-ಕೇರಳದ ಗಡಿ ಓಪನ್ ಆಗ್ತಿದಂತೆ ದಂಧೆ ಶುರು
ಮಂಗಳೂರು: 175 ಕೋಟಿ ಮೌಲ್ಯದ ಬರೋಬ್ಬರಿ 175 ಕೆಜಿ ಗಾಂಜಾವನ್ನು ಪುತ್ತೂರು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. 1,75,000 ರೂಪಾಯಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. 3 ಲಕ್ಷ ರೂ. ಮೌಲ್ಯದ ಪಿಕಪ್ ವಾಹನ ಮತ್ತು 4 ಲಕ್ಷ ರೂ. ಮೌಲ್ಯದ ಕಾರು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರದ ದೂಮಕ್ಕಾಡ್ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ (26), ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಹೊಸಂಗಡಿಯ ಮಿಜಿರ್ಪಳ್ಳ ನಿವಾಸಿ ಮಹಮ್ಮದ್ ಶಫೀಕ್ (31) ಮತ್ತು ಬಂಟ್ವಾಳ ತಾಲೂಕು ಕನ್ಯಾನದ ಮಡಕುಂಜ ನಿವಾಸಿ ಖಲಂದರ್ ಶಾಫಿ(26) ಬಂಧಿತ ಆರೋಪಿಗಳು.
ಇವರ ಪೈಕಿ ಇಬ್ರಾಹಿಂ ಅರ್ಷದ್ ಮೇಲೆ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ ಈಗಾಗಲೇ 2 ಪ್ರಕರಣಗಳು ದಾಖಲಾಗಿವೆ. ಖಲಂದರ್ ಶಾಫಿ ಮೇಲೆ ವಿಟ್ಲ ಠಾಣೆಯಲ್ಲಿ 2 ಗಾಂಜಾ ಪ್ರಕರಣ,1 ಕೊಲೆ ಯತ್ನ, ಪ್ರಕರಣ, ಕಾವೂರು ಠಾಣೆಯಲ್ಲಿ ಒಂದು ಗಾಂಜಾ ಪ್ರಕರಣ ದಾಖಲಾಗಿದೆ.
ಇದೊಂದು ಅಂತಾರಾಜ್ಯ ಗಾಂಜಾ ಸಾಗಾಟ ಜಾಲವಾಗಿದ್ದು, ಇದರ ಹಿಂದೆ ದೊಡ್ಡದೊಂದು ನೆಟ್ವರ್ಕ್ ಕೆಲಸ ಮಾಡುತ್ತಿದೆ ಎಂಬ ಸಂಶಯ ವ್ಯಕ್ತವಾಗಿದೆ. ಇನ್ನು ಈ ಕಾರ್ಯಚರಣೆ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕಡಲೂರು ಮಂಗಳೂರಿನ ಮಾದಕ ಜಗತ್ತಿಗೂ ಕೇರಳಕ್ಕೂ ಇನ್ನಿಲ್ಲಿದ ನಂಟಿದೆ. ಕೇರಳದಿಂದ ಭಾರೀ ಪ್ರಮಾಣದ ಗಾಂಜಾ ದಕ್ಷಿಣ ಕನ್ನಡ ಜಿಲ್ಲೆಗೆ ಬರುತ್ತೆ. ಆದ್ರೆ ಕಳೆದ 5 ತಿಂಗಳಿಂದ ಈ ದಂಧೆಯ ಚೈನ್ ಲಿಂಕ್ ಕಟ್ ಆಗಿತ್ತು. ಅದಕ್ಕೆ ಕಾರಣ ಕೊರೊನಾ. ಲಾಕ್ಡೌನ್ ನಲ್ಲಿ ದಂಧೆಕೋರರು ಕೂಡ ತಣ್ಣಗಾಗಿದ್ರು. ಯಾಕಂದ್ರೆ ಕೇರಳ ಮತ್ತು ಕರ್ನಾಟಕ ಗಡಿಗಳಲ್ಲಿ ಎಂಟ್ರಿ ನಿಷೇಧವಾಗಿತ್ತು. ಅಲ್ಲದೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಹೆಚ್ಚಾಗಿದ್ದರಿಂದ ಮಾಫಿಯಾ ಸೈಲೆಂಟಾಗಿತ್ತು. ಆದ್ರೆ ಕಳೆದ ಒಂದು ವಾರದಿಂದ ಕೇರಳ ಮತ್ತು ಕರ್ನಾಟಕ ಸಂಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಸುಲಭ ಪಾಸ್ ಗಳನ್ನು ಮಾಡಲಾಗಿದೆ. ಇದು ಆಗಿದ್ದ ಆಗಿದ್ದು ಗಾಂಜಾ ಮಾಫಿಯ ಭಾರೀ ಪ್ರಮಾಣದ ಗಾಂಜನ್ನು ವಶಪಡಿಸಿಕೊಂಡಿದೆ. ಪುತ್ತೂರು ನಗರ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಂಡು ಎರಡು ವಾಹನಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.