Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ

Bengaluru City

1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ

Public TV
Last updated: June 22, 2021 11:16 pm
Public TV
Share
3 Min Read
BSY 7
SHARE

– ರಾಜ್ಯ ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಉಪಕ್ರಮ

ಬೆಂಗಳೂರು : ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ‘ಕಲಿಕಾ ನಿರ್ವಹಣಾ ವ್ಯವಸ್ಥೆ’ (Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.

ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.ಅಶ್ವತ್ಥನಾರಾಯಣ ತಿಳಿಸಿದರು.

BSY 1 2 medium

ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಸಚಿವರು ಜಿಲ್ಲೆಗಳಿಂದ ಭಾಗಿಯಾಗುವರು ಹಾಗೂ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.

ಈ ಕಾರ್ಯಕ್ರಮ ಉನ್ನತ ಶಿಕ್ಷಣ ಇಲಾಖೆಯ ‘ವಿಜಯೀಭವ’, ಜ್ಞಾನನಿಧಿ ಯುಟ್ಯೂಬ್ ಚಾನೆಲ್‍ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‍ಬುಕ್ & ಟ್ವಿಟ್ಟರ್ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ. ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ..
https://youtube.com/c/VijayiBhava
https://youtube.com/c/JnanaNidhiDCE
https://www.facebook.com/Department-of-Collegiate-Education-100568944804207/
https://twitter.com/collegiate_of?s=09

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು. ಈ ಯೋಜನೆಗಾಗಿ ರಾಜ್ಯ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ. ಇದರ ಜತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಾಳೆಯ ಕಾರ್ಯಕ್ರಮದ ನಿಮಿತ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಮಾರ್ಟ್ ಕ್ಲಾಸ್ ರೂಂನ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ.

#KarnatakaLMS – ಡಿಜಿಟಲ್ ಕಲಿಕೆಯತ್ತ ಒಂದು ದಿಟ್ಟ ಹೆಜ್ಜೆ!

ನಾಳೆ(23/06/2021) ನಮ್ಮ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ಟ್ಯಾಬ್ಲೆಟ್ ಪಿ.ಸಿ. ವಿತರಣೆ ನಡೆಯಲಿದೆ. ರಾಜ್ಯದ ಉನ್ನತ ಶಿಕ್ಷಣವನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವತ್ತ ನಮ್ಮ ನಿರಂತರ ಶ್ರಮವಿರಲಿದೆ. pic.twitter.com/piCStYm1Rw

— Dr. C.N. Ashwath Narayan (@drashwathcn) June 22, 2021

ಯಾವುದೇ ವಿದ್ಯಾರ್ಥಿ ಸಾಮಾಜಿಕ, ಆರ್ಥಿಕ ಅಥವಾ ಇನ್ನಾವುದೇ ಕಾರಣದಿಂದ ಕೋವಿಡ್ ಕಾಲದಲ್ಲಿ ಕಲಿಕೆಯಿಂದ ವಂಚಿತರಾಗಬಾರದು ಎನ್ನುವುದೇ ಟ್ಯಾಬ್ಲೆಟ್ ಪಿಸಿ ಯೋಜನೆಯ ಮುಖ್ಯ ಉದ್ದೇಶ. ಕೋವಿಡ್ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್ ಪಿಸಿಗಳ ಮೂಲಕ ಎಲ್‍ಎಂಎಸ್ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು.

ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್ ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳು ನೆರವಾಗುತ್ತವೆ.

Ashwath Narayan 2 2 medium

ಈ ಟ್ಯಾಬ್ಲೆಟ್‍ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್ ಬಳಕೆಯಿಂದ ಇವುಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್ ಬಳಕೆಯ ಮೂಲಕವೇ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು.

ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ.

TAGGED:Ashwaththa Narayanacm yeddyurappaHigher Education StudentPublic TVtabletಅಶ್ವತ್ಥ ನಾರಾಯಣಉನ್ನತ ಶಿಕ್ಷಣ ವಿದ್ಯಾರ್ಥಿಟ್ಯಾಬ್ಲೆಟ್ಪಬ್ಲಿಕ್ ಟಿವಿಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Cylinder Blast
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

Public TV
By Public TV
4 minutes ago
Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
29 minutes ago
Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
59 minutes ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
1 hour ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
2 hours ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?