ಹೆಲಿಕಾಪ್ಟರ್ ಲೋನ್‍ಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ

Public TV
1 Min Read
MADYAPRADESH WOMEN 1

ಭೋಪಾಲ್: ಮಹಿಳೆಯೊಬ್ಬರು ತನಗೆ ಹೆಲಿಕಾಪ್ಟರ್ ಖರೀದಿಗಾಗಿ ಲೋನ್ ಮತ್ತು ಅದರಲ್ಲಿ ಹಾರಾಟ ನಡೆಸಲು ಪರವಾನಿಗೆ ನೀಡಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

MADAYAPRADESH

ಬಸಂತಿ ಬಾಯಿ ಲೋಹರ್ ಅವರು ಮಾಂಡ್ಸೌರ್ ಜಿಲ್ಲೆ, ಅಗರ್ ಗ್ರಾಮದಲ್ಲಿ ವಾಸಿಸುತ್ತಿದ್ದು. ಕಳೆದ ಕೆಲದಿನಗಳ ಹಿಂದೆ ತಮ್ಮ ಮಕ್ಕಳು ಬಸಂತಿ ಬಾಯಿ ಲೋಹರ್ ಅವರು ಜಮೀನಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದಾರೆ. ಹಾಗಾಗಿ ರಾಷ್ಟ್ರಪತಿಗೆ ಪತ್ರ ಬರೆದು ಹೆಲಿಕಾಪ್ಟರ್ ಖರೀದಿಸಿ ಜಮೀನಿಗೆ ಹೋಗುವ ಉಪಾಯ ಮಾಡಿದ್ದಾರೆ.

ಬಸಂತಿ ಬಾಯಿ ಲೋಹರ್ ಪತ್ರವನ್ನು ಹಿಂದಿಯಲ್ಲಿ ಬರೆದಿದ್ದು, ನನ್ನ ಮಕ್ಕಳಾದ ಲವ ಮತ್ತು ಕುಶ ಹಾಗೂ ಸ್ಥಳೀಯ ನಿವಾಸಿ ಪರಮಾನಂದ್ ಪಾಟಿದಾರ್ ಸೇರಿಕೊಂಡು ದಿನನಿತ್ಯ ನಾನೂ ಸಂಚರಿಸುವ ಜಮೀನಿನ ದಾರಿಯನ್ನು ಮುಚ್ಚಿದ್ದಾರೆ. ಹಾಗಾಗಿ ಜಮೀನಿಗೆ ಯಾವುದೇ ವಸ್ತುಗಳು ಮತ್ತು ದನಕರುಗಳನ್ನು ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಮುಕ್ತಿ ಹೊಂದಲು ಹೆಲಿಕಾಪ್ಟರ್ ಖರೀದಿಗೆ ಸಾಲ ಕೊಡುವಂತೆ ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

UP 1

ಜಮೀನಿನ ದಾರಿಯ ತಕರಾರನ್ನು ಸರಿಪಡಿಸುವಂತೆ ಮತ್ತೊಂದು ಪತ್ರ ಬರೆದಿರುವ ಬಸಂತಿ. ಈ ಪತ್ರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದು ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ.

modi

ಮಾಂಡ್ಸೌರ್ ಜಿಲ್ಲೆಯ ಸ್ಥಳೀಯಾಡಳಿತ ಪತ್ರದ ಕುರಿತು ತನಿಖೆ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಪತ್ರ ವೈರಲ್ ಆಗುತ್ತಿದ್ದಂತೆ ಈ ಕುರಿತು ಕಂದಾಯ ಇಲಾಖೆ ಗಮನಹರಿಸಿದ್ದು ಜಿಲ್ಲಾ ತಾಹಶೀಲ್ದಾರ್ ಬಸಂತಿ ಅವರ ಮನೆಗೆ ತೆರಳಿ ಸ್ಥಳ ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ ಎಂದು ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *