ಶಿಮ್ಲಾ: ತುಂಬಿ ಹರಿಯುತ್ತಿರುವ ಡ್ಯಾಂ ನಡುವೆ ಐವರು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 10 ಜನ ಸಿಲುಕಿಕೊಂಡಿರುವ ಘಟನೆ ಹಿಮಾಚಲ ಪ್ರದೇಶದ (Himachal Pradesh) ಮಂಡಿಯ ಕೋಲ್ ಡ್ಯಾಮ್ ಹೈಡಲ್ ಪ್ರಾಜೆಕ್ಟ್ನಲ್ಲಿ ನಡೆದಿದೆ.
ಭಾರೀ ಮಳೆಯಿಂದ (Rain) ಉತ್ತರಖಂಡ ಹಾಗೂ ಹಿಮಾಚಲ ಪ್ರದೇಶ ತತ್ತರಿಸಿದೆ. ಇದರಿಂದ ನದಿ ಪಾತ್ರಗಳಿಗೆ ಹಾಗೂ ಆಣೆಕಟ್ಟಿನ ಸಮೀಪ ಜನರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಈ ಹತ್ತು ಜನ ಹೇಗೆ ಅಲ್ಲಿ ಸಿಲುಕಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಅವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ. ಇದನ್ನೂ ಓದಿ: ಕೆಆರ್ಎಸ್ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ – ಐವರು ಪ್ರವಾಸಿಗರಿಗೆ ಗಾಯ
ಸ್ಥಳೀಯ ಆಡಳಿತ ಮತ್ತು ನಿವಾಸಿಗಳ ಸಹಾಯದಿಂದ ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅಲ್ಲದೇ ಪರಿಣಿತ ಈಜುಗಾರರನ್ನು ಕರೆಸಲಾಗಿದೆ. ಘಟನೆಯ ಬ್ಗಗೆ ಸಿಲುಕಿದ್ದವರ ರಕ್ಷಣೆ ಬಳಿಕ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ಯಾಂನಲ್ಲಿ ಸಿಲುಕಿರುವ ಐವರು ಅರಣ್ಯ ಇಲಾಖೆಯ ನೌಕರರನ್ನು ಭಾದೂರ್ ಸಿಂಗ್, ಭೂಪೇಶ್ ಠಾಕೂರ್, ರೂಪ್ ಸಿಂಗ್, ಬಾಬು ರಾಮ್ ಮತ್ತು ಅಂಗದ್ ಕುಮಾರ್ ಎಂದು ಗುರುತಿಸಲಾಗಿದೆ. ಇತರ ಐವರು ಸ್ಥಳೀಯರನ್ನು ನೈನ್ ಸಿಂಗ್, ಡಾಗು ರಾಮ್, ಹೇಮ್ ರಾಜ್, ಭೂಧಿ ಸಿಂಗ್ ಮತ್ತು ಧಮೇರ್ಂದ್ರ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ಕಾಲುವೆಯಲ್ಲಿ ತೇಲಿಬಂತು ಮಹಿಳೆಯ ಶವ
Web Stories