ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

Public TV
1 Min Read
Narayanapura Dam Raichur

ರಾಯಚೂರು: ನಾರಾಯಣಪುರ ಜಲಾಶಯದಿಂದ (Narayanapura Dam) ಕೃಷ್ಣಾ ನದಿಗೆ (Krishna River) ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಜಾಗೃತರಾಗಿರುವಂತೆ ನದಿ ಪಾತ್ರದ ಗ್ರಾಮಗಳ ಜನರಿಗೆ ರಾಯಚೂರು (Raichur) ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ಜನ ಜಾನುವಾರು ನದಿಪಾತ್ರಕ್ಕೆ ತೆರಳದಂತೆ ಸೂಚಿಸಿದೆ. ಪ್ರವಾಹ ಪರಿಸ್ಥಿತಿ ಉಂಟಾದರೆ ಎದುರಿಸಲು ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಜಲಾಶಯದ 25 ಗೇಟ್‌ಗಳ ಮೂಲಕ 1,45,750 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1,40,000 ಕ್ಯೂಸೆಕ್ ಒಳಹರಿವು ಇದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ವಿಚಾರದಲ್ಲಿ ಸರ್ಕಾರದ ಎಚ್ಚರಿಕೆ ಹೆಜ್ಜೆ

ಶೇಕಡಾ 85.90 ರಷ್ಟು ಜಲಾಶಯ ಭರ್ತಿಯಾಗಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.615 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳ ಹರಿವು ಹೆಚ್ಚಾದ್ರೆ ನದಿಗೆ ಇನ್ನೂ ಹೆಚ್ಚು ಪ್ರಮಾಣದ ನೀರು ಬಿಡುವ ಸಾಧ್ಯತೆಯಿದೆ. ಇದನ್ನೂ ಓದಿ: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 14 ಕೋಟಿ ಮೌಲ್ಯದ ಗಾಂಜಾ ಸೀಜ್ – ಮಹಿಳೆ ಅರೆಸ್ಟ್

Share This Article