– ಹಾಸಿಗೆ ಮೇಲೆ ಯುವತಿ, ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಪತ್ತೆ
ಲಕ್ನೋ: ಹೋಟೆಲ್ ಒಳಗೆ ಜೋಡಿಯೊಂದು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕೃಷ್ಣನಗರದಲ್ಲಿ ನಡೆದಿದೆ.
ಮೃತರನ್ನು ರಾಹುಲ್ ಮತ್ತು ನ್ಯಾನ್ಸಿ ಎಂದು ಗುರುತಿಸಲಾಗಿದೆ. ಹೋಟೆಲ್ನ ಸಿಬ್ಬಂದಿ ರೂಮಿಗೆ ಹೋಗಿ ನೋಡಿದಾಗ ಜೋಡಿಯ ಮೃತದೇಹ ಪತ್ತೆಯಾಗಿದೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಹಾಸಿಗೆಯ ಮೇಲೆ ನ್ಯಾನ್ಸಿಯ ಮೃತದೇಹ ಪತ್ತೆಯಾಗಿದ್ದು, ರಾಹುಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ರಾಹುಲ್ ನಾನ್ಸಿಗೆ ಆಮಿಷವೊಡ್ಡಿದ್ದಾನೆ ಎಂದು ಆರೋಪಿಸಿ ನ್ಯಾನ್ಸಿಯ ಕುಟುಂಬ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಎಸಿಪಿ ದೀಪಕ್ ಕುಮಾರ್ ಹೇಳಿದ್ದಾರೆ.
ಇಬ್ಬರ ಗುರುತನ್ನು ಆಯಾ ಕುಟುಂಬಗಳು ಮಾಡಿದ್ದು, ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟಣಾ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಕರೆಯಲಾಗಿದೆ ಎಂದು ಎಸಿಪಿ ತಿಳಿಸಿದ್ದಾರೆ.
ನಾವು ಎರಡು ಕುಟುಂಬದವರನ್ನು ಮತ್ತು ಹೋಟೆಲ್ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದೇವೆ. ಕಳೆದ ನಾಲ್ಕು ವರ್ಷಗಳಿಂದ ನ್ಯಾನ್ಸಿ ಮತ್ತು ರಾಹುಲ್ ಪರಸ್ಪರ ಪರಿಚಯರಿದ್ದರು. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇನೆ. ಆದರೆ ಇಬ್ಬರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಎಸಿಪಿ ಹೇಳಿದ್ದಾರೆ.