ಚಂಡೀಗಢ: ಹರಿಯಾಣದಲ್ಲಿ ಕೋಮು ಸಂಘರ್ಷ (Haryana Communal Violence) ದಿನದಿಂದ ದಿನಕ್ಕೆ ಉದ್ವಿಗ್ನಗೊಳ್ಳುತ್ತಿದೆ. ಈ ನಡುವೆ ಇಲ್ಲಿನ ಮೂರು ಜಿಲ್ಲೆಗಳ 14 ಹಳ್ಳಿಗಳಿಗೆ ಮುಸ್ಲಿಮರನ್ನ ಬಹಿಷ್ಕರಿಸಲು (Boycott Muslims) ನಿರ್ಧರಿಸಿರುವುದಾಗಿ 14 ಗ್ರಾಮ ಪಂಚಾಯಿತಿಗಳು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ ಬರೆದಿವೆ.
ಕಳೆದ ಜುಲೈ 31 ರಂದು ಆರಂಭವಾದ ಕೋಮು ಘರ್ಷಣೆಯಿಂದ ಮಹೇಂದ್ರಗಢ, ಜಜ್ಜರ್ ಮತ್ತು ರೇವಾರಿ ಜಿಲ್ಲೆಗಳಲ್ಲೂ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ 14 ಗ್ರಾಮ ಪಂಚಾಯಿತಿಗಳು ಮುಸ್ಲಿಮರನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿವೆ. ಕೋಮು ಘರ್ಷಣೆ ನಂತರ ಮುಸ್ಲಿಮರಿಗೆ ಮನೆ ಮತ್ತು ಅಂಗಡಿಗಳನ್ನ ಬಾಡಿಗೆಗೆ ನೀಡದಂತೆ ನಿರ್ಧಾರ ತೆಗೆದುಕೊಂಡಿದ್ದು ಪೊಲೀಸ್ ಇಲಾಖೆ (Police Department) ಹಾಗೂ ಜಿಲ್ಲಾಡಳಿತಕ್ಕೆ ಪತ್ರದ ಮೂಲಕ ತಿಳಿಸಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ
ನುಹ್ ಜಿಲ್ಲೆಯಲ್ಲಿ ಸಂಭವಿಸಿದ ಕೋಮು ಸಂಘರ್ಷ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಗುರುಗ್ರಾಮ್, ಸೋನಿಪತ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿತ್ತು. ಗಲಭೆಕೋರರ ಗುಂಪು ವಿವಿಧ ಪ್ರದೇಶಗಳಿಗೆ ನುಗ್ಗಿ ಹಾನಿಯುಂಟುಮಾಡಿತ್ತು. ಈವರೆಗೆ 50ಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದ್ದು 200ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಇದರೊಂದಿಗೆ ಹಿಂಸಾಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
14 ಹಳ್ಳಿಗಳ ಹಿಂದೂ ಮುಖಂಡರು ಬರೆದಿರುವ ಪತ್ರದಲ್ಲಿ ಮುಸ್ಲಿಂ ಸಮುದಾಯದ ಜನರಿಗೆ ಬಾಡಿಗೆ ಮನೆ, ಅಂಗಡಿಗಳನ್ನು ಬಾಡಿಗೆ ನೀಡುವುದಿಲ್ಲ. ಇಲ್ಲಿನ ಸಂಸ್ಥೆಗಳಲ್ಲೂ ಕೆಲಸ ನೀಡುವುದನ್ನ ನಿರಾಕರಿಸುವಂತೆ ಮನವಿ ಮಾಡಿದ್ದೇವೆ. ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತದೆ. ಹಿಂದೆಯೂ ಈ ರೀತಿ ಘೋಷಣೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್ ಗಾಂಧಿ ಗೆದ್ದಿದ್ದಾರೆ – ಸಂಸತ್ ಸದಸ್ಯತ್ವ ಅನರ್ಹತೆ ವಾಪಸ್ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ
ಈ ನಡುವೆ ಗುರುಗ್ರಾಮ್ ನಗರ ಪಾಲಿಕೆ ಕೌನ್ಸಿಲರ್ ಬ್ರಹ್ಮ್ ಯಾದವ್, ಜನರು ತಮ್ಮ ಆಸ್ತಿಯನ್ನು ಇತರರಿಗೆ ಬಾಡಿಗೆ ಅಥವಾ ಮಾರಾಟ ಮಾಡುವ ಮುನ್ನ ಗುರುತಿನ ಸಾಕ್ಷಿಗಳನ್ನ ಪರಿಶೀಲಿಸಬೇಕು. ಜಿಲ್ಲೆಯ ವಾಲ್ಮೀಕಿ ಜನಾಂಗದವರೇ ಮಾಂಸದ ಅಂಗಡಿಗಳನ್ನ ನಡೆಸಬೇಕು. ಮುಸ್ಲಿಮರು ನಡೆಸುತ್ತಿರುವ ಅಂಗಡಿಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
Web Stories