10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Public TV
0 Min Read
hang suicide

ಬೆಳಗಾವಿ: ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟೆನೆ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.

ಜಯವಂತ ಮಗದುಮ (17) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ವಿಜಯಪುರ ಜಿಲ್ಲೆಯ ಕೆಂಗಲಗುತ್ತಿ ಗ್ರಾಮದಲ್ಲಿ ನಿವಾಸಿ. ಜಯವಂತ ಚಮಕೇರಿ ಗ್ರಾಮದಲ್ಲಿರುವ ಶ್ರೀ ಶಿವಲಿಂಗೇಶ್ವರ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಾನೆ.

ಶಾಲೆಗೆ ಹೋಗಲು ಇಷ್ಟವಿಲ್ಲದಿದ್ದರೂ ಪೋಷಕರು ಬಲವಂತವಾಗಿ ಜುಯವಂತನನ್ನು ಶಾಲೆಗೆ ಕಳುಹಿಸಿರುವುದರಿಂದ ಮನನೊಂದಿದ್ದನು ಎನ್ನಲಾಗಿದೆ. ಹೀಗಾಗಿ ಶಾಲೆಗೆ ಹೋಗಲು ಇಷ್ಟವಿಲ್ಲದೇ ಶನಿವಾರ ಶಾಲಾ ವಸತಿನಿಲಯದ ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *