Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

Bengaluru City

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

Public TV
Last updated: January 20, 2021 3:59 pm
Public TV
Share
3 Min Read
tender web 1
SHARE

ಬೆಂಗಳೂರು: ಕೋವಿಡ್ ನಿಂದಾಗಿ ರಾಜ್ಯ ಸರಕಾರವು ಗುತ್ತಿಗೆದಾರರ ವಹಿವಾಟುಗಳಿಗೆ ತಾತ್ಕಾಲಿಕವಾಗಿ ಕೆಲವು ತಿಂಗಳುಗಳಿಂದ ಹಲವು ನಿರ್ಬಂಧಗಳನ್ನು ಹೇರಿದೆ. ಇದರ ಪರಿಣಾಮ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ನೋಂದಾಯಿತ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಈಡಾಗಲಿದ್ದು, ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

tender web 3

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್ ಗಳಿಗೆ ಹಣ ಬಿಡುಗಡೆ ಮಾಡುವುದು ಹಾಗೂ ಪ್ಯಾಕೇಜ್ ಪದ್ದತಿಯ ಅಡಿಯಲ್ಲಿ ಟೆಂಡರ್ ಕರೆಯುವುದನ್ನು ರದ್ದುಪಡಿಸುವಂತೆ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳಲ್ಲಿ, ಮಾನ್ಯ ಸಚಿವರುಗಳಲ್ಲಿ ಹಾಗೂ ಉನ್ನತ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಹೇಳಿದ್ದಾರೆ.

tender web 2

ಗುತ್ತಿಗೆದಾರರ ಬೇಡಿಕೆಗಳು ಏನು?
* ಟೆಂಡರ್‍ನಲ್ಲಿ ಭಾಗವಹಿಸದಂತೆ ನಿರ್ಬಂಧಿಸುತ್ತಿರುವ ಕುರಿತು : ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಕೆಲವು ಅಧಿಕಾರಿಗಳು ಗುತ್ತಿಗೆದಾರರಿಗೆ ಸರಕಾರಿ ಟೆಂಡರ್‍ಗಳಲ್ಲಿ ಭಾಗವಹಿಸದಂತೆ ನಿರ್ಬಂಧವನ್ನು ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಬಿಡ್ ಸಲ್ಲಿಸಿದ ನಂತರವೂ ಟೆಂಡರನ್ನು ಹಿಂಪಡೆಯುವಂತೆ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದರಿಂದ ಟೆಂಡರ್‍ನಲ್ಲಿ ಸ್ಪರ್ಧಾತ್ಮಕ ದರಗಳಿಂದ ವಂಚಿತವಾಗಿ ಹೆಚ್ಚಿನ ಪಾರದರ್ಶಕತೆಗೆ ಅವಕಾಶವಿಲ್ಲದೆ ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗುತ್ತಿದ್ದು ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದರು.

*ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಪಾವತಿ: ಕಳೆದ ಹಲವಾರು ತಿಂಗಳುಗಳಿಂದ ಸರಕಾರದ ಹಲವಾರು ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಿಲ್ಲುಗಳನ್ನು ನೀಡಲಾಗಿರುವುದಿಲ್ಲ. ಬಾಕಿ ಬಿಲ್ ಗಳಿಗೆ ಹಣಪಾವತಿಸುವ ಸಮಯದಲ್ಲಿ ಸರಕಾರದ ಆದೇಶ ಸಂಖ್ಯೆ: ನಂ.ಪಿಡಬ್ಲೂಡಿ/260/ಎಸ್‍ಓಎಫ್‍ಸಿ/2001(ಪಿ) 2000 ಸೆಪ್ಟೆಂಬರ್ 25 ರಲ್ಲಿ ಸೂಚಿಸಿರುವಂತೆ ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಶೇ.80 ರಷ್ಟು ಹಣ ಬಿಡುಗಡೆ ಮಾಡುವುದನ್ನು ಜೇಷ್ಠತೆ ಆಧಾರದ ಮೇಲೆ ಕಡ್ಡಾಯ ಮಾಡಿದೆ. ಈ ಆಧಾರದಲ್ಲಿ ಅಂದರೆ ಡಿ.ಬಿ.ಆರ್ ಸಂಖ್ಯೆ ಅನುಗುಣವಾಗಿ ಜೇಷ್ಠತೆ ಮೇಲೆ ಹಣ ಬಿಡುಗಡೆ ಮಾಡಬೇಕು. ಅಲ್ಲದೆ, ಸ್ಟಾಂಡರ್ಡ್ ಬಿಡ್ ಗೆ ಸೇರಿಸಿ ನೀಡಬೇಕು ಎಂದರು.

* ಪ್ಯಾಕೇಜ್ ಪದ್ದತಿಯನ್ನು ರದ್ದಗೊಳಿಸಿ: ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಗಳನ್ನು ಕರೆಯುತ್ತಿರುವುದರಿಂದ ನಮ್ಮ ರಾಜ್ಯದ ಸ್ಥಳೀಯ ಗುತ್ತಿಗೆದಾರರಿಗೆ ಟೆಂಡರ್‍ನಲ್ಲಿ ಭಾಗವಹಿಸದಂತಹ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಇದು ಹೊರ ರಾಜ್ಯದ ಗುತ್ತಿಗೆದಾರರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಆದ್ದರಿಂದ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಕರೆಯುವುದನ್ನು ನಿಲ್ಲಿಸಿ ಒಂದೊಂದು ಕಾಮಗಾರಿಗಳಿಗೂ ಪ್ರತ್ಯೇಕವಾಗಿ ಟೆಂಡರ್ ಕರೆಯುವಂತೆ ಅವರು ಮನವಿ ಮಾಡಿದರು.

* ಮಾದರಿ ಟೆಂಡರ್ ದಾಖಲೆ ರಚನಾ ಸಮಿತಿಗೆ ಮನವಿ: ದ್ವಿ ಲಕೋಟೆ ಪ್ಯಾಕೇಜ್ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ಅಡಿಯಲ್ಲಿ ಸರಿಯಾದ ಮಾನದಂಡಗಳಿಲ್ಲದೆ ಎಲ್ಲಾ ಷರತ್ತುಗಳನ್ನು ತಮ್ಮ ಇಚ್ಛೆಗೆ ಬಂದಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸುತ್ತಿರುವುದು ವಿವಿಧ ಸರಕಾರಿ ಇಲಾಖೆಗಳಲ್ಲಿ ಕಂಡುಬಂದಿದೆ. ಕರ್ನಾಟಕ ರಾಜ್ಯ ಟೆಂಡರ್‍ನಲ್ಲಿ ಭಾಗವಹಿಸುವ ಗುತ್ತಿಗೆದಾರರಿಗೆ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ನ ಏಕರೂಪ ನಿಯಮವನ್ನು ಇಡಿ ರಾಜ್ಯಕ್ಕೆ ಅನ್ವಯವಾಗುವಂತಹ ನಿಯಮಾವಳಿಗಳನ್ನು ರೂಪಿಸಬೇಕು.

ಇದೇ ವೇಳೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿಎಂ ರವೀಂದ್ರ ಮಾತನಾಡಿ, ನೆರೆರಾಜ್ಯವಾದ ಕೇರಳದಲ್ಲಿ ರೂ.5.00 ಕೋಟಿವರೆಗಿನ ಕಾಮಗಾರಿಯನ್ನು ಒಂದು ಲಕೋಟೆ ಪದ್ದತಿಯಲ್ಲಿ ಯಾವುದೇ ಪೂರ್ವಭಾಗಿ ಷರತ್ತುಗಳಿಲ್ಲದೆ ಗುತ್ತಿಗೆದಾರರು ನೊಂದಾವಣಿಯಾಗಿರುವ ಆಯಾ ದರ್ಜೆಗೆ ಅನುಗುಣವಾಗಿ ಟೆಂಡರ್‍ನಲ್ಲಿ ಭಾಗವಹಿಸುವ ನಿಯಮ ಜಾರಿಯಲ್ಲಿರುತ್ತದೆ. ಇದೇ ಮಾದರಿಯ ನಿಯಮವನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಸ್ಥಳೀಯ ನಿವಾಸಿಗಳಾದ ರಾಜ್ಯದ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಕಾಮಗಾರಿ ಪಡೆಯುವಂತಹ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

TAGGED:contractorDemandsprotestPublic TVtenderಗುತ್ತಿಗೆದಾರಟೆಂಡರ್ಪಬ್ಲಿಕ್ ಟಿವಿ Bangaloreಪ್ರತಿಭಟನೆಬೆಂಗಳೂರುಬೇಡಿಕೆಗಳು
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
4 minutes ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
18 minutes ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
19 minutes ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
25 minutes ago
Vijayapura Police
Districts

22 ಕೇಸ್‌ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ

Public TV
By Public TV
29 minutes ago
Rescue of a two year old child who fell into a well in Sirsi
Districts

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?