ಹೆಲ್ಮೆಟ್ ಹಾಕದೆ ಕಂದಾಯ ಇಲಾಖೆ ಸಿಬ್ಬಂದಿ ತಿರುಗಾಟ- ಎಸ್‍ಐಗೆ ಎಸಿ, ತಹಶೀಲ್ದಾರ್ ಅವಾಜ್

Public TV
1 Min Read
mnd tahashildar fine

– ಇನ್ನು ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ವಾರ್ನ್

ಮಂಡ್ಯ: ಹೆಲ್ಮೆಟ್ ಹಾಕದೆ ಕಂದಾಯ ಇಲಾಖೆ ಸಿಬ್ಬಂದಿ ಬೇಕಾಬಿಟ್ಟಿಯಾಗಿ ತಿರುಗಾಡಿದ್ದು, ದಂಡ ಹಾಕಿದ್ದಕ್ಕೆ ಎಸ್‍ಐಗೆ ಎಸಿ ಹಾಗೂ ತಹಶೀಲ್ದಾರ್ ಅವಾಜ್ ಹಾಕಿದ್ದಾರೆ.

vlcsnap 2021 05 12 13h49m59s755

ಜಿಲ್ಲೆಯ ನಾಗಮಂಗಲದಲ್ಲಿ ಘಟನೆ ನಡೆದಿದ್ದು, ಹೆಲ್ಮೆಟ್ ಹಾಕದೆ ತಿರುಗಾಡಿದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ್ದಕ್ಕೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಅಹಮದ್ ಅವರು ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‍ಐ ರವಿಶಂಕರ್ ಅವರಿಗೆ ಅವಾಜ್ ಹಾಕಿದ್ದಾರೆ. ಇನ್ನು ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ವಾರ್ನ್ ಮಾಡಿದ್ದಾರೆ.

ವಾಹನ ತಪಾಸಣೆ ವೇಳೆ ಹೆಲ್ಮೆಟ್ ಹಾಕದೆ ಬೈಕ್ ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ಎಸ್‍ಐ ದಂಡ ಹಾಕಿದ್ದರು. ದಂಡ ಹಾಕಿದ ವಿಷಯ ತಿಳಿದು ಸ್ಥಳಕ್ಕಾಗಮಿಸಿ, ಎಸಿ, ತಹಶೀಲ್ದಾರ್ ಅವಾಜ್ ಹಾಕಿದ್ದಾರೆ.

vlcsnap 2021 05 12 13h49m19s692

ನಾನು ಮ್ಯಾಜಿಸ್ಟ್ರೆಟ್ ಹೇಳುತ್ತಿದ್ದೇನೆ ಇನ್ನು ದಂಡ ಹಾಕಬೇಡಿ ಎಂದು ತಹಸೀಲ್ದಾರ್ ವಾರ್ನಿಂಗ್ ಮಾಡಿದ್ದಾರೆ. ಇದೇ ಫಸ್ಟ್ ಆ್ಯಂಡ್ ಲಾಸ್ಟ್ ಕಂದಾಯ ಇಲಾಖೆ ಸಿಬ್ಬಂದಿಯನ್ನು ಪರಿಶೀಲನೆ ಮಾಡಬೇಡಿ ಎಂದು ಬೆದರಿಸಿದ್ದಾರೆ. ಈ ಮೂಲಕ ಕಾನೂನು ಪಾಲನೆ ಬಗ್ಗೆ ಜಾಗೃತಿ ಮೂಡಿಸಬೇಕಿದ್ದ ಅಧಿಕಾರಿಗಳಿಂದಲೇ ತಪ್ಪು ಮಾಡಿದವರ ಬೆಂಬಲಕ್ಕೆ ನಿಂತಿದ್ದಾರೆ. ಎಸ್‍ಐ ಗೆ ತರಾಟೆ ತೆಗೆದುಕೊಂಡ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೊಂದು ಕಾನೂನು, ಕಂದಾಯ ಇಲಾಖೆ ಸಿಬ್ಬಂದಿಗೆ ಮತ್ತೊಂದು ಕಾನೂನಿದೆಯೇ ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *