ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ವೆಂಕಟರಮಣ್ ಎಂಬವರ ಮನೆಯ ಅಡುಗೆ ಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡು ಎಲ್ಲರಲ್ಲಿ ಭಯ ಹುಟ್ಟಿಸಿದೆ.
ಕಾರ್ಕಳ ತಾಲೂಕಿನ ಮುನಿಯಾಲುವಿನ ಐದು ಸೆಂಟ್ಸ್ ಕಾಲೊನಿಯಲ್ಲಿ ಭಾರೀ ಗಾತ್ರದ ಕಾಳಿಂಗ ಕಾಣಿಸಿಕೊಂಡಿತ್ತು. ಕಾರ್ಕಳದ ಉರಗತಜ್ಞ ಅನಿಲ್ ಪ್ರಭು ಹಾವನ್ನು ಹಿಡಿದು ಪಶ್ಚಿಮ ಘಟ್ಟಕ್ಕೆ ಬಿಟ್ಟಿದ್ದಾರೆ. ಈ ಕಳಿಂಗ ಸರ್ಪವನ್ನು ಮೂಕಾಂಬಿಕಾ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ದೊಡ್ಡ ಗಾತ್ರದ ಹಾವು ಸ್ಥಳೀಯರಲ್ಲಿ ಭಯ ಹುಟ್ಟಿಸಿತ್ತು. ಹಾವನ್ನು ಹಿಡಿದು ತೆಗೆದುಕೊಂಡು ಹೋದ ನಂತರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಉಡುಪಿ ಜಿಲ್ಲೆಗೆ ಕಾಳಿಂಗ ಸರ್ಪಗಳ ಹಾವಳಿ ಜಾಸ್ತಿಯಾಗಿದೆ. ಹಾವುಗಳ ಮಿಲನ ಕಾಲ ಇದಾಗಿರುವುದರಿಂದ ಜಿಲ್ಲೆಯ ಅಲ್ಲಲ್ಲಿ ಕಾಳಿಂಗ ಸರ್ಪಗಳು ಕಾಣಸಿಗುತ್ತಿದೆ ಅಂತ ಉರಗ ತಜ್ಞರು ಹೇಳಿದ್ದಾರೆ.