ರಾಯ್ಪುರ: ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್ಕೌಂಟರ್ನಲ್ಲಿ (Encounter) 31 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ – ಸಚಿವ ಚಲುವರಾಯಸ್ವಾಮಿ
ಎನ್ಕೌಂಟರ್ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೋಲು ಒಪ್ಕೋತೀವಿ ಆದ್ರೆ ಇವಿಎಂ ಮೇಲೆ ಅನುಮಾನ ಇದೆ: ಶಿವರಾಜ್ ತಂಗಡಗಿ
ಘಟನೆ ಸಂಬಂಧ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಎನ್ಕೌಂಟರ್ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಡಿಬಾಸ್ ಫ್ಯಾನ್ಸ್ಗೆ ಸಿಹಿಸುದ್ದಿ- ಫೆ.16ರಂದು ರಿಲೀಸ್ ಆಗಲಿದೆ ‘ಡೆವಿಲ್’ ಚಿತ್ರದ ಟೀಸರ್