ಬೆಂಗಳೂರು: ಪೋಷಕರ ನಿರ್ಲಕ್ಷ್ಯಕ್ಕೆ 13 ವರ್ಷದ ಬಾಲಕ ಬಲಿ ಆಗಿರುವ ಘಟನೆ ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದೆ.
13 ವರ್ಷದ ಸಮೀರ್ ಮೃತ ಬಾಲಕ. ಸಮೀರ್ ಹಾಗೂ ಆತನ ಕುಟುಂಬದವರು ಮೂಲತಃ ನೇಪಾಳದವರು. ಇಂದು ಬೆಳಗ್ಗೆ 5 ಗಂಟೆಗೆ ಸಮೀರ್ ತಾಯಿ ಕಲಾವತಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ.
ಗ್ಯಾಸ್ ಲೀಕ್ ಆದ ಪರಿಣಾಮ ಮನೆಯಲ್ಲಿದ್ದ ಎರಡು ಮಕ್ಕಳ ಪೈಕಿ ಬಾಲಕ ಸಮೀರ್ ಗ್ಯಾಸ್ ಕುಡಿದು ಉಸಿರುಗಟ್ಟು ಮೃತಪಟ್ಟಿದ್ದಾನೆ. ಇನ್ನೊಬ್ಬ ಬಾಲಕ ಶಶೀರ್ (11) ತೀವ್ರ ಅಸ್ವಸ್ಥವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹೆಚ್ಚಿನ ಚಿಕೆತ್ಸೆಗೆ ಶಶೀರ್ನನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಗೆ ಪೋಷಕರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲದೇ ಗ್ಯಾಸ್ ಸಿಲಿಂಡರ್ ಲೀಕ್ ಆಗುವ ವೇಳೆ ಮನೆಯಲ್ಲಿ ಮಕ್ಕಳು ಹೊರತುಪಡಿಸಿ ಪೋಷಕರು ಯಾರೂ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv