ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಜಿಎಸ್ಟಿ ಪರಿಹಾರ ನಷ್ಟದ ಬಾಕಿ ಮೊತ್ತ 11 ಸಾವಿರ ಕೋಟಿ ರೂಪಾಯಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಜಿಎಸ್ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ಶುಕ್ರವಾರ ನಡೆದ ಜಿಎಸ್ಟಿ ಮಂಡಳಿಯ 43ನೇ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ : ಪೆಟ್ರೋಲ್ನ್ನು ಜಿಎಸ್ಟಿಗೆ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್ಡಿಕೆ ಆಕ್ರೋಶ
Finance Minister Smt. @nsitharaman chairing the 43rd GST Council meeting via video conferencing in New Delhi today. MOS Shri. @ianuragthakur, Finance Ministers of States & UTs and Senior officers from Union Government & States are also present in the meeting. pic.twitter.com/Koi0uhx5Tn
— Ministry of Finance (@FinMinIndia) May 28, 2021
2021 – 22 ನೇ ಸಾಲಿನ ಜಿಎಸ್ಟಿ ಪರಿಹಾರದ ನಷ್ಟದ ಹಣವನ್ನು ಕೇಂದ್ರ ಸರ್ಕಾರವೇ ಸಾಲಪಡೆದು ರಾಜ್ಯಕ್ಕೆ ನೀಡಬೇಕು. 2020- 21 ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ 11 ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು. ಜಿಎಸ್ಟಿ ಪರಿಹಾರ ಸೆಸ್ ನಲ್ಲಿಯೂ ಬಾಕಿ ಉಳಿದಿರುವ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಬೇಕು. ಜಿಎಸ್ಟಿ ನಷ್ಟ ಪರಿಹಾರ ಒದಗಿಸುವ ಸೌಲಭ್ಯ 2021- 2022ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ 2021- 2022 ರ ನಂತರವೂ ಜಿಎಸ್ಟಿ ನಷ್ಟ ಪರಿಹಾರ ಸೌಲಭ್ಯವನ್ನು ಮುಂದುವರಿಸುವ ಕುರಿತು ಚರ್ಚೆ ನಡೆಯಬೇಕು ಎಂದು ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.