Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

Districts

104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

Public TV
Last updated: August 4, 2024 7:44 am
Public TV
Share
2 Min Read
Kodagu Landslide 1
SHARE

ಮಡಿಕೇರಿ: ದೇವರನಾಡು ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಜಲಸ್ಫೋಟ-ಗುಡ್ಡ ಕುಸಿತದ (Wayanad Landslides) ನಂತರ ಕೊಡಗು (Kodagu) ಜಿಲ್ಲೆಯಲ್ಲೂ ಆತಂಕದ ಕರಿಛಾಯೆ ಆವರಿಸಿದೆ. 2018ರಲ್ಲಿ ಸಂಭವಿಸಿದ ದುರಂತಗಳು ಕಣ್ಣ ಮುಂದೆ ಬರುತ್ತಿವೆ. ‘ಗುಡ್ಡದ ಭೂತ’ದ ಭಯವೂ ಮೂಡಿದೆ. ಮುಂಗಾರು ಅಬ್ಬರಿಸಿ ಬೊಬ್ಬಿರಿಯುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಬೆಟ್ಟ-ಗುಡ್ಡ, ನದಿ ಅಂಚಿನಲ್ಲಿ ಸೇರಿದಂತೆ ಅಪಾಯದ ಸ್ಥಳದಲ್ಲಿ ನೆಲೆನಿಂತಿರುವವರ ಸ್ಥಳಾಂತರ ಒಂದೇ ಪರಿಹಾರ ಎಂಬ ಚರ್ಚೆಯೂ ಎದ್ದಿದೆ.

ಕಳೆದ ಜು.31 ರಂದು ಕಂದಾಯ ಸಚಿವ ಕೃಷ್ಣಬೈರೇಗೌಡ (krishna byre gowda) ಅವರು ನೀಡಿರುವ ನಿರ್ದೇಶನವನ್ನು ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಂಡಿದೆ. ವಿಜ್ಞಾನಿಗಳ ವರದಿ, ಈ ಹಿಂದೆ ಅಪಾಯ ಸಂಭವಿಸಿದ ಪ್ರದೇಶಗಳ ಆಧಾರದಲ್ಲಿ 104 ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ‘ಮ್ಯಾಪಿಂಗ್’ ಮಾಡಲಾಗಿದ್ದು, ಅಪಾಯದ ಸ್ಥಳದಲ್ಲಿರುವ 2,995 ಕುಟುಂಬಗಳು ಸ್ಥಳಾಂತರಕ್ಕೆಂದು ಗುರುತು ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಹೆಮ್ಮೆ – ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ ಹೊಸ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ

Kodagu Landslide 2

ಈಗಾಗಲೇ ಸುಮಾರು 313 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಸದ್ಯ 10 ಪರಿಹಾರ ಕೇಂದ್ರಗಳನ್ನು ಜಿಲ್ಲೆಯಲ್ಲಿ ತೆರೆಯಲಾಗಿದೆ. ಅಪಾಯದಲ್ಲಿರುವ ಕೆಲವರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನೂ ಹಲವರು ತಮ್ಮ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಇದನ್ನೂ ಓದಿ: Karnataka Rain Alert: ಮಳೆ ಕಡಿಮೆಯಾದ್ರೂ ನಿಲ್ಲದ ಅವಾಂತರ; ಕರಾವಳಿಯಲ್ಲಿ ಅಪಾಯದ ಮಟ್ಟ ಮೀರಿದ ನದಿಗಳು

ʻಆಗಸ್ಟ್ ಆಂತಕʼ
ಜಿಲ್ಲೆಯಲ್ಲಿ ವಾಡಿಕೆಗಿಂತ 24% ಹೆಚ್ಚಿನ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ‘ಆಗಸ್ಟ್ ಆತಂಕ’ವೂ ಹುಟ್ಟಿಕೊಂಡಿದೆ. ಆಗಸ್ಟ್ ಬಂತೆಂದರೆ ಜಿಲ್ಲೆಯ ಜನರಲ್ಲಿ ಆತಂಕ, ದುಗುಡ ಹೆಚ್ಚಾಗುತ್ತದೆ. ಬಿರುಸಿನ ಮಳೆ, ಮೈಕೊರೆಯುವ ಚಳಿಯಲ್ಲಿಯೂ ಬೆವರುವಂತಹ ಭಯ ಸೃಷ್ಟಿಯಾಗುತ್ತದೆ. 2018 ಆಗಸ್ಟ್ 16 ರಂದು ಜಿಲ್ಲೆಯಲ್ಲಿ ಹಿಂದೆಂದು ಕಾಣದಂತೆ ಸುರಿದ ಮಹಾಮಳೆ, ಸಂಭವಿಸಿದ ಪ್ರಾಕೃತಿಕ ವಿಕೋಪ ಇವೆಕ್ಕಲ್ಲ ಕಾರಣವಾಗಿವೆ. ಈ ವರ್ಷವೂ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅಪಾಯದಂಚಿನಲ್ಲಿರುವವರು ಮುಂದೇನು? ಎಂಬ ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿದ್ದಾರೆ.

Kodagu Landslide 3

ವಯನಾಡಿನಲ್ಲಿ ನಡೆದ ದುರ್ಘಟನೆಯ ನಂತರ ಗುಡ್ಡ, ನದಿಯಂಚಿನಲ್ಲಿ ವಾಸಿಸುತ್ತಿರುವವರನ್ನು ಮಳೆಗಾಲದ ಸಂದರ್ಭದಲ್ಲಿ ಸ್ಥಳಾಂತರಿಸಬೇಕೆಂಬ ಚರ್ಚೆ ಮುನ್ನಲೆಗೆ ಬಂದಿದೆ. ‘ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ’ ವಿಪತ್ತು ಸಂಭವನೀಯ ಪ್ರದೇಶಗಳ ಪಟ್ಟಿ ನೀಡಿದೆ. ಇದರೊಂದಿಗೆ ಈ ಹಿಂದೆ ಪ್ರಕೃತಿ ದುರಂತ ಸಂಭವಿಸಿದ ಪ್ರದೇಶಗಳನ್ನು ಸೇರಿಸಿ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿ ಅಂತಿಮಗೊಳಿಸಿರುವ ಜಿಲ್ಲಾಡಳಿತ ಸ್ಥಳಾಂತರ ಮಾಡಬೇಕಾದ ಕುಟುಂಬಗಳನ್ನು ಪಟ್ಟಿ ಮಾಡಿಕೊಂಡಿದೆ.

2,995 ಕುಟುಂಬಗಳ ಗುರುತು
104 ಸಂಭವನೀಯ ವಿಪತ್ತು ಪ್ರದೇಶಗಳ 2,995 ಕುಟುಂಬಗಳನ್ನು ಗುರುತಿಸಲಾಗಿದೆ. ಇವರೆಲ್ಲ ಸ್ಥಳಾಂತರ ಪಟ್ಟಿಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಅಪಾಯದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ನೋಟಿಸ್ ನೀಡಿ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಕೆಲವರು ಸಂಬಂಧಿಕರ ಮನೆಗಳಲ್ಲಿ ನೆಲೆನಿಂತಿದ್ದಾರೆ. ಹಲವರು ಅಪಾಯದ ನಡುವೆಯೇ ಜೀವನ ಮುಂದುವರಿಸಿದ್ದಾರೆ ಸ್ಥಳಾಂತರವಾಗಿ ಎಂದರೆ ಎಲ್ಲಿಗೆ ಹೋಗುವುದು? ಎಂಬ ಪ್ರಶ್ನೆಯನ್ನು ನಿವಾಸಿಗಳು ಮಾಡುತ್ತಿದ್ದಾರೆ.

ಹೆಚ್ಚುವರಿ 95 ಕಾಳಜಿ ಕೇಂದ್ರ:
ಸಂಭವನೀಯ ವಿಪತ್ತು ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯುವ ಸಂಬಂಧವೂ ಸ್ಥಳವನ್ನು ಜಿಲ್ಲಾಡಳಿತ ಗುರುತು ಮಾಡಿಟ್ಟುಕೊಂಡಿದೆ. ಸದ್ಯ 10 ಕಾಳಜಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 95 ಕಡೆಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯಾಗಿದೆ. ಆದರೆ, ಜಾನುವಾರುಗಳಿಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂಬ ದೂರಿದೆ. ಈ ಬಗ್ಗೆಯೂ ಜಿಲ್ಲಾಡಳಿತ ಕ್ರಮವಹಿಸಬೇಕಾಗಿದೆ. ಒಟ್ಟಾರೆಯಾಗಿ ಪ್ರತಿ ಮಳೆಗಾಲದಲ್ಲಿಯೂ ಗ್ರಾಮೀಣ ಪ್ರದೇಶಗಳ ಜನತೆ ಭೂಕುಸಿತ, ಪ್ರವಾಹದ ಭಯದಲ್ಲಿ ದಿನದೂಡಬೇಕಾದ ಪರಿಸ್ಥಿತಿ ಬಂದಿದ್ದು, ಪ್ರಕೃತಿ ಮುನಿಯದಿರಲಿ ಎಂಬ ಪ್ರಾರ್ಥನೆ ಮೊಳಗುತ್ತಿದೆ.

TAGGED:Karnataka RainsKodagu FloodKodagu LandslideWayanad Landslidesಕರ್ನಾಟಕಕೇರಳಕೊಡಗು ಭೂಕುಸಿತಭೂಕುಸಿತಮಡಿಕೇರಿಮಳೆವಯನಾಡು
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

RCB vs DC 2
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
5 hours ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
11 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
12 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
12 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
13 hours ago
HC Balakrishna
Bengaluru City

ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Public TV
By Public TV
13 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?