ಚೆನ್ನೈ: ಜಲ್ಲಿಕಟ್ಟು (Jallikattu) ಸ್ಪರ್ಧೆ ನೋಡಲು ಬಂದಿದ್ದ ಬಾಲಕನಿಗೆ ಹೋರಿ ತಿವಿದು ಬಾಲಕ (Boy) ಮೃತಪಟ್ಟ ಘಟನೆ ಧರ್ಮಪುರಿಯ (Dharmapuri) ತಡಂಗಂ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಗೋಕುಲ್ (14) ಎಂದು ಗುರುತಿಸಲಾಗಿದೆ. ಗೋಕುಲ್ ಸಂಬಂಧಿಕರೊಂದಿಗೆ ತಡಂಗಂ ಗ್ರಾಮದಲ್ಲಿ ನಡೆಯುತ್ತಿದ್ದ ಜಲ್ಲಿಕಟ್ಟು ಸ್ವರ್ಧೆಗೆ ಆಗಮಿಸಿದ್ದ. ಈ ವೇಳೆ ಸ್ಪರ್ಧೆಯಲ್ಲಿದ್ದ ಹೋರಿಯೊಂದು ಕೂತಿದ್ದ ಗೋಕುಲ್ ಹೊಟ್ಟೆಗೆ ತಿವಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಗೋಕುಲ್ನನ್ನು ಧರ್ಮಪುರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ಬಾಲಕ ಮೃತಪಟ್ಟಿದ್ದ. ಇದನ್ನೂ ಓದಿ: ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡೋ ಮುನ್ನ ಹುಷಾರ್ – ಹಣದ ಜೊತೆಗೆ ಓನರ್ ಎಸ್ಕೇಪ್
ಈ ಬಗ್ಗೆ ಧರ್ಮಪುರಿ ಠಾಣೆ ಪೊಲೀಸರು ಗೋಕುಲ್ ಗಾಯಗೊಂಡ ಬಗ್ಗೆ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಈ ವರ್ಷ ಜಲ್ಲಿಕಟ್ಟು ಸ್ವರ್ಧೆಗೆ ತಮಿಳುನಾಡಿನಲ್ಲಿ ಈವರೆಗೆ ನಾಲ್ಕು ಜನ ಬಲಿಯಾಗಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ – ನಂದಿನಿ ಬೂತ್ಗಳಲ್ಲಿ ಹಾಲು, ಮೊಸರು ಸಿಗದೇ ಜನ ವಾಪಸ್
ತಮಿಳುನಾಡಿನ ಜನತೆಗೆ ಬಹು ದೊಡ್ಡ ಹಬ್ಬ ಅಂದರೆ ಪೊಂಗಲ್. ವರ್ಷದ ಆರಂಭದಲ್ಲಿ ಬರುವ ಪೊಂಗಲ್ ಹಬ್ಬದ ವೇಳೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಏರ್ಪಡಿಸಲಾಗುತ್ತದೆ. ಆ ಬಳಿಕ ಜಲ್ಲಿಕಟ್ಟು ಸ್ವರ್ಧೆ ನಡೆಯುತ್ತಿರುತ್ತದೆ. ತಮಿಳುನಾಡಿನ ದೇಸಿ ಕ್ರೀಡೆಯಾದ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಾಣಿಹಿಂಸೆ ಕಾರಣದಿಂದ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು. ಆ ಬಳಿಕ ತಮಿಳುನಾಡು ಸರ್ಕಾರದ ಕಾನೂನು ಹೋರಾಟದ ಬಳಿಕ ಇದೀಗ ಮತ್ತೆ ಜಲ್ಲಿಕಟ್ಟು ಕ್ರೀಡೆ ತಮಿಳುನಾಡಿನಲ್ಲಿ ನಡೆಯುತ್ತಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k