ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತದ ನಡುವೆ ಇಂದು 1,209 ಕೇಸ್ಗಳು ದಾಖಲಾಗಿದ್ದು ಬೆಂಗಳೂರಿನಲ್ಲಿ 1,068 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ 1 ಸಾವು ಪ್ರಕರಣ ದಾಖಲಾಗಿದೆ.
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,739ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಕೇಸ್ಗಳು ಮೈಸೂರಿನಲ್ಲಿ ದಾಖಲಾಗಿದೆ. ರಾಜ್ಯದ 1 ಮರಣ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ. ಇಂದಿನ ಪಾಸಿಟಿವಿಟಿ ರೇಟ್ ಶೇ.4.37 ಕ್ಕೆ ತಲುಪಿದೆ. ಇದನ್ನೂ ಓದಿ: ಬೆಂಗಳೂರು ಜನರಿಗೆ ಗುಡ್ ನ್ಯೂಸ್ – ಇನ್ಮುಂದೆ ಉದ್ಯಾನಗಳು ರಾತ್ರಿ 8ರ ವರೆಗೂ ಓಪನ್
ಇಂದು 1,072 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಇಲ್ಲಿಯವರೆಗೂ 39,83,025 ಮಂದಿಗೆ ಸೋಂಕು ತಗುಲಿದೆ. ಈವರೆಗೆ 39,36,160 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟು 40,084 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 41,210 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 27,614 ಸ್ಯಾಂಪಲ್(ಆರ್ಟಿ-ಪಿಸಿಆರ್ 20,698 + 6,916 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: “ದಿವ್ಯ ಕಾಶಿ – ಭವ್ಯ ಕಾಶಿ”ಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ: ಬೊಮ್ಮಾಯಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 3, ಬಳ್ಳಾರಿ 14, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 1,068, ಬೀದರ್ 5, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 8, ದಾವಣಗೆರೆ 2, ಧಾರವಾಡ 18, ಹಾಸನ 7, ಕೋಲಾರ 7, ಕೊಪ್ಪಳ 1, ಮಂಡ್ಯ 2, ಮೈಸೂರು 25, ರಾಯಚೂರು 1, ಶಿವಮೊಗ್ಗ 4 ತುಮಕೂರು 8, ಉಡುಪಿ 4, ಉತ್ತರ ಕನ್ನಡ 3, ಯಾದಗಿರಿ 1, ಚಾಮರಾಜನಗರ, ಗದಗ, ಹಾವೇರಿ, ಕಲಬುರಗಿ, ಕೊಡಗು, ರಾಮನಗರ ಹಾಗೂ ವಿಜಯಪುರದಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.