Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹೆಚ್‍ಡಿಕೆ ಪಂಚಾಯ್ತಿ ಸದಸ್ಯನಿಗಿಂತಲೂ ಕೀಳುಮಟ್ಟದ ರಾಜಕಾರಣ ಮಾಡ್ತಿದ್ದಾರೆ: ಸಚಿವ ಈಶ್ವರಪ್ಪ

Public TV
Last updated: July 19, 2021 12:19 pm
Public TV
Share
2 Min Read
eshwarappa
SHARE

ಶಿವಮೊಗ್ಗ: ಮಾಜಿ ಸಿಎಂ ಎಚ್‍ಡಿಕೆ ಅವರು ಗ್ರಾಮ ಪಂಚಾಯ್ತಿ ಸದಸ್ಯನಿಗಿಂತಲೂ ಕೀಳು ಮಟ್ಟಕ್ಕೆ ಇಳಿಯುತ್ತಿದ್ದಾರೆ. ಹಾಗಂತ ಗ್ರಾಮ ಪಂಚಾಯ್ತಿ ಸದಸ್ಯ ಕೀಳು ಅಂತಾ ನಾನು ಹೇಳುತ್ತಿಲ್ಲ. ಅವರು ಕೂಡ ಚುನಾಯಿತ ಜನಪ್ರತಿನಿಧಿಗಳು, ಜನರಿಂದ ಆಯ್ಕೆಯಾಗಿ ಬಂದಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆಗಿದ್ದಂತಹ ವ್ಯಕ್ತಿ ಈ ಮಟ್ಟಕ್ಕೆ ಇಳಿಯುತ್ತಾರೆ ಅಂದರೆ ನನಗೆ ತುಂಬಾ ನೋವು ಆಗುತ್ತಿದೆ ಎಂದು ಸಚಿವ ಈಶ್ವರಪ್ಪ ಮಾಜಿ ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

HDK 2

ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದೊಡ್ಡ ದೊಡ್ಡ ಆರು ಬ್ಯಾಗ್‍ಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಮಾಜಿ ಸಿಎಂ ಎಚ್‍ಡಿಕೆ ಆರೋಪ ಮಾಡಿದ್ದರು. ಎಚ್‍ಡಿಕೆ ಅವರ ಈ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ನಿಮ್ಮ ತಂದೆ ದೇವೇಗೌಡರು ಸಹ ಪ್ರಧಾನಿ ಆಗಿದ್ದರು. ಆ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲು ದೇಶದ ಜನ ಬ್ಯಾಗಿನಲ್ಲಿ ಹಾರ, ತುರಾಯಿ ಎಲ್ಲಾ ತೆಗೆದುಕೊಂಡು ಹೋಗುತ್ತಿದ್ದರು. ಹಾಗಾದರೆ ಆ ಸಂದರ್ಭದಲ್ಲಿ ಬ್ಯಾಗ್‍ನಲ್ಲಿ ಏನು ಇರುತಿತ್ತು ಎಂದು ಪ್ರಶ್ನಿಸಿದ್ದಾರೆ.

rcr hdd

ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯದಿಂದ ಹೊಸದಾಗಿ ನಾಲ್ಕು ಮಂದಿ ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರದಲ್ಲಿ ರಾಜ್ಯದಿಂದ ಒಟ್ಟು ಆರು ಮಂದಿ ಸಚಿವರಾಗಿದ್ದಾರೆ. ಅವರುಗಳಿಗೆ ಶುಭ ಕೋರಿ ಸನ್ಮಾನಿಸಬೇಕು. ಜೊತೆಗೆ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರನ್ನು ಸಹ ಸಿಎಂ ಭೇಟಿಯಾಗಿದ್ದಾರೆ. ಈ ವೇಳೆ ಎಲ್ಲರಿಗೂ ಶುಭಕೋರಿ ನೆನಪಿನ ಕಾಣಿಕೆ ನೀಡುವ ಸಲುವಾಗಿ ಬ್ಯಾಗ್ ತೆಗೆದುಕೊಂಡು ಹೋದರೆ, ಅದನ್ನು ಹೆಚ್‍ಡಿಕೆ ಅವರು ಕೆಟ್ಟ ಕಣ್ಣಿನಲ್ಲಿ ನೋಡುತ್ತಾರೆ ಅಂದರೆ ಖಂಡಿತಾ ಅವರನ್ನು ದೇವರು ಮೆಚ್ಚುವುದಿಲ್ಲ ಎಂದಿದ್ದಾರೆ.

PM MODI medium

ಹೆಚ್ಡಿಕೆ ಅವರಿಗೆ ನಿಜವಾಗಿಯೂ ರಾಜ್ಯದ ಬಗ್ಗೆ ಅಭಿಮಾನ ಇದ್ದರೆ, ಕೇಂದ್ರದ ಮಂತ್ರಿಗಳು ನಮ್ಮ ರಾಜ್ಯಕ್ಕೆ ಒಳ್ಳೆಯದು ಮಾಡಲಿ ಅಂತಾ ಪಕ್ಷ ಭೇದ ಮರೆತು ಅಭಿನಂದನೆ ಸಲ್ಲಿಸಿ ಬರಬೇಕಿತ್ತು. ಅದನ್ನು ಬಿಟ್ಟು ಸಿಎಂ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಿಡಿಕಾರಿದ್ದಾರೆ.

BSY 7 medium

ಮೋದಿ ಅವರು ನಿರೀಕ್ಷೆ ಮಾಡುವಂತಹ ಕೆಳಮಟ್ಟದ ರಾಜಕಾರಣಿ ಅಲ್ಲ. ಯಡಿಯೂರಪ್ಪ ಅವರು ಸಹ ಮೋದಿ ಅವರನ್ನು ಮೆಚ್ಚಿಸಲು, ತೃಪ್ತಿಪಡಿಸಲು ಯಾವುದೋ ಆಸೆ ಆಮಿಷ ತೋರಿಸಲು ಹೋಗಿರಲಿಲ್ಲ. ಮುಖ್ಯಮಂತ್ರಿ ಆಗಿದ್ದಂತಹವರು ಇಂತಹ ಕೀಳುಮಟ್ಟಕ್ಕೆ ಇಳಿಯಬೇಡಿ. ರಾಜ್ಯದ ಜನ ನಿಮ್ಮನ್ನು ಒಪ್ಪುವುದಿಲ್ಲ. ರಾಜ್ಯದ ಜನ ನಿಮಗೆ ಛೀಮಾರಿ ಹಾಕುವಂತಹ ದಿನ ಬರುತ್ತದೆ. ರಾಜ್ಯದ ಜನರ ಕ್ಷಮೆ ಕೇಳಿ ನಿಮ್ಮ ತಪ್ಪನ್ನು ಒಪ್ಪಿಕೊಳ್ಳಿ. ಆಗ ಮಾತ್ರ ರಾಜ್ಯದ ಜನ ಕುಮಾರಸ್ವಾಮಿ ದೊಡ್ಡ ಮನುಷ್ಯ ಅಂತಾ ಒಪ್ಪಿಕೊಳ್ಳುತ್ತಾರೆ. ಇಲ್ಲ ನಾನು ಇದನ್ನೇ ಮುಂದುವರಿಸುತ್ತೇನೆ ಅಂದರೆ ಮುಂದುವರಿಸಿ ನನ್ನ ಅಭ್ಯಂತರವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಿ ಸ್ಥಾನ ಹೋದರೆ ಗೂಟ ಹೋದ ಹಾಗೆ: ಕೆ.ಎಸ್ ಈಶ್ವರಪ್ಪ

TAGGED:BageshwarappamodiPublic TVshivamoggayeddiyurappaಈಶ್ವರಪ್ಪಕುಮಾರಸ್ವಾಮಿಪಬ್ಲಿಕ್ ಟಿವಿ Kumaraswamyಬ್ಯಾಗ್ಮೋದಿಯಡಿಯೂರಪ್ಪಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
17 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
20 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
21 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
21 hours ago

You Might Also Like

Nikhil Kumaraswamy
Bengaluru City

ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
14 minutes ago
R.ASHOK
Bengaluru City

ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

Public TV
By Public TV
41 minutes ago
chinnaswamy stadium
Bengaluru City

KSCA ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

Public TV
By Public TV
51 minutes ago
BY Vijayendra
Bengaluru City

ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Public TV
By Public TV
1 hour ago
DK Suresh 1
Latest

ಸತ್ತವರ ಬಗ್ಗೆ ಕುಮಾರಸ್ವಾಮಿಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ: ಡಿ.ಕೆ.ಸುರೇಶ್ ತಿರುಗೇಟು

Public TV
By Public TV
1 hour ago
Chinnaswamy Stadium Stampede Case CM Siddaramaiahs Political Secretary K Govindaraj Sacked
Bengaluru City

Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?