ಉಗ್ರರಿಂದ ಗುಂಡಿನ ದಾಳಿ – ಓರ್ವ ಪೊಲೀಸ್‌ ಹುತಾತ್ಮ, ಇಬ್ಬರಿಗೆ ಗಾಯ

Public TV
1 Min Read
srinagar fire

ಶ್ರೀನಗರ: ಇಲ್ಲಿನ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಸೇನಾಪಡೆ ಪ್ರದೇಶವನ್ನು ಸುತ್ತುವರಿದಿದೆ. ಉಗ್ರರ ಗುಂಡಿನ ದಾಳಿಗೆ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

ಲಾಲ್ ಬಜಾರ್‌ನಲ್ಲಿ ನಾಕಾ ಪಾರ್ಟಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ದಾಳಿಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಗುಂಡಿನ ದಾಳಿ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ನಡುವೆ ಹೆಚ್ಚಿನ ಭದ್ರತೆ ಇದ್ದರೂ ಈ ದಾಳಿ ನಡೆದಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *