ರಾಯಚೂರು: ದೇವದುರ್ಗ ತಾಲೂಕಿನ ವೀರಗೋಟದ ಆದಿ ಮೌನಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಇಷ್ಟಲಿಂಗ ಮಹಾಪೂಜೆಯನ್ನು ನೆರವೇರಿಸಿದ್ದಾರೆ.
ಆದಿ ಮೌನಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 1 ಲಕ್ಷ 96 ಸಾವಿರ ಜನ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು. 12ನೇ ಶತಮಾನದಲ್ಲಿ ನಡೆದಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಈಗ ಪುನಃ ನಡೆಯುತ್ತಿದೆ. 1969ರಲ್ಲಿ ವಿಜಯಪುರ ಜಿಲ್ಲೆಯ ಲಚ್ಯಾಣದಲ್ಲಿ ಎರಡನೇ ಬಾರಿ ನಡೆದಿತ್ತು. ಈಗ 50 ವರ್ಷ ನಂತರ ವೀರಗೋಟದಲ್ಲಿ ಬೃಹತ್ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಯುತ್ತಿದೆ.
ವೀರಗೋಟದ ಅಡವಿಲಿಂಗ ಮಹಾರಾಜರು ಲೋಕ ಕಲ್ಯಾಣಾರ್ಥವಾಗಿ ಈ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ಜನ ಯತಿವಟುಗಳು, ವಿವಿಧ ಮಠಗಳ ಸುಮಾರು 800 ಸ್ವಾಮಿಜಿಗಳು ಪಾಲ್ಗೊಂಡಿದ್ದಾರೆ. ಇಂದು ಮಾನ್ವಿ ಶಾಸಕ ವೆಂಕಟಪ್ಪ ನಾಯಕ್ ಮಹಾಪೂಜೆಯಲ್ಲಿ ಪಾಲ್ಗೊಂಡು ಲಿಂಗಪೂಜೆ ನೆರವೇರಿಸಿದರು.
ಈ ಇಷ್ಟಲಿಂಗ ಮಹಾಪೂಜೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದು, ಈ ಅದ್ಭುತ ದೃಶ್ಯವನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv