ಕೋಲಾರ: ರೈತ ಕಷ್ಟಪಟ್ಟು ಹೊಲದಲ್ಲಿ ಬೆಳೆದಿದ್ದ ಆಲೂಗಡ್ಡೆಯನ್ನೇ ಕಳ್ಳತನ ಮಾಡಿರುವ ಅಚ್ಚರಿಯ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಉಕ್ಕುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಕೃಷ್ಣಪ್ಪ ಹಾಗೂ ವೆಂಕಟೇಶಪ್ಪ ಎಂಬವರ ಹೊಲದಲ್ಲಿ ಖದೀಮರು ಆಲೂಗಡ್ಡೆಯನ್ನೂ ಬಿಡದೆ ಕಳವು ಮಾಡಿದ್ದಾರೆ.
ಸುಮಾರು 60 ಮೂಟೆಯಷ್ಟು ಆಲೂಗಡ್ಡೆ ಕಳ್ಳತನ ಮಾಡಲಾಗಿದೆ. ಆಲೂಗಡ್ಡೆಗೆ ಉತ್ತಮ ಬೆಲೆ ಇರುವ ಹಿನ್ನೆಲೆ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ. ಕಳೆದ ಒಂದು ವಾರದಲ್ಲಿ ಇದು ಎರಡನೇ ಪ್ರಕರಣವಾಗಿದೆ.
ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.