Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಪ್ಪು ಅಭಿಮಾನಿಗಳಿಂದ ‘13’ ಟೀಸರ್ ರಿಲೀಸ್: ರಾಘವೇಂದ್ರ ರಾಜಕುಮಾರ್ ಮೆಚ್ಚುಗೆ

Public TV
Last updated: February 28, 2023 2:27 pm
Public TV
Share
2 Min Read
FotoJet 87
SHARE

ಕೆ.ನರೇಂದ್ರಬಾಬು ಅವರ ನಿರ್ದೇಶನದ ’13’ ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು.   ರಾಘವೇಂದ್ರ ರಾಜ್‌ಕುಮಾರ್‌ (Raghavendra Rajkumar), ಶ್ರುತಿ (Shruti), ಪ್ರಮೋದ್ ಶೆಟ್ಟಿ (Pramod Shetty) ಪ್ರಮುಖ  ಪಾತ್ರಗಳಲ್ಲಿ ಅಭಿನಯಿಸಿರುವ  ‘13’  ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್‌ ಕುಮಾರ್‌, ಹೆಚ್.ಎಸ್. ಮಂಜುನಾಥ್‌, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ ಸೇರಿ ನಿರ್ಮಿಸುತ್ತಿದ್ದಾರೆ.  ರಾಘವೇಂದ್ರ ರಾಜ್‌ಕುಮಾರ್‌ ನಿವೃತ್ತ ಸೈನಿಕ ಹಾಗೂ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಪಾತ್ರದಲ್ಲಿ ಮತ್ತು  ಟೀ ಅಂಗಡಿ ನಡೆಸುವ ಸಾಯಿರಾಬಾನು  ಎಂಬ ಮುಸ್ಲಿಂ  ಮಹಿಳೆಯ ಪಾತ್ರದಲ್ಲಿ ಶ್ರುತಿ ಅವರು ನಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡದೆ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕರು ಈ ಚಿತ್ರಕಥೆಯನ್ನು ಹೆಣೆದಿದ್ದಾರೆ.

puneeth 3

ವೇದಿಕೆಯಲ್ಲಿ ನಿರ್ದೇಶಕ ನರೇಂದ್ರಬಾಬು ಮಾತನಾಡುತ್ತ ’13’ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡುವಾಗ ತುಂಬಾ ಕಹಿಘಟನೆಗಳು ನಡೆದಿವೆ. ಆದರೂ ಎಲ್ಲವನ್ನೂ ಮರೆತು ಯಶಸ್ಸು ಕಂಡಿದ್ದೇವೆ. ನನ್ನ ಒಂಭತ್ತನೆಯ ಚಿತ್ರದಲ್ಲಿ ರಾಘಣ್ಣ ಅಭಿನಯಿಸಿರುವ  ಖುಷಿಯಿದೆ.  ಇದೇ ಖುಷಿಯಲ್ಲಿ  13 ಚಿತ್ರದ ಹಬ್ಬವನ್ನು 6 ದಿನಗಳ ಕಾಲ ಆಚರಿಸುತ್ತಿದ್ದೇವೆ. ಮೂರು ಹಿಂದುಳಿದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ರಿನೋವೇಶನ್ ಮಾಡಿಸುತ್ತಿದ್ದೇವೆ. ಹಾವೇರಿ ಜಿಲ್ಲೆಯ ಶಾಲೆಯೊಂದರಿಂದ ಈ ಕೆಲಸ ಪ್ರಾರಂಭವಾಗಲಿದೆ. ಬಡ ಮಕ್ಕಳಿಗೆ ಬ್ಯಾಗ್, ಪುಸ್ತಕಗಳನ್ನು ವಿತರಿಸುತ್ತಿದ್ದೇವೆ. ಈ ಕೆಲಸಕ್ಕೆ ನಮ್ಮಜೊತೆ ಸಮಾಜಸೇವಕ ಅನಿಲ್ ಕುಮಾರ್ ಅವರು  ಕೈಜೋಡಿಸಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳ ರೂವಾರಿ ರಾಘಣ್ಣ ಎಂದು ಹೇಳಿದರು. ಇದನ್ನೂ ಓದಿ: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

13 1

ನಂತರ ‍ನಟ ರಾಘಣ್ಣ ಮಾತನಾಡುತ್ತ ನಾನು ಕೂಡ ಅಪ್ಪುಥರ ಬದುಕಬೇಕೆಂಬ ಸಂಕಲ್ಪ ಮಾಡಿಕೊಂಡಿದ್ದೇನೆ. ಎರಡು ಧರ್ಮಗಳ ಆತ್ಮ ಸೇರಿದರೆ ಅವರು ಹೇಗೆ ಬೆರೆತುಕೊಂಡು ಬರ್ತಾರೆ ಅನ್ನೋದನ್ನ ಚಿತ್ರದಲ್ಲಿ ತೋರಿಸಿದ್ದಾರೆ. ನಾನು ಮಾತಾಡ್ತಾ ಮಾತಾಡ್ತಾ ಅಲ್ಲಾ ಅಂದರೆ ಅವರು ರಾಮಾ ಅಂತಿದ್ದರು. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಿನಿಮಾ ಜೊತೆ ಸಮಾಜ ಸೇವೆಯನ್ನೂ ಇವರು  ಮಾಡಿಕೊಂಡು ಬರುತ್ತಿದ್ದಾರೆ. ಈಗ ಹಳ್ಳಿಯ ಬಡ ಮಕ್ಕಳಿಗೆ ಬ್ಯಾಗ್ ಕ್ಯಾರಿಯರ್ ಕೊಟ್ಟು ಬರುತ್ತಿದ್ದೇವೆ. ಅಪ್ಪು ಹೆಸರಲ್ಲಿ  ಇದನ್ನು ನಾನೂ ಮುಂದುವರೆಸುತ್ತೇನೆ ಎಂದು ಹೇಳಿದರು. ಅಂತರ್ಜಾತೀಯ ಪ್ರೇಮ ಕಥೆ  ಇದಾಗಿದ್ದು, ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವರೀತಿ ಕಷ್ಟಪಡುತ್ತಾರೆ ಎಂಬುದನ್ನು ಹೇಳುವ,  ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆ ಇದರಲ್ಲಿದೆ.

FotoJet 1 60

ನಿರ್ಮಾಪಕ ಕೆ. ಸಂಪತ್‍ಕುಮಾರ್ ಮಾತನಾಡಿ ನಿರ್ದೇಶಕರ ಮೇಲೆ ನಂಬಿಕೆಯಿದೆ. ಅವರ ಜೊತೆ ಇದು ಎರಡನೇ ಸಿನಿಮಾ.  ಡೇ ಒನ್ ನಿಂದಲೂ ಈ ಸಿನಿಮಾ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆಯಿದೆ. ಗೋವಿಂದ ಗೋಪಾಲ, ಸಾಫ್ಟ್‌ವೇರ್ ಗಂಡ ಸೇರಿ ನನ್ನ ನಿರ್ಮಾಣದ 5ನೇ ಚಿತ್ರವಿದು. ಅಮೃತವಾಹಿನಿ ನಂತರ ಬಾಬು ಜೊತೆ ಎರಡನೇ ಚಿತ್ರ. ಮುಂದಿನ ದಿನಗಳಲ್ಲಿ ‌ಪ್ರೊಮೋಷನ್ ಪ್ಲಾನ್ ಮಾಡಿಕೊಂಡಿದ್ದೇವೆ  ಎಂದು ಹೇಳಿಕೊಂಡರು. ಇನ್ನು ಇವರ ಜತೆ ಕೈಜೋಡಿಸಿರುವ ಮಂಜುನಾಥ್‍ಗೌಡ, ಕೇಶವಮೂರ್ತಿ ಹಾಗೂ ಮಂಜುನಾಥ್ ಚಿತ್ರದ ಕುರಿತಂತೆ ಮಾತನಾಡಿದರು.  ಪ್ರಮೋದ್ ಶೆಟ್ಟಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಮಂಜುನಾಥ್‌ ನಾಯ್ಡು ಅವರ ಛಾಯಾಗ್ರಹಣ ಹಾಗೂ ಸೋಹನ್‌ ಬಾಬು ಅವರ  ಸಂಗೀತ ಈ ಚಿತ್ರಕ್ಕಿದೆ.

TAGGED:13Pramod ShettyPuneethraghavendra rajkumarShrutiಪುನೀತ್ಪ್ರಮೋದ್ ಶೆಟ್ಟಿರಾಘವೇಂದ್ರ ರಾಜಕುಮಾರ್ಶ್ರುತಿ
Share This Article
Facebook Whatsapp Whatsapp Telegram

Cinema Updates

rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
55 minutes ago
Megastar Chiranjeevi 1 1
ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!
2 hours ago
Sees Kaddi
‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!
2 hours ago
divya madenur manu
ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ
2 hours ago

You Might Also Like

guest teacher class
Bengaluru City

51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

Public TV
By Public TV
48 minutes ago
Tamannaah Bhatia 1
Districts

ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

Public TV
By Public TV
60 minutes ago
H D Kumaraswamy 3
Karnataka

ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Public TV
By Public TV
1 hour ago
DK Shivakumar 5
Latest

ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

Public TV
By Public TV
1 hour ago
Angelo Mathews 2
Cricket

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

Public TV
By Public TV
2 hours ago
H D Kumaraswamy 1
Latest

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?