ಪಾಟ್ನಾ: ಬಿಹಾರದ ಹಲವೆಡೆ ಸಿಡಿಲು ಬಡಿದು 10 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
- Advertisement 2
ಈ ಕುರಿತಂತೆ ಸೋಮವಾರ ನಿತೀಶ್ ಕುಮಾರ್ ಅವರು, ಗುಡುಗು ಮತ್ತು ಸಿಡಿಲಿನಿಂದಾಗಿ ಪುರ್ನಿಯಾ ಹಾಗೂ ಅರಾರಿಯಾದಲ್ಲಿ ನಾಲ್ಕು ಮಂದಿ ಮತ್ತು ಸುಪೌಲ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಮತ್ತು ಮೃತರ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಸುಮ್ಮನಹಳ್ಳಿ ಬ್ರಿಡ್ಜ್ ಮತ್ತೆ ಕುಸಿತದ ಭೀತಿ – ನೆಲ ಕಾಣುವ ಮಟ್ಟಕ್ಕೆ ಕಿತ್ತು ಹೋದ ಕಾಂಕ್ರಿಟ್ ಸ್ಲ್ಯಾಬ್
- Advertisement 3
- Advertisement 4
ಇಂತಹ ವಾತಾವಾರಣವಿದ್ದಾಗ ಜನರು ಜಾಗರೂಕರಾಗಿರಬೇಕು ಮತ್ತು ಘಟನೆಗಳಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬುವುದರ ಬಗ್ಗೆ ವಿಪತ್ತು ನಿರ್ವಹಣಾ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿ, ಮನೆಯಲ್ಲಿಯೇ ಇರಿ ಮತ್ತು ಕೆಟ್ಟ ವಾತಾವರಣದಲ್ಲಿ ಸುರಕ್ಷಿತವಾಗಿರಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಮರುಮದುವೆಯಾದ್ರು 9 ಮಕ್ಕಳ ತಂದೆ-ತಾಯಿಯಾಗಿರುವ ಮುಸ್ಲಿಂ ದಂಪತಿ