Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

Bengaluru City

ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

Public TV
Last updated: August 29, 2018 5:09 pm
Public TV
Share
2 Min Read
PEJAWARA
SHARE

– ಶಿರೂರು ಬಗ್ಗೆ ಬಹಳ ಪ್ರೀತಿಯಿತ್ತು

ಬೆಂಗಳೂರು: ಕೊಡಗು ಮತ್ತು ಕೇರಳ ರಾಜ್ಯಕ್ಕೆ ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ತಲಾ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಅಂತ ಪೇಜಾವರ ವಿಶ್ವೇಶ ತೀರ್ಥ ಶ್ರೀ ಘೋಷಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಶೀಘ್ರದಲ್ಲೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಅಂದ ಅವರು, ಸರ್ಕಾರ ಹಾಗೂ ರಾಜಕಾರಣಿಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ರು. ಪರಿಸರ ಕಾಳಜಿ ಇಲ್ಲದ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ ಕೇರಳ, ಕೊಡಗಿನಲ್ಲಿ ಇಂತಹ ಅನಾಹುತಗಳು ಆಗಿದೆ. ಈ ಬಗ್ಗೆ ವಿಜ್ಞಾನಿಗಳ ಜೊತೆ ಚರ್ಚೆ ನಡೆಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕೆಂದು ಸಲಹೆಯಿತ್ತರು.

ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಉಡುಪಿಯ ಪಾಜಕದಲದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗ್ತಿದೆ. ಹುಬ್ಬಳ್ಳಿ, ರಾಯಚೂರು, ಕೊಪ್ಪಳ ವಿದ್ಯಾನಂದ ಗುರುಕುಲ ವಸತಿ ಶಾಲೆ ಕಾಲೇಜು ಆರಂಭಿಸಲಾಗುವುದು. ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಅಲ್ಲಿನ ಜನರ ಅಭಿಪ್ರಾಯ ಪಡೆಯಬೇಕು. ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಅಂದ್ರು.

ETTINAHOLE PROJECT

ಎತ್ತಿನ ಹೊಳೆ ಯೋಜನೆಯೇ ಕೊಡಗಿನ ಸ್ಥಿತಿಗೆ ಕಾರಣ ಅನ್ನುವ ಮಾತುಗಳು ಕೇಳಿ ಬರ್ತಿದೆ. ಈ ಬಗ್ಗೆ ನನಗೆ ಅಷ್ಟು ಗೊತ್ತಿಲ್ಲ, ನಾನು ವಿಜ್ಞಾನಿ ಅಲ್ಲ. ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲಾಗ್ತಿದೆ. ನಾನು ಎತ್ತಿನ ಹೊಳೆ ಯೋಜನೆ ವಿರೋಧಿ ಅಲ್ಲ. ಎತ್ತಿನ ಹೊಳೆ ಯೋಜನೆ ಉತ್ತಮ ಯೋಜನೆಯಾಗಿದೆ. ಸರ್ಕಾರ ಪರಿಶೀಲಿಸಿ, ವಿಚಾರ ಮಾಡಿ ಯೋಜನೆ ಮುಂದುವರಿಸಿ. ನಾನು ಪರಿಸರ ಪ್ರೇಮಿ. ಎತ್ತಿನ ಹೊಳೆ ಯೋಜನೆ ಅನುಷ್ಠಾನದಲ್ಲಿ ವಿಜ್ಞಾನಿಗಳ ಜತೆ ಚರ್ಚಿಸಿ ಪರಿಶೀಲನೆ ನಡೆಸಿ, ಪಕ್ಷಾತೀತವಾಗಿ ಚರ್ಚೆ ನಡೆಸಿ, ನಂತರ ತೀರ್ಮಾನ ಕೈಗೊಳ್ಳಲಿ ಅಂತ ಹೇಳಿದ್ರು.

ಸಮ್ಮಿಶ್ರ ಸರ್ಕಾರ ಕಾರ್ಯವೈಖರಿ ವಿಚಾರದ ಕುರಿತು ಮಾತನಾಡಿದ ಅವರು, ಸದ್ಯದ ರಾಜಕೀಯ ವಿದ್ಯಮಾನಗಳು ನನಗೆ ಬೇಸರ ತರಿಸಿದೆ. ಮೂರು ರಾಜಕೀಯ ಪಕ್ಷಗಳ ಬಗ್ಗೆ ಬೇಸರ ಇದೆ. ಒಬ್ಬರು ಮತ್ತೊಬ್ಬರನ್ನ ಟೀಕೆ ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಮೂರು ಪಕ್ಷಗಳೂ ದ್ವೇಷ ಬಿಟ್ಟು ರಾಜ್ಯದ ಅಭಿವೃದ್ಧಿ ಕೈ ಜೋಡಿಸಲಿ ಎಂದು ಸಲಹೆ ನೀಡಿದ್ರು.

SHIROORU SHREE 2

ಶಿರೂರು ಬಗ್ಗೆ ಪ್ರೀತಿಯಿತ್ತು:
ಶಿರೂರು ಶ್ರೀಗಳ ಬಗ್ಗೆ ಬಹಳ ಪ್ರೀತಿ ಇತ್ತು. ನಾನು ಮರಣೋತ್ತರ ದಲ್ಲಿ ಟೀಕೆ ಮಾಡಿದ್ದೆ ಎಂದು ಬಿಂಬಿಸಲಾಗಿತ್ತು. ನಾನು ಹಾಗೆ ಮಾತನಾಡಲಿಲ್ಲ. ಮದ್ಯ, ಮಾನಿನಿ ಸಹವಾಸ ಇದ್ದ ಕಾರಣ ಪಟ್ಟದ ದೇವರನ್ನ ಕೊಟ್ಟಿಲ್ಲ. ನನಗೆ ಶಿರೂರು ಶ್ರೀಗಳ ಮೇಲೆ ವೈಯುಕ್ತಿಕ ದ್ವೇಷ ಇಲ್ಲ. ಅವರಿಗೆ ಎಷ್ಟೋ ಸಲ ತೊಂದರೆ ಆದಾಗ ನಾನೇ ಅವರನ್ನ ಕಾಪಾಡಿದ್ದೇನೆ. ನನ್ನ ಮೇಲೆ ಅನೈತಿಕ ಆರೋಪ ಮಾಡಲಾಗ್ತಿದೆ. ಇದು ನನಗೆ ಬೇಸರ ತರಿಸಿದೆ. ಒಟ್ಟಿನಲ್ಲಿ ಸತ್ಯ ಏನು ಅನ್ನೋದು ಎಲ್ಲರಿಗೂ ಗೊತ್ತು. ನಾನು ನನ್ನ ಬಗ್ಗೆ ಕೇಳಿ ಬಂದಿರುವ ಆರೋಪದ ಬಗ್ಗೆ ಮಾತ್ರ ಪ್ರತಿಕ್ರಿಯೆ ನೀಡ್ತಿನಿ. ಶಿರೂರುವ ಶ್ರೀಗಳ ವಿಚಾರದಲ್ಲಿ ಮೊದಲಿನಿಂದಲೂ ಟೀಕೆ ಮಾಡ್ತಿದ್ದೆ. ಈಗಲೂ ಅದನ್ನೇ ಮಾಡ್ತಾ ಇದ್ದೀನಿ ಅಂತ ತಿಳಿಸಿದ್ರು.

ಉತ್ತರ ಭಾರತದಲ್ಲಿ ಹಿಂದೂ ನ್ಯಾಯಾಲಯ ಆರಂಭಿಸುವ ವಿಚಾರದ ಕುರಿತು ಹೆಚ್ಚಿಗೆ ಮಾತನಾಡಲ್ಲ. ಗೋಕರ್ಣ ಮಠ ಸರ್ಕಾರ ಅಧೀನಕ್ಕೆ ಪಡೆಯುವ ವಿಚಾರದ ಕುರಿತೂ ಹೆಚ್ಚು ಮಾತನಾಡೋಲ್ಲ ಅಂದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruflooskeralaKodagupejawara sreePublic TVShiroor sreeudupiಉಡುಪಿಕೇರಳಕೊಡಗುಪಬ್ಲಿಕ್ ಟಿವಿಪೇಜಾವರ ಶ್ರೀಪ್ರವಾಹಬೆಂಗಳೂರುಶಿರೂರು ಶ್ರೀ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Indian American Family Jewellery Robbery
Crime

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

Public TV
By Public TV
3 minutes ago
Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
22 minutes ago
Kolar Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು

Public TV
By Public TV
38 minutes ago
LPG tanker overturns in Nelamangala Bengaluru
Bengaluru Rural

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
41 minutes ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
48 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?