Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 12 ವರ್ಷಗಳ ಹಿಂದಿದ್ದ ಶಕ್ತಿ ಈಗಿಲ್ಲ, ವಯಸ್ಸಾಗ್ತಿದೆ ಶಕ್ತಿ ಕುಂದುತ್ತಿದೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 12 ವರ್ಷಗಳ ಹಿಂದಿದ್ದ ಶಕ್ತಿ ಈಗಿಲ್ಲ, ವಯಸ್ಸಾಗ್ತಿದೆ ಶಕ್ತಿ ಕುಂದುತ್ತಿದೆ: ಸಿಎಂ

Districts

12 ವರ್ಷಗಳ ಹಿಂದಿದ್ದ ಶಕ್ತಿ ಈಗಿಲ್ಲ, ವಯಸ್ಸಾಗ್ತಿದೆ ಶಕ್ತಿ ಕುಂದುತ್ತಿದೆ: ಸಿಎಂ

Public TV
Last updated: June 19, 2019 8:48 am
Public TV
Share
2 Min Read
janata darshana HDK
SHARE

– ನನ್ನ ಕೆಲಸಕ್ಕೆ ತಕ್ಕ ಗೌರವ ಸಿಕ್ತಿಲ್ಲವೆಂಬ ನೋವಿದೆ
– ಸ್ವಕ್ಷೇತ್ರದಲ್ಲಿ 2 ದಿನಗಳ ಜನತಾದರ್ಶನ ಮುಗಿಸಿದ ಸಿಎಂ

ರಾಮನಗರ: 12 ವರ್ಷಗಳ ಹಿಂದೆ ಇದ್ದ ಶಕ್ತಿ ಈಗ ನನ್ನ ದೇಹದಲ್ಲಿಲ್ಲ. ವಯಸ್ಸಾಗುತ್ತಿದೆ, ಹೀಗಾಗಿ ಶಕ್ತಿ ಕುಂದುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ನಡೆದ ಜನತಾದರ್ಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ಕೆಲಸಕ್ಕೆ ತಕ್ಕ ಗೌರವ ಸಿಗುತ್ತಿಲ್ಲ ಎಂಬ ನೋವಿದೆ. ನನಗೆ ಸಮಯಾವಕಾಶ ಕೊಡಿ ನಿಮ್ಮ ಕೆಲಸ ಮಾಡಿಕೊಡುತ್ತೇವೆ ಎಂದು ಸ್ವಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿಕೊಂಡರು.

janata darshana HDK A

ಚನ್ನಪಟ್ಟಣದ ಗ್ರಾಮೀಣ ಅಭಿವೃದ್ಧಿಗೆ ಅಷ್ಟೇ ಅಲ್ಲ ನಗರದ ಅಭಿವೃದ್ಧಿಗೂ ಬದ್ಧನಾಗಿದ್ದೇನೆ. ಬಡ ಕುಟುಂಬದವರು ನಗರದಲ್ಲಿ ಮನೆಗಾಗಿ ಬೇಡಿಕೆ ಇಟ್ಟಿದ್ದೀರಿ. ಈ ನಿಟ್ಟಿನಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ ನೀಡಲಾಗುವುದು. ಸ್ಪೋಟ್ರ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ 60 ಕೋಟಿ ರೂ. ನೀಡುತ್ತೇನೆ. ಕುಡಿಯುವ ನೀರು ಪೂರೈಕೆಗಾಗಿ ರಾಮನಗರ, ಚನ್ನಪಟ್ಟಣಕ್ಕೆ ಪ್ರತ್ಯೇಕ ಪೈಪ್ ಲೈನ್ ವ್ಯವಸ್ಥೆ ಮಾಡಲಾಗುವುದು. ತಿರುಪತಿ ದೇವಾಲಯ ನಿರ್ಮಾಣಕ್ಕೆ ಜಾಗ ಹುಡುಕಲಾಗುತ್ತಿದೆ ಎಂದು ಜನತೆಗೆ ತಿಳಿಸಿದರು.

ಕೆರೆಗೆ ನೀರು ತುಂಬಿಸುವ ವಿವರವನ್ನ ತೆಗೆದುಕೊಂಡಿದ್ದೇನೆ. 2015ರಲ್ಲಿ ನಾನು ಕ್ಷೇತ್ರದ ಶಾಸಕನಾದ ಬಳಿಕ 86 ಕೆರೆಗೆ ಸಂಪೂರ್ಣವಾಗಿ ನೀರು ತುಂಬಿಸಿದ್ದೇವೆ. ಯಾಕೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತೀರಿ. ಕೆಲವರು ಸರ್ಕಾರ ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ. ಸರ್ಕಾರ ಬಹಳ ಬೇಗ ಹೋಗಲ್ಲ, ಇನ್ನೂ ನಾಲ್ಕು ವರ್ಷ ಸರ್ಕಾರವನ್ನು ಹೇಗೆ ನಡೆಸಬೇಕು ಅಂತ ಗೊತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರ ವಿರುದ್ಧ ಗುಡುಗಿದರು.

janata darshana HDK B

ಸಿಎಂ ಅವರು ಸ್ವಕ್ಷೇತ್ರದಲ್ಲಿ ಕೈಗೊಂಡ ಎರಡು ದಿನಗಳ ಜನತಾದರ್ಶನವನ್ನು ಭಾನುವಾರ ಮುಗಿಸಿದ್ದಾರೆ. ಮೊದಲ ದಿನ ಅಕ್ಕೂರು, ಕೋಡಂಬಳ್ಳಿ ಹಾಗೂ ಹೊಂಗನೂರು ಜಿಲ್ಲಾ ಪಂಚಾಯ್ತಿಗಳಲ್ಲಿ ಜನತಾದರ್ಶನ ನಡೆಸಿದ್ದ ಸಿಎಂ, ಎರಡನೇ ದಿನಗ ಬೇವೂರು, ಮಳೂರು ಜಿಲ್ಲಾ ಪಂಚಾಯತ್ ಹಾಗೂ ಚನ್ನಪಟ್ಟಣ ಟೌನ್‍ನಲ್ಲಿ ಜನತಾದರ್ಶನ ನಡೆಸಿದರು.

ಮೊದಲಿಗೆ ಬೇವೂರಿನಲ್ಲಿ ನಡೆದ ಜನತಾದರ್ಶನದಲ್ಲಿ ಕಳೆದ ಮೂರು ತಿಂಗಳ ಹಿಂದೆ ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದ ರಾಜು ಎಂಬವರ ಪತ್ನಿಗೆ ಬೆಸ್ಕಾಂ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು.

janata darshana HDK C

ಬೇವೂರು, ಬೈರಾಪಟ್ಟಣ ಹಾಗೂ ಚನ್ನಪಟ್ಟಣ ಟೌನ್‍ನಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ 4 ಸಾವಿರಕ್ಕೂ ಹೆಚ್ಚು ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಲಾಯಿತು. ಪ್ರತಿ ಜನತಾದರ್ಶನದ ಸ್ಥಳಗಳಲ್ಲಿ ಸಾಲಮನ್ನಾ ಪಲಾನುಭವಿಗಳಿಗೆ ಋಣಮುಕ್ತ ಪತ್ರವನ್ನ ನೀಡಲಾಯಿತು. ಮೊದಲ ದಿನದಂತೆಯೇ ಕೆಲವರು ಸಿಎಂ ಎದುರು ಸೆಲ್ಫಿ ತೆಗೆದುಕೊಳ್ಳಲು ಮುಂದಾದರೆ, ಕೆಲವರು ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಸಿ ಸಿಎಂಗೆ ಮನವಿ ಪತ್ರ ನೀಡಿದರು.

ಮಳೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದ ಜನತಾದರ್ಶನದಲ್ಲಿ ಭೈರಾಪಟ್ಟಣ ಗ್ರಾಮದ ಎಂಬ ಪದ್ಮ ಎಂಬ ಮಹಿಳೆ ತನ್ನ ಒಂದೂವರೆ ವರ್ಷದ ಗಂಡು ಮಗುವಿನ ಜೊತೆ ಬಂದು ಸಿಎಂ ಎದುರು ಕಣ್ಣೀರು ಹಾಕಿದರು. ಮಗು ಮೆದುಳು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದೆ. ಚಿಕಿತ್ಸೆಗೆ 5 ಲಕ್ಷ ರೂ. ತಗಲುತ್ತದೆ ಅಂತ ವೈದ್ಯರು ತಿಳಿಸಿದ್ದಾರೆ ಎಂದು ಕಣ್ಣೀರು ಹಾಕಿದರು.

HDK A

ಕೆಲವರಂತೂ ಸಿಎಂ ಕಾಲಿಗೆ ಎರಗಿ ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು. ಈ ಮಧ್ಯೆ ಸಿಎಂ ಭಾಷಣ ಮಾಡುತ್ತಿದ್ದಾಗ ಮಹಿಳೆಯೊಬ್ಬಳು ಕುಸಿದು ಬಿದ್ದರು. ಕಣ್ಣೆದುರೇ ನಡೆದ ಘಟನೆಯನ್ನು ನೋಡಿದ ಸಿಎಂ ಯಾಕಮ್ಮಾ, ಏನಾಯ್ತು, ಯಾರು ನೋಡ್ರಪ್ಪಾ, ಅವರಿಗೆ ನೀರು ಕುಡಿಸಿ, ಪಾಪಾ ಮಗುವನ್ನ ಎತ್ತಿಕೊಂಡಿದ್ದಾರೆ ಎಂದು ಮರುಕ ವ್ಯಕ್ತಪಡಿಸಿದರು.

TAGGED:ChannapatnacmJanata DarshanjdsPublic TVಚನ್ನಪಟ್ಟಣಜನತಾದರ್ಶನಪಬ್ಲಿಕ್ ಟಿವಿಸಿಎಂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
14 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
24 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
45 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
56 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?