ಜಲ್ಲಿಕಟ್ಟು ಸ್ಪರ್ಧೆ – ಹೋರಿ ತಿವಿದು ಮೃತಪಟ್ಟ ಬಾಲಕ

Public TV
1 Min Read
Jallikattu Gokul

ಚೆನ್ನೈ: ಜಲ್ಲಿಕಟ್ಟು (Jallikattu) ಸ್ಪರ್ಧೆ ನೋಡಲು ಬಂದಿದ್ದ ಬಾಲಕನಿಗೆ ಹೋರಿ ತಿವಿದು ಬಾಲಕ (Boy) ಮೃತಪಟ್ಟ ಘಟನೆ ಧರ್ಮಪುರಿಯ (Dharmapuri) ತಡಂಗಂ ಗ್ರಾಮದಲ್ಲಿ ನಡೆದಿದೆ.

Jallikattu 4

ಮೃತಪಟ್ಟ ಬಾಲಕನನ್ನು ಗೋಕುಲ್ (14) ಎಂದು ಗುರುತಿಸಲಾಗಿದೆ. ಗೋಕುಲ್ ಸಂಬಂಧಿಕರೊಂದಿಗೆ ತಡಂಗಂ ಗ್ರಾಮದಲ್ಲಿ ನಡೆಯುತ್ತಿದ್ದ ಜಲ್ಲಿಕಟ್ಟು ಸ್ವರ್ಧೆಗೆ ಆಗಮಿಸಿದ್ದ. ಈ ವೇಳೆ ಸ್ಪರ್ಧೆಯಲ್ಲಿದ್ದ ಹೋರಿಯೊಂದು ಕೂತಿದ್ದ ಗೋಕುಲ್ ಹೊಟ್ಟೆಗೆ ತಿವಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಗೋಕುಲ್‍ನನ್ನು ಧರ್ಮಪುರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ಬಾಲಕ ಮೃತಪಟ್ಟಿದ್ದ. ಇದನ್ನೂ ಓದಿ: ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡೋ ಮುನ್ನ ಹುಷಾರ್ – ಹಣದ ಜೊತೆಗೆ ಓನರ್ ಎಸ್ಕೇಪ್

Gokul

ಈ ಬಗ್ಗೆ ಧರ್ಮಪುರಿ ಠಾಣೆ ಪೊಲೀಸರು ಗೋಕುಲ್ ಗಾಯಗೊಂಡ ಬಗ್ಗೆ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಈ ವರ್ಷ ಜಲ್ಲಿಕಟ್ಟು ಸ್ವರ್ಧೆಗೆ ತಮಿಳುನಾಡಿನಲ್ಲಿ ಈವರೆಗೆ ನಾಲ್ಕು ಜನ ಬಲಿಯಾಗಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ – ನಂದಿನಿ ಬೂತ್‌ಗಳಲ್ಲಿ ಹಾಲು, ಮೊಸರು ಸಿಗದೇ ಜನ ವಾಪಸ್

jallikattu 1

ತಮಿಳುನಾಡಿನ ಜನತೆಗೆ ಬಹು ದೊಡ್ಡ ಹಬ್ಬ ಅಂದರೆ ಪೊಂಗಲ್. ವರ್ಷದ ಆರಂಭದಲ್ಲಿ ಬರುವ ಪೊಂಗಲ್ ಹಬ್ಬದ ವೇಳೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಏರ್ಪಡಿಸಲಾಗುತ್ತದೆ. ಆ ಬಳಿಕ ಜಲ್ಲಿಕಟ್ಟು ಸ್ವರ್ಧೆ ನಡೆಯುತ್ತಿರುತ್ತದೆ. ತಮಿಳುನಾಡಿನ ದೇಸಿ ಕ್ರೀಡೆಯಾದ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಾಣಿಹಿಂಸೆ ಕಾರಣದಿಂದ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು. ಆ ಬಳಿಕ ತಮಿಳುನಾಡು ಸರ್ಕಾರದ ಕಾನೂನು ಹೋರಾಟದ ಬಳಿಕ ಇದೀಗ ಮತ್ತೆ ಜಲ್ಲಿಕಟ್ಟು ಕ್ರೀಡೆ ತಮಿಳುನಾಡಿನಲ್ಲಿ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *