ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆ

Public TV
1 Min Read
Mandya Murder copy

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಬಳಿಯ ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆಯಾಗಿವೆ.

ಯುವತಿಯನ್ನು ವಿಕೃತವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಮೃತದೇಹವನ್ನ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದಿದ್ದಾರೆ. ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ಯುವತಿ ರುಂಡ ಮತ್ತು ದೇಹದ ಅಂಗಾಂಗಗಳು ಪತ್ತೆಯಾಗಿವೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ

Police Jeep 1 2 medium

ಸ್ಥಳೀಯರಿಗೆ ಮೃತದೇಹ ಒಂದು ಭಾಗ ಮಾತ್ರ ಕಾಣಿಸಿತ್ತು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧಿಸಿದಾಗ ಉಳಿದ ಅಂಗಾಂಗಗಳು ಸಿಕ್ಕಿವೆ. ಘಟನೆಯಿಂದಾಗಿ ಬಂಡಿಹೊಳೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

Share This Article
Leave a Comment

Leave a Reply

Your email address will not be published. Required fields are marked *