊಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಬಿಸಿ ಪಾಟೀಲ್ ಕಬ್ಬು ತರಗು ನಿವರ್ಹಣೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಚಾಲನೆ ನೀಡಿದರು. ಅಲ್ಲದೇ ಮಾಯಿಗೌಡ ಅವರ ಜಮೀನಿನಲ್ಲಿ ರೈತ ಮಹಿಳೆಯರೊಂದಿಗೆ ರಾಗಿ ನಾಟಿ ಮಾಡಿದರು. ಜೈ ಕಿಸಾನ್ ಘೋಷಣೆ ಕೂಗೂತ್ತ ಸಚಿವರು ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.

ಬಳಿಕ ಕೆಆರ್ ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿರುವ ಲಕ್ಷ್ಮೀ ದೇವಮ್ಮ ಅವರ ಸಮಗ್ರ ಕೃಷಿ ತೋಟಕ್ಕೆ ಭೇಟಿ ಕೊಟ್ಟ ಸಚಿವರು, ಭತ್ತದ ಗದ್ದೆ ವೀಕ್ಷಿಣೆ ಮಾಡಿ ಗೊಬ್ಬರವನ್ನು ಚೆಲ್ಲುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸು ಮತ್ತು ಕುರಿಗಳ ಮೇವಿಗಾಗಿ ಹಲ್ಲು ಕಟಾವು ಮಾಡಿದರು. ಬಿಸಿ ಪಾಟೀಲ್ ಅವರಿಗೆ ಸಚಿವ ನಾರಾಯಣಗೌಡ ಸಾಥ್ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ತೋಟಗಾರಿಕಾ ಸಚಿವರಾದ ನಾರಾಯಣಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರಿಗೆ, ಕಾರ್ಯಕರ್ತರು ಶುಭಾಶಯ ಕೋರಿದರು.

BC Patil

ರೈತರಿಗೆ ಆತ್ಮಸ್ಥೆರ್ಯ ತುಂಬುವ, ಸಮಗ್ರ ಕೃಷಿ ಮತ್ತು ಉತ್ಪಾದನಾ ವೆಚ್ಚ ಹಾಗೂ ರೈತರ ಆತ್ಮಹತ್ಯೆ ಕಾರಣ ಏನು ಎಂಬುದನ್ನು ತಿಳಿಯುವುದು. ಮಾದರಿ ರೈತರನ್ನು ಭೇಟಿ ಮಾಡಿ ಅವರ ಅನುಭವ ಬೇರೆ ರೈತರಿಗೆ ಮಾದರಿಯಾಗುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರತಿ ತಿಂಗಳು 2 ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 7 ರಿಂದ ದಿನಪೂರ್ತಿ ರೈತರೊಂದಿಗೆ ಇದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೃಷಿ ಇಲಾಖೆಯಲ್ಲಿ ಹೊಸ ಬದಲಾವಣೆ ಮಾಡಲು ಸಚಿವರು ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

BC Patil a

TAGGED:Agriculture Minister BC PatilDepartment of Agriculturekr petemandyaPublic TVಕೃಷಿ ಇಲಾಖೆಕೃಷಿ ಸಚಿವ ಬಿಸಿ ಪಾಟೀಲ್ಕೆಆರ್ ಪೇಟೆಪಬ್ಲಿಕ್ ಟಿವಿಮಂಡ್ಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
17 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
28 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
46 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?