ಬಾಗಲಕೋಟೆ: ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಜಮಖಂಡಿ-ಮುಧೋಳ ಮಾರ್ಗ ಮಧ್ಯೆ ನಡೆದಿದೆ.
ಸ್ಕಾರ್ಪಿಯೋ ಬೆಳಗಾವಿ ಜಿಲ್ಲೆಯ ಸವದತ್ತಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೊರಟಿತ್ತು. ಈ ವೇಳೆ ಸ್ಕಾರ್ಪಿಯೋ ಕಾರ್ ಟೈರ್ ಬ್ಲಾಸ್ಟ್ ಆಗಿದ್ದಕ್ಕೆ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಕಾರ್ಪಿಯೋ ಕಾರ್ ಟೈರ್ ಬ್ಲಾಸ್ಟ್ ಆಗಿ ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿದೆ.
ಸದ್ಯ ಗಾಯಾಳುಗಳನ್ನು ತಾಲೂಕು ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.