ಜೈಪುರ: ರಾಜಸ್ಥಾನದ (Rajasthan Electric Shock) ಕೋಟಾದಲ್ಲಿ ಮಹಾಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಶಾಕ್ನಿಂದ ಗಾಯಗೊಂಡಿದ್ದ 14 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಮಹಾಶಿವರಾತ್ರಿಯಲ್ಲಿ ಜಾಗರಣೆಗಿರುವ ಮಹತ್ವವೇನು?
ಇದೊಂದು ಅತ್ಯಂತ ದುಃಖಕರ ಘಟನೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರಿಗೆ ಶೇ.100 ರಷ್ಟು ಸುಟ್ಟ ಗಾಯಗಳಾಗಿವೆ. ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ. ಇದನ್ನೂ ಓದಿ: Shivaratri Speical – ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ? – ಏನಿದು ಪುರಾಣ ಕಥೆ?