Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ಸಾವಿರ ಕ್ರೀಡಾಪಟುಗಳ ಲಸಿಕೆ ಅಭಿಯಾನಕ್ಕೆ ಡಾ. ನಾರಾಯಣಗೌಡ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | 10 ಸಾವಿರ ಕ್ರೀಡಾಪಟುಗಳ ಲಸಿಕೆ ಅಭಿಯಾನಕ್ಕೆ ಡಾ. ನಾರಾಯಣಗೌಡ ಚಾಲನೆ

Corona

10 ಸಾವಿರ ಕ್ರೀಡಾಪಟುಗಳ ಲಸಿಕೆ ಅಭಿಯಾನಕ್ಕೆ ಡಾ. ನಾರಾಯಣಗೌಡ ಚಾಲನೆ

Public TV
Last updated: June 10, 2021 2:11 pm
Public TV
Share
3 Min Read
NARYAN GOWDA
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಇಳಿಮುಖವಾಗುತ್ತಿದೆ. ಆದಾಗ್ಯೂ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಹಾಗೂ ಲಸಿಕೆಯನ್ನು ಪಡೆದುಕೊಳ್ಳುವುದು ಅವಶ್ಯಕ. ದೈಹಿಕ ಕ್ಷಮತೆಯನ್ನು ಸದಾಕಾಲ ಕಾಪಾಡಿಕೊಳ್ಳಬೇಕಾಗಿರುವುದು ಕ್ರೀಡಾಪಟುಗಳ ಆದ್ಯ ಕರ್ತವ್ಯ. ಅವರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ ಕೂಡ ಹೌದು. ಹೀಗಾಗಿ ಕ್ರೀಡಾಪಟುಗಳಿಗೆ ಕೋವಿಡ್ -19 ಲಸಿಕೆ ನೀಡುವ ಸಲುವಾಗಿ ಅಭಿಯಾನ ಆರಂಭಿಸಲಾಗಿದೆ. ರಾಜ್ಯಾದ್ಯಂತ ಇರುವ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.

NARYAN GOWDA 1 medium

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಖ್ಯಾತ ಬ್ಯಾಡ್ಮಿಂಟನ್ ಕ್ರೀಡಾಪಟು ಅನುಪ್ ಶ್ರೀಧರ್ ಅವರಿಗೆ ಲಸಿಕೆ ಹಾಕಿಸುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಡಾ. ನಾರಾಯಣ ಗೌಡ ಅವರು, ಇಂದು ಮತ್ತು ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ. ಎರಡೇ ದಿನಕ್ಕೆ ಅಭಿಯಾನವನ್ನು ಮುಗಿಸೋದಿಲ್ಲ. ಎಲ್ಲ ಜಿಲ್ಲಾ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಈ ಅಭಿಯಾನ ನಡೆಯುತ್ತಿದೆ. ಪ್ರತಿಯೊಬ್ಬ ಕ್ರೀಡಾಪಟುಗಳು ಬಂದು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಜಿಲ್ಲಾ ಕೇಂದ್ರಗಳಲ್ಲೂ ಲಸಿಕೆಯನ್ನು ನೀಡಲಾಗುತ್ತಿದ್ದು, ಎಲ್ಲ ಕ್ರೀಡಾಪಟುಗಳು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

FotoJet 9 2

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ಈ ಅಭಿಯಾನವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ 2200 ಕ್ರೀಡಾಪಟುಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇಂದು ಮತ್ತು ನಾಳೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವವರಿಗೆ ಲಸಿಕೆ ನೀಡಲಾಗುತ್ತದೆ. ಈಗ ಹೆಸರು ನೋಂದಾಯಿಸಿಕೊಂಡವರಿಗೆ ಅಭಿಯಾನವನ್ನು ಮುಂದುವರಿಸಿ ಲಸಿಕೆಯನ್ನು ನೀಡಲಾಗುತ್ತದೆ. ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಅಭಿಯಾನ ಆರಂಭವಾಗಿದ್ದು, ಎಲ್ಲ ಕ್ರೀಡಾಪಟುಗಳು ಲಸಿಕೆ ಪಡೆದುಕೊಂಡ ನಂತರ ಅಭಿಯಾನವನ್ನು ಮುಕ್ತಾಯಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

ಇದು ಮೊದಲ ಹಂತದ ಲಸಿಕಾ ಅಭಿಯಾನವಾಗಿದ್ದು, ನಿಗದಿತ ಸಮಯದ ನಂತರ ಎರಡನೇ ಹಂತದ ಲಸಿಕೆಯನ್ನೂ ಸಹ ಇದೇ ಮಾದರಿಯಲ್ಲಿ ನೀಡಲಾಗುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವರ ಜೊತೆ ಚರ್ಚಿಸಿ ಕ್ರೀಡಾಪಟುಗಳಿಗೆ ಲಸಿಕಾಕರಣ ಅಭಿಯಾನದ ರೂಪುರೇಷೆಯನ್ನು ಸಿದ್ಧಪಡಿಸಿದ್ದಾರೆ. ಇಲಾಖೆಯ ಕಾರ್ಯಕ್ಕೆ ಎಲ್ಲ ಕ್ರೀಡಾಪಟುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕ್ರೀಡಾಟುಗಳ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ನಾಳೆಯಿಂದ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ ಅಭಿಯಾನ ಆರಂಭವಾಗಲಿದೆ. ಎಲ್ಲ ಕ್ರೀಡಾಪಟುಗಳಿಗೆ ಲಸಿಕೆ ಸಿಗುವ ತನಕ ಅಭಿಯಾನ ಮುಂದುವರಿಯಲಿದೆ.@CMofKarnataka #KarnatakaFightsCorona pic.twitter.com/JcfOdNlzwo

— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) June 9, 2021

ಮೊದಲ ಡೋಸ್ ಲಸಿಕೆ ಪಡೆದ ಖ್ಯಾತ ಕ್ರೀಡಾಪಟುಗಳು: ಬ್ಯಾಡ್ಮಿಂಟನ್ ಆಟಗಾರ ಅನೂಪ್ ಶ್ರೀಧರ್, ಪಿ.ಎನ್. ಪ್ರಕಾಶ್- ಶೂಟರ್, ನಿಖಿಲ್- ಶೂಟರ್, ನಿಶಿತಾ- ರೋಯಿಂಗ್, ಶ್ರೇಯಾ ಬಿ. – ರೋಯಿಂಗ್, ಭೂಮಿಕಾ ಆರ್. ಕೇಸರಕರ್- ಸ್ಮಿಮ್ಮರ್, ಪ್ರಿಯಾ ಮೋಹನ್- ಅಥ್ಲೆಟಿ , ನ್ಯಾಷನಲ್ ಚಾಂಪಿಯನ್ ಗಳಾದ ಐಶ್ವರ್ಯ, ಯಶ್ವಂತ್, ಅಕ್ಷಯ್ ಸೇರಿದಂತೆ ನೂರಾರು ಕ್ರೀಡಾಪಟುಗಳು ಲಸಿಕೆ ಪಡೆದರು. ಇದನ್ನೂ ಓದಿ: ಕ್ರಿಕೆಟ್ ವಿಶ್ವಕಪ್‍ಗಾಗಿ ಐಸಿಸಿ ಮಹತ್ವದ ನಿರ್ಧಾರ – ಬದಲಾವಣೆಯ ಪರ್ವ ಆರಂಭ

ಸಂಸದ ಪಿ.ಸಿ. ಮೋಹನ್, ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಲಾಖೆ ಆಯುಕ್ತ ಗೋಪಾಲಕೃಷ್ಣ, ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

TAGGED:bengaluruCoronaCoronavirusCovid 19narayana gowdaPublic TVsportsvaccineಕೊರೊನಾಕೊರೊನಾ ವೈರಸ್ಕೋವಿಡ್ 19ಕ್ರೀಡೆನಾರಾಯಣ ಗೌಡಪಬ್ಲಿಕ್ ಟಿವಿಬೆಂಗಳೂರುಲಸಿಕೆ
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
35 minutes ago
car hits ksrtc bus on bengaluru mysuru expressway elderly couple saved by seat belts
Crime

ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Public TV
By Public TV
58 minutes ago
Fire at Janardhan Reddys model house in Ballari
Bellary

ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ನಲ್ಲಿ ಅಗ್ನಿ ಅವಘಡ – ಕಾಂಗ್ರೆಸ್‌ನವರ ಕೃತ್ಯ ಎಂದ ಸೋಮಶೇಖರ ರೆಡ್ಡಿ

Public TV
By Public TV
1 hour ago
Jammu Kashmir Encounter Jaish Terrorist Dead
Crime

ಜಮ್ಮು ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ಜೈಶ್ ಉಗ್ರ ಬಲಿ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
By Public TV
2 hours ago
Karkala Accident
Crime

ಕಾರ್ಕಳ | ಮೀಯಾರು ಬಳಿ ಭೀಕರ ಅಪಘಾತ – ಮೂವರು ಸಾವು, 8 ಮಂದಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?