ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ

Public TV
1 Min Read
H1N1

ತಿರುವನಂತಪುರಂ: ಈಗಾಗಲೇ ಕೋವಿಡ್ 4ನೇ ಅಲೆ ಭಾರತದ ಕೆಲ ರಾಜ್ಯಗಳಿಗೆ ಅಪ್ಪಳಿಸಿದೆ. ಓಮಿಕ್ರಾನ್ ಉಪತಳಿಗಳಾದ ಬಿಎ-1, 2, 3, 4, 5 ತಳಿಗಳು ಸಾವಿರಾರು ಜನರನ್ನು ಬಾದಿಸುತ್ತಿವೆ. ಈ ಬೆನ್ನಲ್ಲೇ ಕೇರಳಕ್ಕೆ ಹಂದಿಜ್ವರ ಮತ್ತೆ ಲಗ್ಗೆಯಿಟ್ಟಿದೆ. ಇಲ್ಲಿನ ಕೋಯಿಕ್ಕೋಡ್‌ನ ಉಲಿಯೇರಿ ಪ್ರದೇಶದಲ್ಲಿ 12 ವರ್ಷದ ಹುಡುಗಿಯೊಬ್ಬರಿಗೆ ಎಚ್1-ಎನ್1 ಹಂದಿಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಮೃತಪಟ್ಟಿದ್ದಾರೆ.

H1N1

ಈಚೆಗಷ್ಟೇ ಕೇರಳದ ಈ ಹುಡುಗಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಕೇರಳದ ಕೋಯಿಲಂಡಿ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಎಚ್1-ಎನ್1 ಸೋಂಕು ಇರುವುದು ದೃಢಪಟ್ಟಿತು. ತಕ್ಷಣ ಹುಡುಗಿಯನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಬಾಲಕಿ ಸಂಪರ್ಕದಲ್ಲಿದ್ದ ಅವಳಿ ಸಹೋದರಿಗೂ ಎಚ್1-ಎನ್1 ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

H1N1

1918-1919 ರಲ್ಲಿ ಕಾಣಿಸಿಕೊಂಡಿದ್ದ ಹಂದಿಜ್ವರ ಎಚ್1-ಎನ್1 ಇನ್‌ಫ್ಲುಯೆನ್ಸ್ ವೈರಸ್ 2009 ರಲ್ಲಿ ದೇಶದ ಅನೇಕ ಕಡೆ ವ್ಯಾಪಕವಾಗಿ ಹರಡಿತ್ತು. ಸುಮಾರು 2.84 ಲಕ್ಷ ಜನರನ್ನು ಬಲಿ ಪಡೆದಿತ್ತು. ಇದರಿಂದ ವಿಶ್ವಸಂಸ್ಥೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

ಬೆಂಗಳೂರಿಗೂ ಆತಂಕ: ಕಳೆದ ಮರ‍್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ 150ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೇ ಕೇರಳದಲ್ಲಿ ಹಂದಿ ಜ್ವರಕ್ಕೆ ಬಲಿಯಾದ ಬಾಲಕಿ ಈಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂಬುದು ಅನೇಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನಲ್ಲೂ ಹಂದಿಜ್ವರ ಕಾಣಿಸಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *