Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ರೆ ಕ್ಷಮೆ ಕೇಳ್ತೇನೆ: ಮಾಧುಸ್ವಾಮಿ

Public TV
Last updated: May 21, 2020 6:35 pm
Public TV
Share
3 Min Read
Madhuswamy
SHARE

– ನನ್ನನ್ನ ಯಾರೂ ತಬ್ಕೊಂಡು ಮುತ್ತು ಕೊಟ್ಟಿಲ್ಲ
– ರಾಜೀನಾಮೆ ಕೊಡಲು ಸಿದ್ದರಾಮಯ್ಯ ನನ್ನ ಮಂತ್ರಿ ಮಾಡಿಲ್ಲ

ತುಮಕೂರು: ಹೆಣ್ಣು ಅಂತ ಆಗಲಿ ಅಥವಾ ರೈತ ಸಂಘದವರು ಎಂದು ಗುರುತಿಸಿ ಮಾತನಾಡಿಲ್ಲ. ವ್ಯಯಕ್ತಿಕವಾಗಿ ಮಿತಿ ಮೀರಿ ಮಾತನಾಡಿದ್ದಕ್ಕೆ ನಾನು ಪ್ರತಿಕ್ರಿಯಿಸಿದೆ. ನನ್ನ ಮಾತಿನಿಂದ ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಮಾಧುಸ್ವಾಮಿ, ಆ ಭಾಗಕ್ಕೆ ನೀರು ಸಿಗುತ್ತಿಲ್ಲ ಎನ್ನೋ ಕಾರಣಕ್ಕೆ ಅಲ್ಲಿಗೆ ಹೋಗಿದ್ವಿ. ಆಗ ಮಹಿಳೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಕಾರ್ಯದರ್ಶಿಯವರು ನೋಡಮ್ಮ ಇದು ನಮ್ಮ ಜವಾಬ್ದಾರಿ ಬಿಟ್ಟು ಬಿಡಮ್ಮ ಎಂದು ಹೇಳಿದ್ದರು. ಆದರೆ ಆಕೆ ತಕ್ಷಣ ನನ್ನ 130 ಎಕರೆ ಒತ್ತುವರಿಯಾಗಿದೆ. ನೀವು ಏನ್ರಿ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಕೇಳಿದರು. ನಾನು ಮಂತ್ರಿ ಆಗಿದ್ದು ಈಗ ನನ್ನ ಪ್ರಶ್ನೆ ಕೇಳುತ್ತಿದ್ದಿಯಾ ಎಂದು ಹೇಳಿದ್ದು ನಿಜ. ಆದರೆ ಆಕೆ ಇಷ್ಟು ದಿನದ ತನಕ ಏನ್ರಿ ಮಾಡುತ್ತಿದ್ದೀರಿ ಅಂತ ನನ್ನನ್ನೇ ಕೇಳಿದರು ಎಂದರು.

Minister Madhuswamy B

ನನಗೂ ಸ್ವಾಭಿಮಾನವಿದೆ. ಆದೇಶ ಕೊಡಲಿಕ್ಕೆ ಬರಬೇಡ ಮನವಿ ಮಾಡಿ ಎಂದು ಹೇಳಿದೆ. ಆದರೂ ಆಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಆಗ ಬಾಯಿ ಮುಚ್ಚಮ್ಮ ಎಂದು ಹೇಳಿದೆ. ಮಂತ್ರಿ ಆಗಿ ಆ ಊರಿಗೆ ಹೋಗಿ ಬಾಯಿಗೆ ಬಂದಾಗೆ ಬೈಯಿಸಿಕೊಳ್ಳಲಿಕ್ಕೆ ಹೋಗಿದ್ವಾ? ಅಷ್ಟೊರಳಗೆ ಪೊಲೀಸರು ಬಂದು, ಸರ್ ಯಾರೇ ಬಂದರೂ ಈಕೆ ಹೀಗೆ ಮಾತನಾಡುವುದು ಎಂದರು. ಅಲ್ಲಿಗೆ ಯಾವ ಅಧಿಕಾರಿ ಹೋದರೂ ಆಕೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಆಯಮ್ಮ ಅದೇ ರೀತಿ ನಡೆದುಕೊಂಡು ಬಂದಿದ್ದಾರೆ. ಈ ಗಲಾಟೆ ನಡೆಯಬಾರದಿತ್ತು. ನನಗೆ ಬಹಳ ಬೇಸರವಾಯಿತು ಎಂದರು.

ಸಿದ್ದರಾಮಯ್ಯ ಹೇಳಿದಾಗೆ ನಾನು ರಾಜೀನಾಮೆ ಕೊಡಲು ಅವರು ನನ್ನನ್ನು ಮಂತ್ರಿ ಮಾಡಿಲ್ಲ. ನನ್ನನ್ನ ಯಾರೂ ತಬ್ಬಿಕೊಂಡು ಮುತ್ತು ಕೊಟ್ಟಿಲ್ಲ. ನಾನು ರಾಜೀನಾಮೆ ಕೊಡುವ ಸ್ಥಿತಿ ನಿರ್ಮಾಣ ಆಗಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಹೇಳಿ ಅಂತ ಸಿದ್ದರಾಮಯ್ಯಗೆ ಮಾಧುಸ್ವಾಮಿ ಟಾಂಗ್ ಕೊಟ್ಟರು.

maduswamy

ನಾನು ಒಬ್ಬ ಮನುಷ್ಯ, ನನಗೂ ಸ್ವಾಭಿಮಾನ ಇದೆ. ನನ್ನ ನಾಯಕರು ಕರೆದು ರಾಜೀನಾಮೆ ಕೇಳಿದರೆ ಒಂದು ಕ್ಷಣವೂ ಸುಮ್ಮನಿರೋದಿಲ್ಲ. ಹೆಣ್ಣು ಮಕ್ಕಳ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಕೇಳುತ್ತೇನೆ. ಆಕೆ ಹೆಣ್ಣು ಅಂತ ಆಗಲಿ ಅಥವಾ ರೈತ ಸಂಘದವರು ಎಂದು ಗುರುತಿಸಿ ಮಾತನಾಡಿಲ್ಲ. ವ್ಯಯಕ್ತಿಕವಾಗಿ ಮಿತಿ ಮೀರಿ ಮಾತನಾಡಿದ್ದಕ್ಕೆ ನಾನು ಪ್ರತಿಕ್ರಿಯಿಸಿದೆ. ನಾನು ಕೆಟ್ಟ ಪದ ಎಂದು ಹೇಳಿಲ್ಲ. ನೋವಾಗಿದ್ದರೆ ಕ್ಷಮೆ ಕೇಳುತ್ತೀನಿ ಎಂದು ಮಾಧುಸ್ವಾಮಿ ಹೇಳಿದರು.

ಸಚಿವ ಮಾಧುಸ್ವಾಮಿ ಹೇಳಿದ್ದೇನು?
ಸಚಿವ ಮಾಧುಸ್ವಾಮಿ ಅವರು ರೈತ ಸಂಘದ ಕಾರ್ಯಕರ್ತರಿಗೆ ‘ಏಯ್ ಮುಚ್ಚು.. ಬಾಯಿ ರಾ?’ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದರು. ಕೆ.ಸಿ.ವ್ಯಾಲಿ ಸಂಬಂಧ ಕೆರೆಗಳ ವೀಕ್ಷಣೆಗೆ ಕೋಲಾರ ತಾಲೂಕಿನ ಎಸ್.ಅಗ್ರಹಾರ ಕರೆ ಬಳಿ ತೆರಳಿದ್ದರು. ಈ ವೇಳೆ ಕೆರೆಗಳ ಒತ್ತುವರಿ ತೆರವು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತೆಯರು ಮನವಿ ಮಾಡಲು ಮುಂದಾಗಿದ್ದರು. ಇದರಿಂದ ಸಿಡಿಮಿಡಿಗೊಂಡ ಮಾಧುಸ್ವಾಮಿಯವರು ಅವಾಚ್ಯ ಪದ ಬಳಕೆ ಮಾಡಿದ್ದರು.

 

ಕೋಪಗೊಂಡ ಕಾರ್ಯಕರ್ತೆ “ಅದೇನ್ ಅಣ್ಣ ನೀವು ಹಿಂಗ ಮಾತಾಡ್ತಾ ಇದ್ದೀರಾ? ಕರೆಕ್ಟ್ ಆಗಿ ಮಾತಾಡಿ. ನೀವು ಹೀಗೆ ಮಾತ್ನಾಡೋದು ಸರಿನಾ” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಧ್ಯೆ ಪ್ರವೇಶಿಸಿ ದರ್ಪ ಮೆರೆದಿದ್ದರು.

ಕೋಲಾರಕ್ಕೆ ನೀರು ಸರಿಯಾಗಿ ಸಿಗುತ್ತಿಲ್ಲ ಎಂದು ದೂರು ನೀಡಲು ಬಂದಿದ್ದೇವೆ. ಸಮಾಧಾನದಿಂದ ಸಚಿವರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ರೈತ ಸಂಘದ ಕಾರ್ಯಕರ್ತರು ಹೇಳಿದರೂ ಕ್ಯಾರೆ ಎನ್ನದ ಪೊಲೀಸ್ ಅಧಿಕಾರಿಯೊಬ್ಬರು, “ನಿನ್ನ ಮಾತು ಜಾಸ್ತಿಯಾತ್ತು, ಸಣ್ಣ ವಿಷಯವನ್ನು ಬೆಳೆಸುತ್ತಿದ್ದೀಯ” ಎಂದು ಕಾರ್ಯಕರ್ತೆಯೊಬ್ಬರನ್ನ ಹಿಂದಕ್ಕೆ ನೂಕಿ ದರ್ಪ ಮೆರೆದಿದ್ದರು. ಸಚಿವರ ಹಾಗೂ ಪೊಲೀಸರ ನಡೆಯ ಬಗ್ಗೆ ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದರು.

TAGGED:Association activistfarmersMinister Madhuswamytumakuruತುಮಕೂರುಪಬ್ಲಿಕ್ ಟಿವಿಬೆಂಗಳೂರುರೈತ ಸಂಘದ ಕಾರ್ಯಕರ್ತೆಸಚಿವ ಮಾಧುಸ್ವಾಮಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
12 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
13 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
13 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
15 hours ago

You Might Also Like

Kanakapura Chirathe Bone
Bengaluru Rural

ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಬೋನ್ ಅಳವಡಿಸಿ ಪತ್ತೆ ಕಾರ್ಯಾಚರಣೆ

Public TV
By Public TV
26 minutes ago
Opal Suchata Chuangsri 2
Latest

Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

Public TV
By Public TV
29 minutes ago
Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
8 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
8 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
8 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?