ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದರು.ಇದನ್ನೂ ಓದಿ: 1 ಸಾವಿರ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ – ಹಂತಕನಿಗೆ 7 ವರ್ಷ ಶಿಕ್ಷೆ
Advertisement
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
Advertisement
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.ಇದನ್ನೂ ಓದಿ: ಆಫ್ರಿಕಾ ವಿರುದ್ಧ 50 ರನ್ಗಳ ಭರ್ಜರಿ ಜಯ – ಭಾನುವಾರ ನ್ಯೂಜಿಲೆಂಡ್ Vs ಭಾರತ ಫೈನಲ್