ಹುಬ್ಬಳ್ಳಿ: ಡಿಎಪಿ ಗೊಬ್ಬರವನ್ನು 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ರೈತರಿಗೆ ಒದಗಿಸಿ, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿ ಬರಿಸುತ್ತದೆ.
ರೈತರ ಪರ ಸ್ಪಷ್ಟ ಕಾಳಜಿ ಹೊಂದಿರುವ ಯಡಿಯೂರಪ್ಪನವರು ತಕ್ಷಣವೇ ಕೃಷಿ, ಸಹಕಾರ ಹಾಗೂ ಹಣಕಾಸು ಇಲಾಖೆಯಿಂದ ಮಾಹಿತಿ ಪಡೆದು ವಿವಿಧ ಜಿಲ್ಲೆ ಉಗ್ರಾಣಗಳಲ್ಲಿರುವ ಕಾಪು ದಾಸ್ತಾನು ಡಿಎಪಿ ಗೊಬ್ಬರವನ್ನು ರೂ. 1413.25 ರ ಬದಲಾಗಿ ರೂ1200 ನಂತೆ ನಾಳೆಯಿಂದಲೇ ರೈತರಿಗೆ ಒದಗಿಸಲು ಆದೇಶಿಸಿದ್ದಾರೆ
— Pralhad Joshi (@JoshiPralhad) June 1, 2021
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮೇರೆಗೆ ಸಿಎಂ ಬಿಎಸ್ ಯಡಿಯೂರಪ್ಪ, ಡಿಎಪಿ ಗೊಬ್ಬರವನ್ನು 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ರೈತರಿಗೆ ಒದಗಿಸಿ, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿಗೆ ಭರಿಸಲು ಆದೇಶಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದಿನ ದರದಲ್ಲಿ ಖರೀದಿಸಿದ ಡಿಎಪಿ ರಸಗೊಬ್ಬರ ಒಟ್ಟು, 46474.15 ಮೆಟ್ರಿಕ್ ಟನ್ ಸಂಗ್ರಹವಿದೆ. ಕ್ಟಿಂಟಲ್ ಗೊಬ್ಬರಕ್ಕೆ 1413.25 ರೂಪಾಯಿ ರೈತರಿಗೆ ಹೊರೆಯಾಗಲಿದೆ. ಆದರೆ ಕೇಂದ್ರ ಸರ್ಕಾರ ಪ್ರಕಟಿಸಿದ ಸಬ್ಸಿಡಿಯಿಂದ ಡಿಪಿಎ ದರ ಪ್ರಸಕ್ತ ಮಾರುಕಟ್ಟೆಯಲ್ಲಿ 1200 ರೂಪಾಯಿಗೆ ದೊರೆಯುತ್ತಿದೆ.
<
ದೇಶದಲ್ಲಿ ರಸಗೊಬ್ಬರಕ್ಕೆ ದಾಖಲೆಯ ಪ್ರಮಾಣದ(PerMT 2431Rs)ಸಬ್ಸಿಡಿ ನೀಡುವ ಮೂಲಕ ಪ್ರಧಾನಮಂತ್ರಿ ಶ್ರೀ @narendramodi ನೇತೃತ್ವದ ಕೇಂದ್ರ ಸರಕಾರ ರೈತರ ಬೆನ್ನುಲೆಬಾಗಿ ನಿಂತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಈ ಹಿಂದಿನ ದರದಲ್ಲಿ ಖರೀದಿಸಿದ ಕಾಪು ದಾಸ್ತಾನು 46474.15 MT ಸಂಗ್ರಹವಿದ್ದು, ಈ ಡಿಪಿಪಿ ಗೊಬ್ಬರದ ಬೆಲೆ ರೂ1413.25 ಆಗಿದೆ pic.twitter.com/tViA2oOXDW
— Pralhad Joshi (@JoshiPralhad) June 1, 2021
/p>
ಹೀಗಾಗಿ ಹಲವು ಜಿಲ್ಲೆಗಳಲ್ಲಿ ಗೊಬ್ಬರ ದಾಸ್ತಾನು ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ಎಲ್ಲ ರೈತರಿಗೂ ರಸಗೊಬ್ಬರ ಒಂದೇ ದರದಲ್ಲಿ ಸಿಗುತ್ತಿರಲಿಲ್ಲ. ಎಲ್ಲ ಜಿಲ್ಲೆಗಳ ಉಗ್ರಾಣಗಳಲ್ಲಿರುವ ಡಿಎಪಿ ದರವನ್ನ ತಕ್ಷಣ ಕಡಿಮೆ ದರಕ್ಕೆ ದೊರೆಯುವಂತೆ ಮಾಡಲು ರಾಜ್ಯ ಸರ್ಕಾರ ಮಾರಾಟ ಮಂಡಳಿಗೆ 213.25 ರೂಪಾಯಿ ಮೊತ್ತವನ್ನ ಪಾವತಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಿಎಸ್ವೈಗೆ ಫೋನ್ ಮೂಲಕ ಮನವಿ ಮಾಡಿದ್ದರು. ಇದನ್ನೂ ಓದಿ: ಡಿಎಪಿ ಗೊಬ್ಬರ ಸಬ್ಸಿಡಿ ಪ್ರಮಾಣ ಶೇ.140 ಏರಿಕೆ – ಕೇಂದ್ರದಿಂದ ಐತಿಹಾಸಿಕ ನಿರ್ಧಾರ
ಧಾರವಾಡ ಜಿಲ್ಲೆಯಲ್ಲಿಯ 18122 ಮೆ.ಟನ್ ಡಿಎಪಿ ರೈತರಿಗೆ ದೊರೆಯಲಿದ್ದು, ರಾಜ್ಯದಲ್ಲಿ 46474.15 ಮೆ. ಟನ್ ಡಿಎಪಿ ಗೊಬ್ಬರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿರುವ ಜಿಲ್ಲಾವಾರು ಮಾಹಿತಿಯನ್ನು ಲಗತ್ತಿಸಲಾಗಿದೆ.
— Pralhad Joshi (@JoshiPralhad) June 1, 2021
ಪ್ರಹ್ಲಾದ್ ಜೋಶಿ ಮನವಿ ಮೇರೆಗೆ ಸಿಎಂ ಬಿಎಸ್ವೈ ತಕ್ಷಣವೇ ಡಿಎಪಿ ಗೊಬ್ಬರದ ಬೆಲೆಯನ್ನ 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ಸಿಗುವಂತೆ ಆದೇಶ ಮಾಡಿದ್ದು, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿಗೆ ಭರಿಸುವಂತೆ ಆದೇಶ ಮಾಡಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿ ಡಿಎಪಿ ರಸಗೊಬ್ಬರದ ಬೆಲೆಯನ್ನ ಕಡಿತಗೊಳಿಸಿದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಸಿಎಂ ಬಿಎಸ್ ವೈ ಹಾಗೂ ಕೃಷಿ ಸಚಿವ ಬಿಸಿ ಪಾಟೀಲಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮುಂಗಾರಿನ ಈ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳ ಉಗ್ರಾಣಗಳಲ್ಲಿರುವ ಡಿಎಪಿ ಗೊಬ್ಬರವನ್ನು ರೈತರಿಗೆ ತಕ್ಷಣ ದೊರೆಯುವಂತೆ ಮಾಡಲು ರಾಜ್ಯಸರಕಾರವು ಮಾರಾಟ ಮಂಡಳಿಗೆ ರೂ.1200 ಮೇಲಿನ ರೂ. 213.25 ಮೊತ್ತವನ್ನು ಪಾವತಿ ಮಾಡುವಂತೆ ಇಂದು ಮುಖ್ಯಮಂತ್ರಿಗಳಾದ ಶ್ರೀ @BSYBJP ರೈತರ ಪರವಾಗಿ ದೂರವಾಣಿ ಮೂಲಕ ವಿನಂತಿಸಿದ್ದೆ.
— Pralhad Joshi (@JoshiPralhad) June 1, 2021