Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಕ್ಕೆ ಗಿಫ್ಟ್‌ – ಜನವರಿ 1 ರಿಂದ ಜಿಯೋದಿಂದ ಹೊರ ಹೋಗುವ ಎಲ್ಲ ಕರೆಗಳು ಉಚಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ವರ್ಷಕ್ಕೆ ಗಿಫ್ಟ್‌ – ಜನವರಿ 1 ರಿಂದ ಜಿಯೋದಿಂದ ಹೊರ ಹೋಗುವ ಎಲ್ಲ ಕರೆಗಳು ಉಚಿತ

Latest

ಹೊಸ ವರ್ಷಕ್ಕೆ ಗಿಫ್ಟ್‌ – ಜನವರಿ 1 ರಿಂದ ಜಿಯೋದಿಂದ ಹೊರ ಹೋಗುವ ಎಲ್ಲ ಕರೆಗಳು ಉಚಿತ

Public TV
Last updated: December 31, 2020 3:04 pm
Public TV
Share
3 Min Read
RELIANCE JIO
SHARE

ಮುಂಬೈ: ಹೊಸ ವರ್ಷಕ್ಕೆ ಜಿಯೋ ಬಳಕೆದಾರರಿಗೆ ಗಿಫ್ಟ್‌ ಸಿಕ್ಕಿದೆ. 2021 ಜನವರಿ 1 ರಿಂದ ಭಾರತದಲ್ಲಿ ಜಿಯೋದಿಂದ ಇತರ ಟೆಲಿಕಾಂ ಕಂಪನಿಗಳಿಗೆ  ಹೋಗುವ ಎಲ್ಲ ಕರೆಗಳು ಉಚಿತವಾಗಲಿದೆ.

ಜಿಯೋದಿಂದ ಜಿಯೋ ಸಿಮ್‌ಗೆ ಹೋಗುವ ಕರೆಗಳು ಉಚಿತವಾಗಿತ್ತು. ಆದರೆ ಜಿಯೋದಿಂದ ಇತರೆ ಟೆಲಿಕಾಂ ಕಂಪನಿಯ ಸಿಮ್‌ಗೆ ಹೋಗುವ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸುತ್ತಿತ್ತು. ಆದರೆ ಈಗ ಹೊರ ಹೋಗುವ ಕರೆಗಳಿಗಿದ್ದ ದರವನ್ನು ತೆಗೆದು ಹಾಕಿದೆ.

jio number one

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್‌) 2021ರ ಜನವರಿ ಒಂದರಿಂದ ದೇಶದ ಒಳಗಡೆ ಮಾಡಲಾಗುವ ಕರೆಗಳಿಗೆ ವಿಧಿಸಲಾಗುತ್ತಿದ್ದ ಇಂಟರ್‌ ಕನೆಕ್ಟ್‌ ಯೂಸೇಜ್‌ ಚಾರ್ಜ್‌ (ಐಯುಸಿ) ಕೊನೆಗೊಳಿಸಬೇಕೆಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಜಿಯೋ ಪಾಲಿಸುವುದಾಗಿ ತಿಳಿಸಿದೆ.

 

ಜಿಯೋ ಸೇವೆ ಆರಂಭಗೊಂಡ ಬಳಿಕ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರ ಹೋಗುವ ಕರೆಗೆ ದರ ವಿಧಿಸುತ್ತಿರಲಿಲ್ಲ. ಆದರೆ 2019ರ ಅಕ್ಟೋಬರ್‌ 9 ರಂದು ಜಿಯೋ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರಹೋಗುವ ಎಲ್ಲ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸಲಾಗುವುದು ಎಂದು ಪ್ರಕಟಿಸಿತ್ತು. ಟ್ರಾಯ್‌ ನಿಗದಿ ಪಡಿಸಿದಂತೆ ಐಯುಸಿ ವಿಧಿಸಲು ಮುಂದಾಗುತ್ತಿದ್ದೇವೆ ಎಂದು ಜಿಯೋ ಹೇಳಿತ್ತು.

2019ರ ಜಿಯೋ ಹೇಳಿಕೆ

All you need to know about IUC. pic.twitter.com/svdSsrmT5s

— Reliance Jio (@reliancejio) October 9, 2019

 

ಜಿಯೋ ಸೇವೆ ಆರಂಭಗೊಂಡ ಬಳಿಕ ಈ ಐಯುಸಿಯನ್ನು ತಗೆದು ಹಾಕಬೇಕೆಂದು ಟ್ರಾಯ್ ಮುಂದೆ ವಾದ ಮಂಡಿಸುತಿತ್ತು. ಆದರೆ ಬೇರೆ ಟೆಲಿಕಾಂ ಕಂಪನಿಗಳು ಐಯುಸಿಯನ್ನು ತೆಗೆದು ಹಾಕಬಾರದು ದರವನ್ನು ಹೆಚ್ಚಿಸಬೇಕು ಎಂದು ವಾದಿಸುತ್ತಿದ್ದವು. ಆದರೆ ಟ್ರಾಯ್ ಹಂತ ಹಂತವಾಗಿ ಐಯುಸಿ ದರವನ್ನು ಕಡಿತಗೊಳಿಸುತ್ತಾ ಬಂದಿತ್ತು.

ಏನಿದು ಐಯುಸಿ?
ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಟ್ರಾಯ್ ನಿಗದಿ ಪಡಿಸುತ್ತದೆ. ಉದಾಹರಣೆಗೆ ಜಿಯೋ ಗ್ರಾಹಕರೊಬ್ಬರು ವೊಡಾಫೋನ್ ಗ್ರಾಹಕರಿಗೆ ಕರೆ ಮಾಡಿದರೆ ಜಿಯೋ ಟ್ರಾಯ್ ನಿಗದಿ ಪಡಿಸಿದ ಐಯುಸಿಯನ್ನು ವೊಡಾಫೋನ್ ಕಂಪನಿಗೆ ಪಾವತಿಸಬೇಕಾಗುತ್ತದೆ.

reliance jio 4g sim buy online

2003ರಲ್ಲಿ ಒಳಬರುವ ಕರೆಯನ್ನು ಉಚಿತವಾಗಿ ನೀಡುವ ಸಲುವಾಗಿ ಟ್ರಾಯ್ ಐಯುಸಿಯನ್ನು ತಂದಿತ್ತು. 2004ರ ಫೆಬ್ರವರಿಯಲ್ಲಿ ಟ್ರಾಯ್ ಪ್ರತಿ ನಿಮಿಷಕ್ಕೆ 30 ಪೈಸೆ, 2009ರ ಏಪ್ರಿಲ್ ನಲ್ಲಿ 20 ಪೈಸೆ, 2015ರ ಮಾರ್ಚ್ ನಲ್ಲಿ 14 ಪೈಸೆ, ಬಳಿಕ 6 ಪೈಸೆ ಐಯುಸಿ ಬೆಲೆಯನ್ನು ಟ್ರಾಯ್ ನಿಗದಿಪಡಿಸಿತ್ತು.

ಐಯುಸಿಯಿಂದಾಗಿ ಇತರೇ ಟೆಲಿಕಾಂ ಕಂಪನಿಗಳು ಸಾವಿರಾರು ಕೋಟಿ ರೂ. ಆದಾಯಗಳಿಸುತ್ತಿದೆ ಎನ್ನುವುದು ಜಿಯೋ ಆರೋಪ. 2019ರಲ್ಲಿ ತಿಳಿಸಿದಂತೆ ಕಳೆದ 3 ವರ್ಷಗಳಲ್ಲಿ ಜಿಯೋ ಐಯುಸಿಗೆಂದು ಒಟ್ಟು 12 ಸಾವಿರ ಕೋಟಿ ರೂ. ಹಣವನ್ನು ವಿವಿಧ ಟೆಲಿಕಾಂ ಕಂಪನಿಗಳಿಗೆ ಪಾವತಿಸಿದೆ. ಹೊರ ಹೋಗುವ ಕರೆಗಳು ಉಚಿತವಾಗಿ ಇರುವ ಕಾರಣ ಬೇರೆ ಕಂಪನಿಯ ಗ್ರಾಹಕರು ನಮ್ಮ ಕಂಪನಿಯ ಗ್ರಾಹಕರಿಗೆ ಮಿಸ್ ಕಾಲ್ ನೀಡುತ್ತಿದ್ದರು. ಇದರಿಂದಾಗಿ ನಮಗೆ ಭಾರೀ ನಷ್ಟವಾಗಿದೆ ಎಂದು ಜಿಯೋ ಹೇಳಿತ್ತು.

ಈ ಹಿಂದೆ ಭಾರತಿ ಎಂಟರ್ಪ್ರೈಸಸ್ ಮುಖ್ಯಸ್ಥ ಸುನೀಲ್ ಮಿತ್ತಲ್ ಟ್ರಾಯ್ ಮುಖ್ಯಸ್ಥರಿಗೆ ಪತ್ರ ಬರೆದು ಪ್ರಸ್ತುತ ಐಯುಸಿ ಕಡಿಮೆ ಇದೆ. ಪಾರದರ್ಶಕವಾಗಿ ಹೊಸ ಬೆಲೆಯನ್ನು ನಿಗದಿಪಡಿಸಬೇಕೆಂದು ಮನವಿ ಮಾಡಿದ್ದರು.

trai jio medium

ಜಿಯೋ ವಿರೋಧ ಯಾಕೆ?
ಈ ಹಿಂದೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ಈ ಕಾರಣಕ್ಕಾಗಿ ಜಿಯೋ ಸಂಪೂರ್ಣವಾಗಿ ಐಯುಸಿಯನ್ನು ತೆಗೆದು ಹಾಕಬೇಕೆಂದು ವಾದ ಮಂಡಿಸಿಕೊಂಡು ಬಂದಿತ್ತು. ಐಯುಸಿಯಿಂದ ನಮಗೆ ಹೊರೆಯಾಗುತ್ತಿದೆ. ಇತರೇ ಟೆಲಿಕಾಂ ಕಂಪೆನಿಗಳು ತಮ್ಮ ಆದಾಯವನ್ನು ಹೆಚ್ಚಿಸಲು ಮಾಡಿಕೊಂಡ ತಂತ್ರ ಎಂದು ಜಿಯೋ ವಾದಿಸುತ್ತಿತ್ತು.

TAGGED:jiomukesh ambanireliance jiotechVoice Callಜಿಯೋಟೆಕ್ಟ್ರಾಯ್ದೂರ ಸಂಪರ್ಕಮುಕೇಶ್ ಅಂಬಾನಿ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
3 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
17 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
59 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?