Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಕೆಶಿ

Bengaluru City

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಕೆಶಿ

Public TV
Last updated: June 18, 2024 8:11 pm
Public TV
Share
4 Min Read
dk shivakumar 2
SHARE

ಬೆಂಗಳೂರು: ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ (Kempegowda Jayanti) ಆಚರಿಸಲು 1 ಲಕ್ಷ ರೂ. ನೀಡಲಾಗುವುದು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ.ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ ರೂ., ತಾಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ರೂ. ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು, ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು. ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಇದನ್ನೂ ಓದಿ: ಭ್ರಷ್ಟಾಚಾರ, ಕಮಿಷನ್ ದಂಧೆ ನಿಲ್ಲಿಸಿದ್ರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತೆ: ಎಎಪಿ

ಹುಲಿಯೂರು ದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ. ಕೆಂಪೇಗೌಡರು ನಿರ್ಮಾಣ ಮಾಡಿದ್ದ ಗೋಪುರಗಳನ್ನು ದಾಟಿ ಬೆಂಗಳೂರು ಮರ‍್ನಾಲ್ಕು ಪಟ್ಟು ಹೆಚ್ಚು ಬೆಳೆದಿದೆ. ಬೆಂಗಳೂರು ಇಷ್ಟು ಅಗಾಧವಾಗಿ ಬೆಳೆಯಬಹುದು ಎನ್ನುವ ಕಲ್ಪನೆ ಸ್ವತಃ ಕೆಂಪೇಗೌಡರಿಗೆ ಇರಲಿಲ್ಲ. ಈ ನಗರ ಸ್ಥಾಪಿಸಿದ ಮಹಾನ್ ವ್ಯಕ್ತಿಯ ಜಯಂತಿಯನ್ನು ಇತರೇ ಸಾಧಕರ ಜಯಂತಿಯಂತೆ ಆಚರಿಸಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಠಾಣೆಯಲ್ಲಿ ಪವಿತ್ರಾ ಗೌಡ ಕುಸಿದು ಬಿದ್ದಿದ್ದು ಲೋ ಬಿಪಿಯಿಂದ: ವೈದ್ಯೆ

ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾರ್ಡ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕಾ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು. ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ಧಿಪಡಿಸುವ ಕ್ರಿಯಾಯೋಜನೆ ಸಿದ್ದ ಪಡಿಸಲಾಗಿದೆ. ಅವರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಜನರ ದುಡ್ಡು ತಗೊಂಡು ಜನರಿಗೆ ಕೊಡೋಕೆ ನೀವೇ ಆಡಳಿತ ಮಾಡಬೇಕಾ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ಧಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಚಿಸಲಾಗಿದೆ. ಕೆಂಪೇಗೌಡರನ್ನು ಕೇವಲ ಒಂದು ಜಾತಿಗೆ ಸೀಮಿತ ಮಾಡಬಾರದು. ಜಾತ್ಯಾತೀತ ತತ್ವದಲ್ಲಿ ಆಚರಣೆ ಮಾಡಬೇಕು. ಕೆಂಪೇಗೌಡರ ಜಯಂತಿ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ಈ ರೀತಿ ನಮ್ಮ ಸರ್ಕಾರ ಬಿಂಬಿಸುವುದಿಲ್ಲ. ಎಲ್ಲಾ ವರ್ಗದ ಜನರಿಗೂ ಕೆಂಪೇಗೌಡರು ಸಹಕಾರ ನೀಡಿದ್ದಾರೆ. ಬಸವಣ್ಣನವರ ಜಯಂತಿಯನ್ನು ಕೇವಲ ಲಿಂಗಾಯತರು ಹಾಗೂ ಅಂಬೇಡ್ಕರ್ ಅವರ ಜಯಂತಿಯನ್ನು ಪರಿಶಿಷ್ಟರು ಮಾಡುತ್ತಿದ್ದಾರೆ. ನಾವು ಎಲ್ಲಾ ಸಂಘ ಸಂಸ್ಥೆಗಳನ್ನು, ಸಮುದಾಯಗಳನ್ನು ಸೇರಿಸಿಕೊಂಡು ಆಚರಣೆ ಮಾಡಬೇಕು. ಸಭೆಯಲ್ಲಿ 100ಕ್ಕೂ ಉತ್ತಮವಾದ ಸಲಹೆಗಳು ಬಂದಿವೆ. ಇದರಲ್ಲಿ ಸೂಕ್ತವಾದವುಗಳನ್ನು ಅಧಿಕಾರಿಗಳ ಬಳಿ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಇತರೇ ರಾಜ್ಯಗಳ 60% ರಷ್ಟು ಜನರು ಬೆಂಗಳೂರಿನ ವಾತಾವರಣ, ಶಿಕ್ಷಣ ಸೇರಿದಂತೆ ಇತರೇ ಸೌಲಭ್ಯಗಳಿಗೆ ಮಾರುಹೋಗಿದ್ದಾರೆ. ದೆಹಲಿ ನಂತರ ಬೆಂಗಳೂರನ್ನು ದೇಶ- ವಿದೇಶಿಯರು ನೋಡುವಂತಾಗಿದೆ. ಸರ್ವಜನಾಂಗಕ್ಕೂ ಬೆಂಗಳೂರು ಆಪ್ತವಾಗಿದೆ. ಕೆಂಪೇಗೌಡರ ಅಭಿವೃದ್ಧಿಯ ಹೆಜ್ಜೆ ನಂತರ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ವಿಕಾಸಸೌಧ, ಉದ್ಯೋಗ ಸೌಧ ನಿರ್ಮಾಣವಾಯಿತು. ಇದಾದ ನಂತರ ಪ್ರವಾಸೋದ್ಯಮದಲ್ಲಿ ಸ್ವಲ್ಪ ಹಿಂದೆ ಬಿದ್ದಿದೆ. ಒಂದಷ್ಟು ಹಳೆಯ ದೇವಾಲಯಗಳು ಬಿಟ್ಟರೆ ಪ್ರೇಕ್ಷಣೀಯ ಸ್ಥಳಗಳು ಇಲ್ಲ. ಅಲ್ಲದೇ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಸಮಸ್ಯೆ ನಿವಾರಣೆಗೆ ಕಟ್ಟಡಗಳನ್ನು ಒಡೆಯಲು ಆಗುವುದಿಲ್ಲ. ಆದ ಕಾರಣ ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ. ಮೂಲ ಸೌಕರ್ಯಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಈ ನಾಡು ಕಟ್ಟಿದಂತಹ ಕೆಂಪೇಗೌಡರನ್ನು ನಾವು ಸ್ಮರಿಸಿಕೊಳ್ಳಬೇಕು. ಹಿಂದಿನ ಸರ್ಕಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿತ್ತು. ಅದರ ಅಕ್ಕಪಕ್ಕ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ತರಾತುರಿಯಲ್ಲಿ ಪ್ರಧಾನಮಂತ್ರಿಗಳನ್ನು ಕರೆಸಿ ಕೆಂಪೇಗೌಡರ ಪ್ರತಿಮೆಯನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿದೆ. ಈ ಉಸ್ತುವಾರಿಯನ್ನು ಸಚಿವರಾದ ಮುನಿಯಪ್ಪ ಅವರು ಹಾಗೂ ಕೃಷ್ಣಭೈರೇಗೌಡರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಮಹಾರಾಣಿ ವಿವಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

TAGGED:bengalurucongressDK ShivakumarKempegowda Jayantiಕಾಂಗ್ರೆಸ್ಕೆಂಪೇಗೌಡ ಜಯಂತಿಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
24 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
49 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?