ಹೊನ್ನಾವರದಲ್ಲಿ ಚಿರತೆ ಉಗುರುಗಳ ವಶ-ನಾಲ್ವರು ಆರೋಪಿಗಳ ಬಂಧನ

Public TV
1 Min Read
Karwar

ಕಾರವಾರ: ವನ್ಯಜೀವಿಗಳನ್ನು ಬೇಟೆಯಾಡಿ ಚಿರತೆ ಉಗುರು ಮಾರಾಟ ಮಾಡುತಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮುಗ್ವಾದ ಅಂತೋಣಿ ಮಿನಿನ್ ಫರ್ನಾಂಡಿಸ್ (48), ಬೆಳ್ಳಿಮಕ್ಕಿ ರೋಶನ್ ವಿಲ್ಲೆಂಟ್ ಲೊಬೋ (45), ಸಾಲ್ಕೋಡ್ ಮಹೇಶ ರಾಮ ನಾಯ್ಕ (36), ಹೊಸಗೋಡ ಗಣಪತಿ ನಾರಾಯಣ ಗೌಡ (29) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 16 ಚಿರತೆ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.

Leopard Nails

ಚಿರತೆ ಉಗುರು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಹೊನ್ನಾವರ ಅರಣ್ಯ ಇಲಾಖೆ ಅಧಿಕಾರಿಗಳು ಹೊನ್ನಾವರ ತಾಲೂಕಿನ ಮುಗ್ವಾ ಕ್ರಾಸ್ ಹಾಗೂ ಅರೇಅಂಗಡಿ ಸರ್ಕಲ್ ಬಳಿ ಕಾರ್ಯಾಚರಣೆ ನಡೆಸಿ ಚಿರತೆ ಉಗುರುಗಳ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಚಿರುತೆ ಉಗುರು, 1 ಬೈಕ್ ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

arrested 1280x720 1

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಧಿಕಾರಿಗಳಾದ ಶರತ್ ಶೆಟ್ಟಿ, ಶಿವಾನಂದ ಕೋಟ್ಯಾಳ, ಉಪ ವಲಯ ಅರಣ್ಯಾಧಿಕಾರಿ ರಾಜು ನಾಯ್ಕ, ತುಕಾರಾಂ, ಸುಬ್ರಹ್ಮಣ್ಯ ಗೌಡ, ಈಶ್ವರ ಗೌಡ, ಅರಣ್ಯ ರಕ್ಷಕರಾದ ಅಲ್ಲಾಮರ್ತುಜ ಬಾವಿಕಟ್ಟೆ, ಚಂದ್ರಪ್ಪ, ಯಲ್ಲಪ್ಪ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *