ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಕೆನ್ನೆಗೆ ಬಾರಿಸಿದವರಿಗೆ ಬರೋಬ್ಬರಿ ಹತ್ತು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹಿಂದೂ ಸಂಘಟನೆಯ ಅಧ್ಯಕ್ಷ ಗೋವಿಂದ್ ಪರಾಶರ (Govind Parashara) ಹೇಳಿಕೆ ನೀಡಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ 2 (Oh My God 2) ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಕ್ಕೆ ಗೋವಿಂದ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಈ ವಾರ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ 2 ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಲೈಂಗಿಕತೆಯ ಬಗ್ಗೆ ಪಾಠ ಮಾಡಲಾಗಿದೆ. ಭಗವಾನ್ ಶಿವನ ಸಂದೇಶವಾಹಕನ ಪಾತ್ರದ ಮೂಲಕ ಲೈಂಗಿಕತೆಯ ಕುರಿತು ಹೇಳಿಸಲಾಗಿದೆ. ಇದು ಹಿಂದೂಗಳ ಭಾವನೆಯನ್ನು ಕೆರಳಿಸಿದೆ. ಹಾಗಾಗಿ ಸಿನಿಮಾ ರಿಲೀಸ್ ಆದ ಕೆಲವು ಕಡೆ ಪ್ರತಿಭಟನೆಯನ್ನೂ ಮಾಡಲಾಗುತ್ತಿದೆ. ಇದನ್ನೂ ಓದಿ:ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದ ಶೂಟಿಂಗ್ ಮುಕ್ತಾಯ
ಆಗ್ರಾದ ಕೆಲವು ಚಿತ್ರಮಂದಿರಗಳ ಮುಂದೆ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹನ ಮತ್ತು ಪೋಸ್ಟರ್ ಗಳನ್ನು ಹರಿದು ಹಾಕಲಾಗಿದೆ. ಕೂಡಲೇ ಈ ಸಿನಿಮಾವನ್ನು ಹಿಂಪಡೆಯಬೇಕು ಎಂದು ಸೆನ್ಸಾರ್ ಮಂಡಳಿಗೂ ಸಂಘಟನೆಯ ಒತ್ತಾಯಿಸಿದೆ. ಈ ಹಿಂದೆ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಗಿತ್ತು. ಹಲವು ಕತ್ತರಿ ಪ್ರಯೋಗಗಳ ನಂತರ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿತ್ತು.
ಓ ಮೈ ಗಾಡ್ 2 ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾದರೂ, ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ, ಹಿಂದೂಪರ ಸಂಘಟನೆಗಳು ಈ ಚಿತ್ರದ ಬಗ್ಗೆ ತಕರಾರು ತೆಗೆದಿವೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]