ಹೈದರಾಬಾದ್/ಮಂಡ್ಯ: ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದ ನಿವಾಸಿಗಳು ಖಾಸಗಿ ಬಸ್ನಲ್ಲಿ ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಮಂತ್ರಾಲಯ ಕರ್ನೂಲ್ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.
ಎದುರುಗಡೆಯಿಂದ ಬಂದ ಕಾರನ್ನು ಅವಾಯ್ಡ್ ಮಾಡಲು ಹೋಗಿ ಬಸ್ ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಒಬ್ಬರು ಮೃತರಾಗಿದ್ದಾರೆ. ಬಸ್ನಲ್ಲಿ 45 ಜನ ಪ್ರಯಾಣಿಕರಿದ್ದು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಲ್ಕು ಜನರ ಸ್ಥಿತಿ ಚಿಂತಾಜನಕವಾಗಿದೆ.
ಮಂಡ್ಯ ಜಿಲ್ಲೆಗೆ 2018-19 ಕರಾಳ ವರ್ಷವಾಗಿ ಕಾಡುತ್ತಿದೆಯಾ..!? ಬಸ್ ದುರಂತದಲ್ಲಿ ಹತ್ತಾರು ಜೀವ ಕಳೆದುಕೊಳ್ಳಲಾಯಿತು. ಅಂಬರೀಶ್ ಮೃತಪಟ್ಟರು, ವೀರಯೋಧ ಗುರು ಹುತಾತ್ಮರಾದರು. ಆ ಬಳಿಕ ಮಂಡ್ಯದಲ್ಲಿ ಬಸ್ ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟಿದ್ದಾರೆ. ಇದೀಗ ಮಂತ್ರಾಲಯ ಪ್ರವಾಸ ಹೋಗಿ ವಾಪಸ್ ಬರುವಾಗ ಭೀಕರ ದುರಂತ ಸಂಭವಿಸಿ ಓರ್ವ ಮೃತಪಟ್ಟರೆ, 20 ಜನ ಗಾಯಗೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv