ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಬಂದಿದ್ದ 11 ಮಂದಿ ಬಿಸಿಲಿನ ತಾಪಮಾನಕ್ಕೆ ಸಾವನ್ನಪ್ಪಿದ ಘಟನೆ ನಡೆದಿದೆ.
ನವಿ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ವೀಕ್ಷಿಸಲು ಸಾವಿರಾರು ಜನರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಹಾಗೂ ಶೆಡ್ಗಳ ವ್ಯವಸ್ಥೆಯೂ ಇರಲಿಲ್ಲ. ಇವೆಲ್ಲದರ ಮಧ್ಯೆ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದನ್ನೂ ಓದಿ: ಕರ್ನಾಟಕದ ಹೆಮ್ಮೆ.. ನಂದಿನಿಯೇ ಬೆಸ್ಟ್ ಎಂದ ರಾಹುಲ್ ಗಾಂಧಿ
ಈ ಬಿಸಿಲಿನ ಝಳ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಮಂದಿ ಸಾವನ್ನಪ್ಪಿದ್ದು, 50 ಮಂದಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ತೆರಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾತನಾಡಿ, ಘಟನೆಯು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಇದನ್ನೂ ಓದಿ: ಸಹಸ್ರಾರು ಮಂದಿ ಸಮೇತ ಸಚಿವ ಸುಧಾಕರ್ ಇಂದು ನಾಮಪತ್ರ ಸಲ್ಲಿಕೆ – ನಾಮಿನೇಷನ್ಗೂ ಮುನ್ನ ಟೆಂಪಲ್ ರನ್