ಡೆಹ್ರಾಡೂನ್: ಉತ್ತರ ಖಂಡದ ಚಕ್ರತಾ ತಹಸಿಲ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಭಾನುವಾರ ಬೆಳಗ್ಗೆ ಚಕ್ರತಾದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಯುಟಿಲಿಟಿ ಬಸ್ ಕಮರಿಗೆ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅದರಲ್ಲಿಯೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ದೆಹಲಿಗೆ ಸಮೀಪವಿರುವ 14 ಜಿಲ್ಲೆಗಳಲ್ಲಿ ಪಟಾಕಿ ನಿಷೇಧಿಸಿದ ಹರಿಯಾಣ
Uttarakhand: 13 people died, two rescued after a vehicle rolled down a gorge at Bulhad-Baila road in Chakrata, Dehradun district today. pic.twitter.com/jhJYNSQpKI
— ANI (@ANI) October 31, 2021
ಬೈಲದಿಂದ ವಿಕಾಸನಗರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಇದೀಗ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಸಂತ್ರಸ್ತರ ಸಾವಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ಗೆ ಕೋವಿಡ್-19 ದೃಢ
उत्तराखंड के चकराता में हुआ सड़क हादसा अत्यंत दुखद है। सरकार और स्थानीय प्रशासन राहत और बचाव कार्य में जुटे हुए हैं। इस दुर्घटना में जिन लोगों ने अपने प्रियजनों को खोया है, उनके प्रति मेरी गहरी संवेदनाएं। इसके साथ ही घायल लोगों के शीघ्र स्वस्थ होने की कामना करता हूं: PM Modi
— PMO India (@PMOIndia) October 31, 2021
ಈ ಕುರಿತಂತೆ ಟ್ವಿಟ್ಟರ್ನಲ್ಲಿ ಮೋದಿ ಅವರು, ಉತ್ತರಾಖಂಡದ ಚಕ್ರತಾದಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಜೊತೆಗೆ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಅಂತ ಟ್ವೀಟ್ ಮಾಡಿದ್ದಾರೆ.